ನಟ ಡಾಲಿ ಧನಂಜಯ 
ಸಿನಿಮಾ ಸುದ್ದಿ

'ಆಚರಣೆಗಳು ಹಿರಿಯರಿಗೆ ಖುಷಿ ಕೊಡುವಂತಹ ನಂಬಿಕೆಗಳು ಎಂದಾಗ ಪಾಲಿಸುವುದರಲ್ಲಿ ತಪ್ಪೇನಿದೆ?': ಮದುವೆ ಟ್ರೋಲ್ ಕುರಿತು ನಟ Daali Dhananjay

ನಟ ಡಾಲಿ ಧನಂಜಯ ಅವರು ತಮ್ಮದೇ ನಿಲುವು ಮತ್ತು ಸಿದ್ಧಾಂತಗಳನ್ನು ಹೊಂದಿದ್ದು, ಈ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ಕೆಲವು ಮೌಢ್ಯಗಳ ವಿರುದ್ಧ ಧ್ವನಿ ಎತ್ತಿದ್ದರು.

ಬೆಂಗಳೂರು: ಮೌಢ್ಯಾಚರಣೆ-ಕಂದಾಚಾರದ ವಿರುದ್ಧ ವಿರೋಧ ವ್ಯಕ್ತಪಡಿಸುತ್ತಿದ್ದ ನಟ ಡಾಲಿ ಧನಂಜಯ ದೇಗುಲ ಸೆಟ್ ನಲ್ಲಿ ತಮ್ಮ ಮದುವೆಯಾಗಿದ್ದಕ್ಕೆ ವ್ಯಾಪಕ ಟ್ರೋಲ್ ಗಳು ಎದುರಾಗಿದ್ದವು. ಇದೀಗ ಈ ಟ್ರೋಲ್ ಗಳಿಗೆ ನಟ ಡಾಲಿ ಧನಂಜಯ ಪ್ರತಿಕ್ರಿಯೆ ನೀಡಿದ್ದಾರೆ.

ಹೌದು.. ನಟ ಡಾಲಿ ಧನಂಜಯ ಅವರು ತಮ್ಮದೇ ನಿಲುವು ಮತ್ತು ಸಿದ್ಧಾಂತಗಳನ್ನು ಹೊಂದಿದ್ದು, ಈ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ಕೆಲವು ಮೌಢ್ಯಗಳ ವಿರುದ್ಧ ಅವರು ಧ್ವನಿ ಎತ್ತಿದ್ದರು. ಇದೇ ವಿಚಾರಗಳನ್ನು ಮುಂದಿಟ್ಟು ಕೊಂಡು ಈಗ ಅವರ ಮದುವೆ ಬಗ್ಗೆ ಕೆಲವರು ಟೀಕೆ ಮಾಡಿದ್ದಾರೆ. ಫೆಬ್ರವರಿ 15 ಮತ್ತು 16ರಂದು ನಡೆದ ವಿವಾಹ ಸಮಾರಂಭದಲ್ಲಿ ಅನೇಕ ಆಚರಣೆಗಳನ್ನು ಡಾಲಿ ಧನಂಜಯ ಪಾಲಿಸಿದ್ದಾರೆ. ಇದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಪ್ರಶ್ನೆ ಮಾಡಿದ್ದಾರೆ.

ಟ್ರೋಲ್ ಗಳಿಗೆ ಡಾಲಿ ಪ್ರತಿಕ್ರಿಯೆ

ಇನ್ನು ತಮ್ಮ ವಿರುದ್ದ ಕೇಳಿ ಬರುತ್ತಿರುವ ಟ್ರೋಲ್ ಗಳಿಗೆ ಸಕಾರಾತ್ಮಕವಾಗಿಯೇ ಪ್ರತಿಕ್ರಿಯೆ ನೀಡಿರುವ ನಟ ಧನಂಜಯ, 'ಈ ಆಚರಣೆಗಳು ನಮ್ಮ ಹಿರಿಯರಿಗೆ ಖುಷಿ ಕೊಡುವಂತಹ ನಂಬಿಕೆಗಳು ಎಂದಾಗ ಪಾಲಿಸುವುದರಲ್ಲಿ ಏನೋ ತಪ್ಪು ಇದೆ ಎಂದು ನನಗೆ ಅನಿಸುತ್ತಿಲ್ಲ. ಎಲ್ಲದಕ್ಕೂ ಉತ್ತರ ಕೊಡಲು ನನಗೆ ಬರಲ್ಲ. ಆದರೆ ಒಂದು ಘಟನೆ ಬಗ್ಗೆ ಹೇಳುತ್ತೇನೆ. ಆಸ್ತಿಕತೆ ಮತ್ತು ನಾಸ್ತಿಕತೆ ಬಗ್ಗೆ ಬಂದಾಗ ಕಾಯುವಂತಹ ನಂಬಿಕೆಗಳು ಬೇರೆ, ಮೂಢ ನಂಬಿಕೆಗಳು ಬೇರೆ. ಮೌಢ್ಯವನ್ನು ನಾವು ಖಂಡಿತ ವಿರೋಧಿಸಬೇಕು’ ಎಂದು ತಮ್ಮ ನಿಲುವು ಸಮರ್ಥಿಸಿಕೊಂಡಿದ್ದಾರೆ.

ಅಂತೆಯೇ ‘ಆಚರಣೆಯಲ್ಲಿ ತುಂಬ ರೀತಿಯ ಆಚರಣೆಗಳು ಇವೆ. ಉದಾಹರಣೆಗೆ, ಕೆಂಡ ಹಾಯುವಾಗ ನಮ್ಮ ಚಿಕ್ಕಪ್ಪ ಒಂದು ಪೂಜೆ ಮಾಡಿದರು. ನನಗೆ ಅದರ ಬಗ್ಗೆ ಗೊತ್ತಿಲ್ಲ. ಅದು ಮಡಿವಾಳ ಪದ್ಧತಿಯಲ್ಲಿ ಮಾಡುವುದು ಅಂತ ಕೆಲವರು ಹೇಳಿದರು. ಅದನ್ನು ತಮ್ಮ ಚಿಕ್ಕಪ್ಪ ತುಂಬ ಚೆನ್ನಾಗಿ ಮಾಡಿದರು. ಆ ರೀತಿ ತಮ್ಮ ಆಚರಣೆಗಳು ಮಿಕ್ಸ್ ಆಗಿವೆ. ಕೆಂಡ ಹಾಯುವುದನ್ನು ನಾನು ಚಿಕ್ಕ ವಯಸ್ಸಿನಿಂದ ಜಾತ್ರೆಯಲ್ಲಿ ನೋಡಿಕೊಂಡು ಬಂದಿದ್ದೇನೆ. ಅದು ನನಗೆ ಜನಪದ. ಆ ಪ್ರಕ್ರಿಯೆಯನ್ನು ಒಂದು ಮಗು ರೀತಿ ನಾನು ಎಂಜಾಯ್ ಮಾಡಿದ್ದೇನೆ. ಅವುಗಳಲ್ಲಿ ನನಗೆ ತಪ್ಪು ಕಂಡಿಲ್ಲ’ ಎಂದು ಹೇಳಿದ್ದಾರೆ.

ಅಲ್ಲದೆ ‘ಆಸ್ತಿಕತೆ ಮತ್ತು ನಾಸ್ತಿಕತೆ ಬಗ್ಗೆ ನನ್ನ ಜೀವನದ ಉದಾಹರಣೆಯನ್ನೇ ಕೊಡುತ್ತೇನೆ. ನನ್ನ ತಾಯಿ ಆಸ್ಪತ್ರೆಯಲ್ಲಿ ಅಡ್ಮಿಟ್ ಆದಾಗ ಒಂದು ಸಣ್ಣ ಸರ್ಜರಿ ಇತ್ತು. ನನಗೆ ಮತ್ತು ವೈದ್ಯರಿಗೆ ವಿಜ್ಞಾನ ಗೊತ್ತು. ಆದರೆ ಆಪರೇಷನ್​ ಥಿಯೇಟರ್​ಗೆ ಹೋಗುವಾಗ ನನ್ನ ತಾಯಿ ಜೇನುಕಲ್ಲು ಸಿದ್ದಪ್ಪ ಅಂತ ಕೈ ಮುಗಿಯುತ್ತಾರೆ. ಅವರಿಗೆ ಜೇನುಕಲ್ಲು ಸಿದ್ಧಪ್ಪ ಒಂದು ಶಕ್ತಿ. ಅವರ ನಂಬಿಕೆ ಮತ್ತು ಶಕ್ತಿಯನ್ನು ನಾನು ಗೌರವಿಸಬೇಕು. ಎಲ್ಲದರಲ್ಲೂ ತಪ್ಪು ಹುಡುಕಿದರೆ ನಾವು ಒಟ್ಟಿಗೆ ಸೇರೋಕೆ ಆಗಲ್ಲ ಎಂದು ಹೇಳಿದರು.

'ಸಾಕಷ್ಟು ವಿಷಯ ಇದೆ, ಮಾತಾಡೋಕೆ ಈಗ ಸಮಯ ಅಲ್ಲ'

ಮಾತು ಮುಂದುವರೆಸಿದ ಡಾಲಿ, 'ಸಾಕಷ್ಟು ವಿಷಯ ಇದೆ. ಅದನ್ನೆಲ್ಲ ನಾನು ಈಗ ಮಾತನಾಡಲು ಹೋದರೆ ಮದುವೆ ಬಿಟ್ಟು ಬೇರೆ ಬೇರೆ ಚರ್ಚೆ ಶುರುವಾಗುತ್ತದೆ. ನನ್ನನ್ನು ಪ್ರಶ್ನೆ ಮಾಡುತ್ತಿರುವವರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ಮತ್ತು ಆಶೀರ್ವಾದ ಕೂಡ ಇರಲಿ. ನಾನು ಕೂಡ ಇನ್ನೂ ಕಲಿಯುತ್ತಾ ಇರುತ್ತೇನೆ, ಬೆಳೆಯುತ್ತಾ ಇರುತ್ತೇನೆ. ಅನುಭವಗಳಿಂದ ಹೊರಗೆ ಉಳಿಯೋಕೆ ನನಗೆ ಆಗಲ್ಲ. ನಾನೊಬ್ಬ ಕಲಾವಿದ. ನನಗೆ ಎಲ್ಲ ಅನುಭವಗಳು ತುಂಬ ಮುಖ್ಯ’ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Madhya Pradesh: ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ದುರಂತ, ಮಹಿಳೆಯರು, ಮಕ್ಕಳು ಸೇರಿದಂತೆ 14 ಮಂದಿ ಸಾವು!Video

ಈ ಬಾರಿ 'ಮೈಸೂರು ದಸರಾ' ಯಶಸ್ವಿ; ಬೆಳೆ ಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಸಮೀಕ್ಷೆ ನಂತರ ಪರಿಹಾರ: ಸಿಎಂ ಸಿದ್ದರಾಮಯ್ಯ

'RSS ನಲ್ಲಿ ಒಬ್ಬ ವ್ಯಕ್ತಿಯೂ ಇಲ್ಲ': ಪ್ರಧಾನಿ ಮೋದಿ ಹೇಳಿಕೆಗೆ ಓವೈಸಿ ತಿರುಗೇಟು!

2026 T20 World Cup: ಅರ್ಹತೆ ಪಡೆದ ನಮೀಬಿಯಾ, ಜಿಂಬಾಬ್ವೆ!

ಅಂಬೇಡ್ಕರ್ ಸಿದ್ಧಾಂತದಂತೆ ಬದುಕಿದ್ದೇವೆ; RSS ಕಾರ್ಯಕ್ರಮಕ್ಕೆ ಹೋಗಲ್ಲ: CJI ಗವಾಯಿ ತಾಯಿ ಪತ್ರ

SCROLL FOR NEXT