ಶಭಾಷ್ ಬಡ್ಡಿಮಗ್ನೆ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ತೆರೆಗೆ ಬರಲಿದೆ 'ಶಭಾಷ್ ಬಡ್ಡಿಮಗ್ನೆ': ರೊಮ್ಯಾಂಟಿಕ್ ಲುಕ್‌ನಲ್ಲಿ ಪ್ರಮೋದ್ ಶೆಟ್ಟಿ ಮಿಂಚಿಂಗ್!

ಕಿಶನ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಚೈತ್ರ ಪ್ರಕಾಶ್ ನಿರ್ಮಿಸಿರುವ ಶಭಾಷ್ ಬಡ್ಡಿಮಗ್ನೆ ಚಿತ್ರವು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ನಡೆದ 1980ರ ದಶಕದ ನೈಜ ಘಟನೆಯಿಂದ ಸ್ಫೂರ್ತಿ ಪಡೆದಿದೆ.

ನಟ ಪ್ರಮೋದ್ ಶೆಟ್ಟಿ ಇದೀಗ ಪೊಲೀಸ್ ಆಗಿ ಕಾಣಿಸಿಕೊಂಡಿದ್ದರೂ, ಇದೀಗ ಹೊಸ ಅವತಾರದಲ್ಲಿ ಪ್ರೇಕ್ಷಕರ ಎದುರು ಬರಲು ಸಜ್ಜಾಗಿದ್ದಾರೆ. ಬಿಎಸ್ ರಾಜಶೇಖರ್ ನಿರ್ದೇಶನದ 'ಶಭಾಷ್ ಬಡ್ಡಿಮಗ್ನೆ' ಚಿತ್ರದಲ್ಲಿ ರೊಮ್ಯಾಂಟಿಕ್ ಲುಕ್‌ನಲ್ಲಿ ನಟಿಸಿದ್ದಾರೆ. ಚಿತ್ರವು ಫೆಬ್ರುವರಿ 28ರಂದು ಚಿತ್ರವು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ.

ಚಿತ್ರವು ತನ್ನ ಗೆಳೆಯರ ದೃಷ್ಟಿಯಲ್ಲಿ ಅಸಮರ್ಥನಾಗಿರುವ ಪೊಲೀಸ್ ಅಧಿಕಾರಿಯ ಕಥೆಯನ್ನು ಹೇಳುತ್ತದೆ. ಆದರೆ, ಅಂತಿಮವಾಗಿ ಒಂದು ಪ್ರಮುಖ ಪ್ರಕರಣವನ್ನು ಪರಿಹರಿಸುವಲ್ಲಿ ಕೊನೆಗೊಳ್ಳುತ್ತದೆ.

'ನಾನು ವಿವಿಧ ಪೊಲೀಸ್ ಪಾತ್ರಗಳನ್ನು ನಿರ್ವಹಿಸಿದ್ದೇನೆ. ಆದರೆ, ಈ ಚಿತ್ರದಲ್ಲಿ ಸೋಂಬೇರಿ ಪೊಲೀಸ್ ಅಧಿಕಾರಿಯಾಗಿ ನಟಿಸುವುದು ಸಂಪೂರ್ಣವಾಗಿ ಹೊಸದು ಮತ್ತು ಸವಾಲಿನ ಸಂಗತಿಯಾಗಿದೆ. ಸ್ಕ್ರಿಪ್ಟ್‌ನಲ್ಲಿರುವ ಕುತೂಹಲಕಾರಿ ಮತ್ತು ಹಾಸ್ಯಮಯ ಅಂಶಗಳ ಬಗ್ಗೆ ನಾನು ಉತ್ಸುಕನಾಗಿದ್ದೆ ಮತ್ತು ಈ ಪಾತ್ರ ಬೇಡ ಎಂದು ಹೇಳಲು ಸಾಧ್ಯವಾಗಲಿಲ್ಲ' ಎಂದು ಹೇಳುತ್ತಾರೆ ಪ್ರಮೋದ್.

'ಇಡೀ ಚಿತ್ರವು ಪೊಲೀಸ್ ಠಾಣೆಯಲ್ಲಿ ನಡೆಯುತ್ತದೆ ಮತ್ತು ನನ್ನ ಪಾತ್ರವು ನಿಷ್ಪ್ರಯೋಜಕವಾಗಿ ಕಂಡರೂ, ನನ್ನ ಪಾತ್ರವು ಪ್ರಕರಣವೊಂದನ್ನು ಪರಿಹರಿಸುತ್ತದೆ. ಹೇಗೆ ಎಂಬುದನ್ನು ತಿಳಿಯಲು ಪ್ರೇಕ್ಷಕರು ಚಿತ್ರವನ್ನು ನೋಡಬೇಕು' ಎಂದು ಹೇಳುತ್ತಾರೆ.

ಕಿಶನ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಚೈತ್ರ ಪ್ರಕಾಶ್ ನಿರ್ಮಿಸಿರುವ ಶಭಾಷ್ ಬಡ್ಡಿಮಗ್ನೆ ಚಿತ್ರವು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ನಡೆದ 1980ರ ದಶಕದ ನೈಜ ಘಟನೆಯಿಂದ ಸ್ಫೂರ್ತಿ ಪಡೆದಿದೆ.

ಚಿತ್ರಕ್ಕೆ ರಾಜಶೇಖರ್ ಕಥೆ ಬರೆದಿದ್ದಾರೆ. ಇದು ಪೊಲೀಸ್ ಅಧಿಕಾರಿಯ ಪ್ರಯಾಣವನ್ನು ಅನುಸರಿಸುತ್ತದೆ. ಆತ ತನ್ನ ಕೆಲಸಕ್ಕೆ ಸಮರ್ಪಿತರಾಗಿದ್ದರೂ, ಆತನ ವೈಯಕ್ತಿಕ ಜೀವನದಲ್ಲಿ ಹೆಚ್ಚಿನ ಆಸಕ್ತಿ ತೋರಿಸುತ್ತಾರೆ. ಅವರ ಅಧಿಕಾರ ವ್ಯಾಪ್ತಿಯಲ್ಲಿರುವ ಅಪರಾಧವು ಹಾಸ್ಯ, ಪಂಚ್ ಡೈಲಾಗ್‌ಗಳು ಮತ್ತು ಕುತೂಹಲಕಾರಿ ತಿರುವುಗಳಿಂದ ಕೂಡಿದ ತನಿಖೆಗೆ ಕಾರಣವಾಗುತ್ತದೆ ಎಂದು ನಿರ್ದೇಶಕರು ಹೇಳುತ್ತಾರೆ.

ಆದ್ಯಪ್ರಿಯಾ ನಾಯಕಿಯಾಗಿ ನಟಿಸಿದ್ದು, ಈ ಚಿತ್ರದ ಮೂಲಕ ಸಾಮ್ರಾಟ್ ಶೆಟ್ಟಿ ಪದಾರ್ಪಣೆ ಮಾಡುತ್ತಿದ್ದಾರೆ. ಚಿತ್ರದ ತಾರಾಗಣದಲ್ಲಿ ಕಾವ್ಯ ಪ್ರಕಾಶ್, ರವಿತೇಜ, ಮಿತ್ರ, ಶಂಕರ್ ಅಶ್ವತ್ಥ್ ಮತ್ತು ಪ್ರಕಾಶ್ ತೂಮಿನಾಡ್ ಕೂಡ ಇದ್ದಾರೆ. ಚಿತ್ರಕ್ಕೆ ಪ್ರಶಾಂತ್ ಸಿದ್ದಿ ಸಂಗೀತ ನೀಡಿದ್ದು, ಅಣ್ಣಾಜಿ ನಾಗರಾಜ್ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT