ಪೋಸಾನಿ ಕೃಷ್ಣ ಮುರಳಿ  
ಸಿನಿಮಾ ಸುದ್ದಿ

ಹೈದರಾಬಾದ್: ತೆಲುಗು ಹಿರಿಯ ನಟ ಪೋಸಾನಿ ಕೃಷ್ಣ ಮುರಳಿ ಬಂಧನ

ಸದ್ಯ ನಟನನ್ನು ಬಂಧಿಸಿರುವ ಪೊಲೀಸರು ರಾಜಂಪೇಟೆಯ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲು ಮುಂದಾಗಿದ್ದಾರೆ.

ಅಮರಾವತಿ: ತೆಲುಗು ಚಿತ್ರರಂಗದ ಹಿರಿಯ ನಟ ಹಾಗೂ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಸದಸ್ಯ ಪೋಸಾನಿ ಕೃಷ್ಣ ಮುರಳಿ ಅವರನ್ನು ಫೆ.26ರ ರಾತ್ರಿ 8:45ರ ಸುಮಾರಿಗೆ ಆಂಧ್ರ ಪ್ರದೇಶದ ಪೊಲೀಸರು ಹೈದರಾಬಾದ್ ನಲ್ಲಿ ಬಂಧಿಸಿದ್ದಾರೆ.

ನಟನ ವಿರುದ್ಧ ಓಬುಲವಾರಿಪಲ್ಲಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 196, 353(2), ಮತ್ತು 111 ಹಾಗೂ ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ನಟನನ್ನು ಬಂಧಿಸಿರುವ ಪೊಲೀಸರು ರಾಜಂಪೇಟೆಯ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲು ಮುಂದಾಗಿದ್ದಾರೆ.

ಸಮುದಾಯವೊಂದರ ವಿರುದ್ಧ ನಟ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯು ಎರಡು ಗುಂಪುಗಳ ನಡುವೆ ವೈಷಮ್ಯಕ್ಕೂ ಕಾರಣವಾಯಿತು. ಈ ಹಿನ್ನೆಲೆ ಪೋಸಾನಿ ಕೃಷ್ಣ ವಿರುದ್ಧ ಕೇಸ್‌ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸಾನಿ ಕೃಷ್ಣ ಅವರು ಕಾನೂನು ಸಂಕಷ್ಟ ಎದುರಿಸುತ್ತಿರುವುದು ಇದೇ ಮೊದಲೇನಲ್ಲ. 2024ರ ನವೆಂಬರ್‌ನಲ್ಲಿ ಸಿಎಂ ಚಂದ್ರಬಾಬು ನಾಯ್ಡು ವಿರದ್ಧವೂ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಆಗಲೂ ತಮ್ಮ ವಿರುದ್ಧ ಕೇಸ್‌ ದಾಖಲಾಗಿತ್ತು.

ಸದ್ಯ ಪೊಲೀಸರು ನಟನನ್ನು ಆಂಧ್ರಪ್ರದೇಶಕ್ಕೆ ಶಿಫ್ಟ್ ಮಾಡುತ್ತಿದ್ದಾರೆ. ಗನ್ನವರಂನ ಮಾಜಿ ಶಾಸಕ ಮತ್ತು ವೈಎಸ್‌ಆರ್‌ಸಿಪಿ ನಾಯಕ ವಲ್ಲಭನೇನಿ ವಂಶಿ ಬಂಧನದ ಬೆನ್ನಲ್ಲೇ ಕೃಷ್ಣ ಮುರಳಿ ಬಂಧನವಾಗಿದೆ.

ಕೃಷ್ಣ ಮುರಳಿ ಅವರು ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿಪಿಯೊಂದಿಗೆ ಗುರುತಿಸಿಕೊಂಡಿದ್ದು, ಹಿಂದಿನ ವೈಎಸ್‌ಆರ್‌ಸಿಪಿ ಆಡಳಿತದಲ್ಲಿ ಆಂಧ್ರಪ್ರದೇಶ ಚಲನಚಿತ್ರ, ಟಿವಿ ಮತ್ತು ರಂಗಭೂಮಿ ಅಭಿವೃದ್ಧಿ ನಿಗಮದ (ಎಪಿಎಫ್‌ಟಿಟಿಡಿಸಿ) ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT