ಭುವನಂ ಗಗನಂ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ಪ್ರಮೋದ್, ಪೃಥ್ವಿ ಅಂಬಾರ್ ನಟನೆಯ 'ಭುವನಂ ಗಗನಂ' ಪ್ರೇಮಿಗಳ ದಿನದಂದು ಬಿಡುಗಡೆ!

ಪೃಥ್ವಿ ಅಂಬಾರ್ ಮತ್ತು ಪ್ರಮೋದ್ ಅಭಿನಯದ 'ಭುವನಂ ಗಗನಂ' ಚಿತ್ರ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಪ್ರೇಮಿಗಳ ದಿನವಾದ ಫೆಬ್ರುವರಿ 14 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡಲು ಚಿತ್ರತಂಡ ಯೋಜನೆ ರೂಪಿಸಿದೆ.

ಪೃಥ್ವಿ ಅಂಬಾರ್ ಮತ್ತು ಪ್ರಮೋದ್ ಅಭಿನಯದ 'ಭುವನಂ ಗಗನಂ' ಚಿತ್ರ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಪ್ರೇಮಿಗಳ ದಿನವಾದ ಫೆಬ್ರುವರಿ 14 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡಲು ಚಿತ್ರತಂಡ ಯೋಜನೆ ರೂಪಿಸಿದೆ. ಎಸ್‌ವಿಸಿ ಫಿಲ್ಮ್ಸ್ ಬ್ಯಾನರ್‌ನಡಿಯಲ್ಲಿ ಎಂ ಮುನೇಗೌಡ ನಿರ್ಮಿಸಿರುವ ಈ ಚಿತ್ರದ ಕಥೆ, ಚಿತ್ರಕಥೆ ಮತ್ತು ನಿರ್ದೇಶನವನ್ನು ಗಿರೀಶ್ ಮೂಲಿಮನಿ ಮಾಡಿದ್ದಾರೆ.

'ಇದೊಂದು ಕೌಟುಂಬಿಕ ಕಥೆಯನ್ನು ಒಳಗೊಂಡ ಚಿತ್ರವಾಗಿದ್ದು, ಕಥೆಯು ಎರಡು ಟ್ರ್ಯಾಕ್‌ಗಳಲ್ಲಿ ತೆರೆದುಕೊಳ್ಳುತ್ತದೆ. ಪ್ರಮೋದ್ ಮತ್ತು ಪೃಥ್ವಿಯ ಪ್ರಯಾಣಗಳು ಪ್ರತ್ಯೇಕವಾಗಿ ಸಾಗುತ್ತವೆ. ಒಂದು ಹಂತದಲ್ಲಿ ಎರಡೂ ಪಾತ್ರಗಳು ಒಂದಾಗುತ್ತವೆ. ಅವರು ಯಾಕೆ ಭೇಟಿಯಾಗುತ್ತಾರೆ ಮತ್ತು ನಂತರ ಏನಾಗುತ್ತದೆ ಎಂಬುದು ಚಿತ್ರದ ಹೈಲೈಟ್. ಹಲವಾರು ಹೊಸ ಅಂಶಗಳೊಂದಿಗೆ ಸಿನಿಮಾ ಮಾಡಲಾಗಿದ್ದು, ಇಡೀ ತಂಡದ ಪ್ರೋತ್ಸಾಹದಿಂದಾಗಿ ಸಿನಿಮಾ ಅಂದುಕೊಂಡಂತೆ ರೂಪುಗೊಂಡಿದೆ' ಎನ್ನುತ್ತಾರೆ ನಿರ್ದೇಶಕರು.

ಭುವನಂ ಗಗನಂ ಪ್ರೇಮ, ಪ್ರಣಯ ಮತ್ತು ಕೌಟುಂಬಿಕ ಭಾವನೆಗಳನ್ನು ಹೊಂದಿದ್ದು, ನಗರ ಮತ್ತು ಗ್ರಾಮೀಣ ಪ್ರದೇಶಗಳೆರಡರಲ್ಲೂ ನಡೆಯುತ್ತದೆ. ಲವ್ ಮಾಕ್‌ಟೇಲ್‌ ಚಿತ್ರದಲ್ಲಿನ ಪಾತ್ರಕ್ಕೆ ಹೆಸರುವಾಸಿಯಾದ ರಾಚೇಲ್ ಡೇವಿಡ್ ಪ್ರಮೋದ್ ಅವರಿಗೆ ಜೋಡಿಯಾಗಿದ್ದು, ಅಶ್ವತಿ ಪೃಥ್ವಿಗೆ ಜೋಡಿಯಾಗಿದ್ದಾರೆ. ಚಿತ್ರದ ಇತರ ತಾರಾಗಣದಲ್ಲಿ ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ಸ್ಪರ್ಶ ರೇಖಾ, ಪ್ರಜ್ವಲ್ ಶೆಟ್ಟಿ ಮತ್ತು ಚೇತನ್ ದುರ್ಗ ಇದ್ದಾರೆ.

ಚಿತ್ರಕ್ಕೆ ಉದಯ್ ಲೀಲಾ ಅವರ ಛಾಯಾಗ್ರಹಣ, ಗುಮ್ಮನೇನಿ ವಿಜಯ್ ಅವರ ಸಂಗೀತ ಮತ್ತು ಸುನೀಲ್ ಕಶ್ಯಪ್ ಅವರ ಸಂಕಲನವಿದೆ.

ಭುವನಂ ಗಗನಂ ಚಿತ್ರದ ಸ್ಟಿಲ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT