ಭುವನಂ ಗಗನಂ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ಪ್ರಮೋದ್, ಪೃಥ್ವಿ ಅಂಬಾರ್ ನಟನೆಯ 'ಭುವನಂ ಗಗನಂ' ಪ್ರೇಮಿಗಳ ದಿನದಂದು ಬಿಡುಗಡೆ!

ಪೃಥ್ವಿ ಅಂಬಾರ್ ಮತ್ತು ಪ್ರಮೋದ್ ಅಭಿನಯದ 'ಭುವನಂ ಗಗನಂ' ಚಿತ್ರ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಪ್ರೇಮಿಗಳ ದಿನವಾದ ಫೆಬ್ರುವರಿ 14 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡಲು ಚಿತ್ರತಂಡ ಯೋಜನೆ ರೂಪಿಸಿದೆ.

ಪೃಥ್ವಿ ಅಂಬಾರ್ ಮತ್ತು ಪ್ರಮೋದ್ ಅಭಿನಯದ 'ಭುವನಂ ಗಗನಂ' ಚಿತ್ರ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಪ್ರೇಮಿಗಳ ದಿನವಾದ ಫೆಬ್ರುವರಿ 14 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡಲು ಚಿತ್ರತಂಡ ಯೋಜನೆ ರೂಪಿಸಿದೆ. ಎಸ್‌ವಿಸಿ ಫಿಲ್ಮ್ಸ್ ಬ್ಯಾನರ್‌ನಡಿಯಲ್ಲಿ ಎಂ ಮುನೇಗೌಡ ನಿರ್ಮಿಸಿರುವ ಈ ಚಿತ್ರದ ಕಥೆ, ಚಿತ್ರಕಥೆ ಮತ್ತು ನಿರ್ದೇಶನವನ್ನು ಗಿರೀಶ್ ಮೂಲಿಮನಿ ಮಾಡಿದ್ದಾರೆ.

'ಇದೊಂದು ಕೌಟುಂಬಿಕ ಕಥೆಯನ್ನು ಒಳಗೊಂಡ ಚಿತ್ರವಾಗಿದ್ದು, ಕಥೆಯು ಎರಡು ಟ್ರ್ಯಾಕ್‌ಗಳಲ್ಲಿ ತೆರೆದುಕೊಳ್ಳುತ್ತದೆ. ಪ್ರಮೋದ್ ಮತ್ತು ಪೃಥ್ವಿಯ ಪ್ರಯಾಣಗಳು ಪ್ರತ್ಯೇಕವಾಗಿ ಸಾಗುತ್ತವೆ. ಒಂದು ಹಂತದಲ್ಲಿ ಎರಡೂ ಪಾತ್ರಗಳು ಒಂದಾಗುತ್ತವೆ. ಅವರು ಯಾಕೆ ಭೇಟಿಯಾಗುತ್ತಾರೆ ಮತ್ತು ನಂತರ ಏನಾಗುತ್ತದೆ ಎಂಬುದು ಚಿತ್ರದ ಹೈಲೈಟ್. ಹಲವಾರು ಹೊಸ ಅಂಶಗಳೊಂದಿಗೆ ಸಿನಿಮಾ ಮಾಡಲಾಗಿದ್ದು, ಇಡೀ ತಂಡದ ಪ್ರೋತ್ಸಾಹದಿಂದಾಗಿ ಸಿನಿಮಾ ಅಂದುಕೊಂಡಂತೆ ರೂಪುಗೊಂಡಿದೆ' ಎನ್ನುತ್ತಾರೆ ನಿರ್ದೇಶಕರು.

ಭುವನಂ ಗಗನಂ ಪ್ರೇಮ, ಪ್ರಣಯ ಮತ್ತು ಕೌಟುಂಬಿಕ ಭಾವನೆಗಳನ್ನು ಹೊಂದಿದ್ದು, ನಗರ ಮತ್ತು ಗ್ರಾಮೀಣ ಪ್ರದೇಶಗಳೆರಡರಲ್ಲೂ ನಡೆಯುತ್ತದೆ. ಲವ್ ಮಾಕ್‌ಟೇಲ್‌ ಚಿತ್ರದಲ್ಲಿನ ಪಾತ್ರಕ್ಕೆ ಹೆಸರುವಾಸಿಯಾದ ರಾಚೇಲ್ ಡೇವಿಡ್ ಪ್ರಮೋದ್ ಅವರಿಗೆ ಜೋಡಿಯಾಗಿದ್ದು, ಅಶ್ವತಿ ಪೃಥ್ವಿಗೆ ಜೋಡಿಯಾಗಿದ್ದಾರೆ. ಚಿತ್ರದ ಇತರ ತಾರಾಗಣದಲ್ಲಿ ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ಸ್ಪರ್ಶ ರೇಖಾ, ಪ್ರಜ್ವಲ್ ಶೆಟ್ಟಿ ಮತ್ತು ಚೇತನ್ ದುರ್ಗ ಇದ್ದಾರೆ.

ಚಿತ್ರಕ್ಕೆ ಉದಯ್ ಲೀಲಾ ಅವರ ಛಾಯಾಗ್ರಹಣ, ಗುಮ್ಮನೇನಿ ವಿಜಯ್ ಅವರ ಸಂಗೀತ ಮತ್ತು ಸುನೀಲ್ ಕಶ್ಯಪ್ ಅವರ ಸಂಕಲನವಿದೆ.

ಭುವನಂ ಗಗನಂ ಚಿತ್ರದ ಸ್ಟಿಲ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ