ವಿನಯ್ ರಾಜ್‌ಕುಮಾರ್ - ಬಿಎಸ್‌ಪಿ ವರ್ಮಾ 
ಸಿನಿಮಾ ಸುದ್ದಿ

'ಮರ್ಫಿ' ಖ್ಯಾತಿಯ ಬಿಎಸ್‌ಪಿ ವರ್ಮಾ ನಿರ್ದೇಶನದ ಮುಂದಿನ ಚಿತ್ರದಲ್ಲಿ ವಿನಯ್ ರಾಜ್‌ಕುಮಾರ್?

ಅಕ್ಟೋಬರ್‌ನಲ್ಲಿ ಬಿಡುಗಡೆಯಾದ ಮರ್ಫಿ ಚಿತ್ರವು ವಿಮರ್ಷಾತ್ಮಕವಾಗಿ ಮೆಚ್ಚುಗೆ ಗಳಿಸಿತು ಮತ್ತು ಒಟಿಟಿ ವೇದಿಕೆಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ.

ಸಿಂಪಲ್ ಸುನಿ ನಿರ್ದೇಶನದ 'ಒಂದು ಸರಳ ಪ್ರೇಮ ಕಥೆ' ಚಿತ್ರದ ಅಭಿನಯಕ್ಕಾಗಿ ಮೆಚ್ಚುಗೆ ಪಡೆದ ನಟ ವಿನಯ್ ರಾಜ್‌ಕುಮಾರ್, ಇತ್ತೀಚೆಗಷ್ಟೇ ಬಿಡುಗಡೆಯಾದ ಪೆಪೆ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಬಹುಮುಖ ಪ್ರತಿಭೆಗೆ ಹೆಸರುವಾಸಿಯಾದ ವಿನಯ್ ರಾಜ್‌ಕುಮಾರ್, ಗ್ರಾಮಾಯಣ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಬೆನ್ನಲ್ಲೇ, ಪ್ರಭು ಮುಂಡ್ಕೂರ್ ಮತ್ತು ರೋಶಿನಿ ಪ್ರಕಾಶ್ ಅಭಿನಯದ ಮರ್ಫಿ ಚಿತ್ರ ನಿರ್ದೇಶಕ ಬಿಎಸ್‌ಪಿ ವರ್ಮಾರೊಂದಿಗೆ ವಿನಯ್ ರಾಜ್‌ಕುಮಾರ್ ಮಾತುಕತೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಕ್ಟೋಬರ್‌ನಲ್ಲಿ ಬಿಡುಗಡೆಯಾದ ಮರ್ಫಿ ಚಿತ್ರವು ವಿಮರ್ಷಾತ್ಮಕವಾಗಿ ಮೆಚ್ಚುಗೆ ಗಳಿಸಿತು ಮತ್ತು ಒಟಿಟಿ ವೇದಿಕೆಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಇದೀಗ ಬಿಎಸ್‌ಪಿ ವರ್ಮಾ ಅವರು ಮೊದಲ ಬಾರಿಗೆ ವಿನಯ್ ರಾಜ್‌ಕುಮಾರ್ ಅವರೊಂದಿಗೆ ಚಿತ್ರ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಇವರಿಬ್ಬರು ಈಗಾಗಲೇ ಈ ಪ್ರಾಜೆಕ್ಟ್ ಕುರಿತು ಹಲವಾರು ಚರ್ಚೆಗಳನ್ನು ನಡೆಸಿದ್ದು, ವರ್ಮಾ ಅವರ ವಿಶಿಷ್ಟ ಕಥೆಯ ಬಗ್ಗೆ ವಿನಯ್ ಉತ್ಸುಕರಾಗಿದ್ದಾರೆ ಎಂದು ವರದಿಯಾಗಿದೆ.

ಸ್ಕ್ರಿಪ್ಟ್ ಕಮರ್ಷಿಯಲ್ ಅಂಶಗಳನ್ನು ಒಳಗೊಂಡಿದೆ ಎಂದು ಹೇಳಲಾಗುತ್ತಿದೆ. ವಿನಯ್ ಅವರ ವ್ಯಕ್ತಿತ್ವದೊಂದಿಗೆ ಸಂಪೂರ್ಣವಾಗಿ ಹೊಂದಿಕೊಳ್ಳುತ್ತದೆ ಮತ್ತು ವಿವಿಧ ಪ್ರಕಾರಗಳ ಪಾತ್ರಗಳಲ್ಲಿ ನಟಿಸುವ ಅವರ ಆಯ್ಕೆಗೆ ಅನುವು ಮಾಡಿಕೊಡುತ್ತದೆ. ಈ ಚಿತ್ರವು ಸದ್ಯ ಪ್ರೀ-ಪ್ರೊಡಕ್ಷನ್ ಹಂತದಲ್ಲಿದ್ದು, ಸ್ಕ್ರಿಪ್ಟ್ ಅನ್ನು ಇನ್ನಷ್ಟು ಉತ್ತಮಗೊಳಿಸಲಾಗುತ್ತಿದೆ. ನಿರ್ದೇಶಕ ಮತ್ತು ನಟರಿಂದ ಅಂತಿಮ ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT