ಪತ್ನಿ ವಿಜಯಲಕ್ಷ್ಮಿ, ಮಗ ವಿನೀಸ್ ಜೊತೆಗೆ ನಟ ದರ್ಶನ್ 
ಸಿನಿಮಾ ಸುದ್ದಿ

ಮೈಸೂರು ಫಾರ್ಮ್ ಹೌಸ್ ನಲ್ಲಿ ಕುಟುಂಬದೊಂದಿಗೆ ಸಂಕ್ರಾಂತಿ ಆಚರಿಸಿದ ದರ್ಶನ್! ಅಭಿಮಾನಿಗಳು ಫುಲ್ ಖುಷ್

ಮೈಸೂರಿನ ತನ್ನ ಫಾರ್ಮ್ ಹೌಸ್ ನಲ್ಲಿ ಕುಟುಂಬದೊಂದಿಗೆ ಸಂಕ್ರಾಂತಿ ಹಬ್ಬವನ್ನು ಆಚರಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿರುವ ನಟ ದರ್ಶನ್, ಜೂನ್ 2024ರಲ್ಲಿ ಬಂಧನಕ್ಕೊಳಗಾದ ನಂತರ ಇದೇ ಮೊದಲ ಬಾರಿಗೆ ಇನ್ಸ್ಟಾಗ್ರಾಮ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಮೈಸೂರಿನ ತನ್ನ ಫಾರ್ಮ್ ಹೌಸ್ ನಲ್ಲಿ ಕುಟುಂಬದೊಂದಿಗೆ ಸಂಕ್ರಾಂತಿ ಹಬ್ಬವನ್ನು ಆಚರಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಫೋಟೋಗಳಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್ ಹಾಗೂ ದರ್ಶನ್ ಸಹೋದರ ದಿನಕರ್ ತೂಗುದೀಪ ಇದ್ದಾರೆ. ದರ್ಶನ್ ಜೈಲಿನಲ್ಲಿದ್ದಾಗ ಅವರಿಗೆ ಕಾನೂನು ನೆರವು ಒದಗಿಸುವಲ್ಲಿ ಇವರಿಬ್ಬರ ಪಾತ್ರ ಮಹತ್ವದಾಗಿತ್ತು.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ನಾಡಿನ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯ ಕೋರಿದ್ದ ದರ್ಶನ್, ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ' ಎಂದು ಪೋಸ್ಟ್ ಮಾಡಿದ್ದರು.

ದರ್ಶನ್ ಸಾಕಿರುವ ಹಸುವಿಗೆ ವಿಶೇಷ ಪೂಜೆ ಸಲ್ಲಿಸಿ ಕಿಚ್ಚು ಹಾಯಿಸಿ ಸಂಭ್ರಮಿಸಿದ್ದಾರೆ. ದಿನಕರ್ ಅವರ ಪತ್ನಿ ಮತ್ತು ಮಕ್ಕಳು ಕೂಡ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ಸಂಕ್ರಾಂತಿ ಆಚರಣೆ ವೇಳೆ ದರ್ಶನ್ ನೆಮ್ಮದಿ, ಸಂತೋಷದಿಂದ ತಮ್ಮ ಪ್ರೀತಿಪಾತ್ರರೊಂದಿಗೆ ಹಬ್ಬ ಆಚರಿಸಿರುವುದು ಕಂಡುಬಂದಿದೆ. ಈ ಫ್ಯಾಮಿಲಿ ಇಷ್ಟೇ ಖುಷಿಯಾಗಿ ಇರಲಿ ಎಂದು ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ.

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ದರ್ಶನ್ ಜೈಲಿಗೆ ಹೋದರೂ ಅವರ ಅಭಿಮಾನಿಗಳ ಅಭಿಮಾನ ಮಾತ್ರ ಕೊಂಚದಷ್ಟು ಕಡಿಮೆಯಾಗಿರಲಿಲ್ಲ. ಅವರ ನಡೆಯನ್ನು ಸಮರ್ಥಿಸಿಕೊಳ್ಳುತ್ತಾ, ಕಾನೂನು ಸಮರದಲ್ಲಿ ಅವರನ್ನು ಬೆಂಬಲಿಸುತ್ತಾ ಬಂದಿದ್ದಾರೆ. ದರ್ಶನ್ ಮುಂಬರುವ ಚಿತ್ರ 'Devil' ಚಿತ್ರೀಕರಣದಲ್ಲಿ ಸದ್ಯದಲ್ಲಿಯೇ ತೊಡಗಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT