ನಟ ರಾಣಾ 
ಸಿನಿಮಾ ಸುದ್ದಿ

ಪುನೀತ್ ರಂಗಸ್ವಾಮಿ ನಿರ್ದೇಶನದ ಚಿತ್ರದಲ್ಲಿ 'ಏಕ್ ಲವ್ ಯಾ' ಖ್ಯಾತಿಯ ನಟ ರಾಣಾ ನಾಯಕ!

ಚಾಮರಾಜನಗರ, ಸೇಲಂ, ಈರೋಡ್‌ ಸೇರಿದಂತೆ ಕರ್ನಾಟಕ-ತಮಿಳುನಾಡು ಗಡಿ ಭಾಗದ ಸ್ಥಳಗಳಲ್ಲಿ ಚಿತ್ರೀಕರಣ ನಡೆಯಲಿದೆ.

ಚೌಕ ಮತ್ತು ಕಾಟೇರ ಚಿತ್ರಗಳ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರು ತಮ್ಮ Tharun Sudhir Kreatiivez ಅಡಿಯಲ್ಲಿ ಎರಡನೇ ಚಿತ್ರ ನಿರ್ಮಾಣಕ್ಕೆ ಸಜ್ಜಾಗಿದ್ದಾರೆ. ಅಟ್ಲಾಂಟಾ ನಾಗೇಂದ್ರ ಅವರು ಚಿತ್ರಕ್ಕೆ ಸಹ-ನಿರ್ಮಾಪಕರಾಗಿದ್ದಾರೆ. ಈ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ ಮತ್ತು ಭಾವನಾತ್ಮಕವಾದ ಕಥೆಯನ್ನು ಒಳಗೊಂಡಿದೆ.

ಇನ್ನೂ ಹೆಸರಿಡದ ಈ ಚಿತ್ರಕ್ಕೆ ಗೀತರಚನೆಕಾರ ಮತ್ತು ಕಥೆಗಾರ ಪುನೀತ್ ರಂಗಸ್ವಾಮಿ ಅವರು ಇದೇ ಮೊದಲ ಬಾರಿಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರತಂಡ ಜನವರಿ 20 ರಂದು ಚಿತ್ರೀಕರಣ ಪ್ರಾರಂಭಿಸಲು ಸಿದ್ಧವಾಗಿದೆ. ನಟಿ ರಕ್ಷಿತಾ ಅವರ ಸಹೋದರ ರಾಣಾ ನಾಯಕನಾಗಿ ಆಯ್ಕೆಯಾಗಿದ್ದಾರೆ. ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಚಿತ್ರದಲ್ಲಿನ ನಟನೆಗೆ ಹೆಸರಾದ ರಾಣಾ ಅವರಿಗೆ ಇದು ಎರಡನೇ ಸಿನಿಮಾವಾಗಿದ್ದು, ಮೂರು ವರ್ಷಗಳ ವಿರಾಮದ ನಂತರ ನಟನೆಗೆ ಹಿಂತಿರುಗುತ್ತಿದ್ದಾರೆ.

ರಾಣಾ ಅವರ ಪಾಸ್‌ಪೋರ್ಟ್ ಗಾತ್ರದ ಫೋಟೊ ಹೊಂದಿರುವ ಡ್ರೈವಿಂಗ್ ಲೈಸೆನ್ಸ್ ವಿನ್ಯಾಸದ ವಿಶಿಷ್ಟ ಮೋಷನ್ ಪೋಸ್ಟರ್ ಮೂಲಕ ಚಿತ್ರತಂಡ ಈ ಘೋಷಣೆ ಮಾಡಿದೆ. ನಿರ್ಮಾಪಕ ತರುಣ್ ಅವರ ಪ್ರಕಾರ, ಈ ಪೋಸ್ಟರ್ ಚಿತ್ರದ ಪ್ರಮುಖ ಥೀಮ್ ಅನ್ನು ಪ್ರತಿಬಿಂಬಿಸುತ್ತದೆ. - ಹಸಿರಾದ ಭಾವನೆಗಳು, ಚಿಂತನೆ-ಪ್ರಚೋದಕ ಕ್ಷಣಗಳು ಮತ್ತು ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಘಟನೆಯ ನೈಜ ಚಿತ್ರಣ ಮತ್ತು ಕಥೆಯನ್ನು ಪ್ರೇರೇಪಿಸುತ್ತದೆ.

ಚಿತ್ರರಂಗದಲ್ಲಿ ಅಷ್ಟೇನು ಹೆಸರು ಮಾಡಿಲ್ಲದ ನಟನನ್ನು ಹುಡುಕುತ್ತಿರುವಾಗ ರಾಣಾ ಅವರು ಕಣ್ಣಿಗೆ ಬಿದ್ದರು ಮತ್ತು ಅವರು ಈ ಪಾತ್ರಕ್ಕೆ ಸೂಕ್ತವಾಗಿದ್ದರು. ಏಕ್ ಲವ್ ಯಾ ಚಿತ್ರದಲ್ಲಿನ ಅವರ ಸಹಜ ನೋಟ ಮತ್ತು ನಟನೆಯಿಂದ ನಾನು ಪ್ರಭಾವಿತನಾಗಿದ್ದೆ. ಅವರ ಅಭಿನಯ ನನ್ನ ಗಮನ ಸೆಳೆಯಿತು ಮತ್ತು ಅವರು ಈ ಚಿತ್ರದಲ್ಲಿ ಉತ್ತಮವಾಗಿ ನಟಿಸುತ್ತಾರೆ ಎಂದು ನಾನು ನಂಬಿದ್ದೇನೆ ಎಂದು ತರುಣ್ ಹೇಳುತ್ತಾರೆ.

ಚಾಮರಾಜನಗರ, ಸೇಲಂ, ಈರೋಡ್‌ ಸೇರಿದಂತೆ ಕರ್ನಾಟಕ-ತಮಿಳುನಾಡು ಗಡಿ ಭಾಗದ ಸ್ಥಳಗಳಲ್ಲಿ ಚಿತ್ರೀಕರಣ ನಡೆಯಲಿದೆ. ಮುಂದಿನ ವಾರಗಳಲ್ಲಿ ಮೊದಲ ಶೆಡ್ಯೂಲ್ ಅನ್ನು ಮುಗಿಸಲು ತಂಡವು ಯೋಜಿಸಿದೆ. ನಂತರ ರಾಣಾ ಅವರು ತಮ್ಮ ಮದುವೆಗೆ ಸ್ವಲ್ಪ ವಿರಾಮ ತೆಗೆದುಕೊಳ್ಳಲಿದ್ದಾರೆ.

ಚಿತ್ರವನ್ನು ನರಸಿಂಹ ನಾಯಕ್ (ರಾಜು ಗೌಡ) ಪ್ರಸ್ತುತಪಡಿಸಿದ್ದಾರೆ. ಚಿತ್ರಕ್ಕೆ ಛಾಯಾಗ್ರಾಹಕರಾಗಿ ಸುಧಾಕರ್ ಎಸ್ ರಾಜ್, ಕೆಎಂ ಪ್ರಕಾಶ್ ಅವರ ಸಂಕಲನ ಮತ್ತು ಕಲಾ ನಿರ್ದೇಶಕರಾಗಿ ರಾಜಶೇಖರ್ ಇದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT