ಸರಿಗಮ ವಿಜಿ 
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ಹಿರಿಯ ನಟ ಸರಿಗಮ ವಿಜಿ ನಿಧನ

ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿತ್ತು. ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ ಅವರು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಅವರು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು.

ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿತ್ತು. ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನ್ಯುಮೋನಿಯಾಗೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಅವರು ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ. ಸರಿಗಮ ವಿಜಿ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಜನವರಿ 16 ಬೆಳಿಗ್ಗೆ ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಬರುವ ಚೀತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ವಿಜಿ ಅವರದ್ದು ಬಲು ಸುದೀರ್ಘವಾದ ಸಿನಿಮಾ ಮತ್ತು ರಂಗಭೂಮಿ ಪಯಣ. ನಾಟಕಗಳಲ್ಲಿ ನಟಿಸುತ್ತಿದ್ದ ವಿಜಿ ಅವರ ‘ಸಂಸಾರದಲ್ಲಿ ಸರಿಗಮ’ ನಾಟಕ ಬಹಳ ಹೆಸರು ಕೊಟ್ಟಿತ್ತು. ಇದೇ ಕಾರಣಕ್ಕೆ ಅವರಿಗೆ ಸರಿಗಮ ವಿಜಿ ಹೆಸರು ಬಂದಿತ್ತು. ನಾಟಕದಿಂದ ಸಿನಿಮಾಕ್ಕೆ ಪದಾರ್ಪಣೆ ಮಾಡಿದ ವಿಜಿ ಅವರು ಹಲವಾರು ಸಿನಿಮಾಗಳಲ್ಲಿ ಪೋಷಕ ಪಾತ್ರ, ಹಾಸ್ಯ ಪಾತ್ರ ಕೆಲವೆಡೆ ವಿಲನ್ ಪಾತ್ರಗಳಲ್ಲಿಯೂ ನಟಿಸಿದ್ದಾರೆ.

ಆರಂಭದಲ್ಲಿ ಕೆಲ ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ ವಿಜಿ ಅವರು ‘ಬೆಳುವಲದ ಮಡಿಲಲ್ಲಿ’ ಸಿನಿಮಾ ಮೂಲಕ ನಟರಾಗಿ ಎಂಟ್ರಿ ಕೊಟ್ಟರು. ಅದಾದ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಲೇ ಸಾಗಿದ ವಿಜಿ ಅವರು 2018ರ ಹೊತ್ತಿಗೆ ವಿಜಯ್ ಕನ್ನಡದಲ್ಲಿ ಸುಮಾರು 269 ಚಿತ್ರಗಳಲ್ಲಿ ನಟಿಸಿದ್ದರು. 80 ಕ್ಕೂ ಹೆಚ್ಚು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿಯೂ ಕೆಲಸ ಮಾಡಿದ್ದರು. ಟಿವಿ ಧಾರಾವಾಹಿಗಳಲ್ಲಿ ನಟಿಸಿದ್ದ ಸರಿಗಮ ವಿಜಿ ಅವರು ಕೆಲ ಧಾರಾವಾಹಿಗಳ ನಿರ್ದೇಶನವನ್ನೂ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!