ಪಾರು ಪಾರ್ವತಿ ಚಿತ್ರದಲ್ಲಿ ನಟಿ ದೀಪಿಕಾ ದಾಸ್ 
ಸಿನಿಮಾ ಸುದ್ದಿ

ಬಿಗ್ ಬಾಸ್ ಖ್ಯಾತಿಯ ದೀಪಿಕಾ ದಾಸ್ ನಟನೆಯ 'ಪಾರು ಪಾರ್ವತಿ' ಬಿಡುಗಡೆಗೆ ಸಿದ್ದ; ದಿನಾಂಕ ಘೋಷಣೆ

'ಈ ಕಾರು ಕೇವಲ ವಸ್ತುವಲ್ಲ; ಇದು ಪ್ರಮುಖ ಪಾತ್ರಗಳಲ್ಲಿ ಒಂದಾಗಿದೆ. ಕಾರಿನ ಪ್ರಯಾಣವು ಚಿತ್ರದ ಸಾರವನ್ನು ಪ್ರತಿಬಿಂಬಿಸುತ್ತದೆ' ಎಂದು ನಿರ್ದೇಶಕ ರೋಹಿತ್ ಕೀರ್ತಿ ಹಂಚಿಕೊಂಡಿದ್ದಾರೆ.

ರೋಹಿತ್ ಕೀರ್ತಿ ನಿರ್ದೇಶನದ ಬಿಗ್ ಬಾಸ್ ಮಾಜಿ ಸ್ಪರ್ಧಿ ಮತ್ತು ನಟಿ ದೀಪಿಕಾ ದಾಸ್ ಅಭಿನಯದ ಮುಂಬರುವ 'ಪಾರು ಪಾರ್ವತಿ' ಚಿತ್ರವು ಬಿಡುಗಡೆಗೆ ಸಜ್ಜಾಗಿದೆ. ಚಿತ್ರತಂಡ ಚಿತ್ರದ ನಾಲ್ಕನೇ ಪ್ರಮುಖ ಪಾತ್ರದ ಹೈ-ಎಂಡ್ ISUZU V ಕ್ರಾಸ್ ಮಾಡೆಲ್ ಕಾರನ್ನು ಅನಾವರಣಗೊಳಿಸಿದ್ದು, ಚಿತ್ರವು ಜನವರಿ 31 ರಾಜ್ಯದಾದ್ಯಂತ ಚಿತ್ರಮಂಗದಿರಗಳಲ್ಲಿ ತೆರೆಕಾಣಲಿದೆ ಎಂದು ಘೋಷಿಸಿದೆ.

'ಈ ಕಾರು ಕೇವಲ ವಸ್ತುವಲ್ಲ; ಇದು ಪ್ರಮುಖ ಪಾತ್ರಗಳಲ್ಲಿ ಒಂದಾಗಿದೆ. ಕಾರಿನ ಪ್ರಯಾಣವು ಚಿತ್ರದ ಸಾರವನ್ನು ಪ್ರತಿಬಿಂಬಿಸುತ್ತದೆ' ಎಂದು ನಿರ್ದೇಶಕ ರೋಹಿತ್ ಕೀರ್ತಿ ಹಂಚಿಕೊಂಡಿದ್ದಾರೆ. ವಿಶೇಷವಾಗಿ ವಿನ್ಯಾಸಗೊಳಿಸಿದ ISUZU ಕಾರು 20 ಲಕ್ಷ ರೂಪಾಯಿ ಮೌಲ್ಯದ್ದಾಗಿದೆ. ಬೆಂಗಳೂರಿನ ಉತ್ತರಹಳ್ಳಿಯಿಂದ ಉತ್ತರಾಖಂಡದವರೆಗೆ ಎಂಟು ರಾಜ್ಯಗಳಾದ್ಯಂತ 1.1 ಲಕ್ಷ ಕಿಲೋಮೀಟರ್‌ಗಳಷ್ಟು ಪ್ರಯಾಣಿಸಿದೆ. ಇದು ಚಿತ್ರದ ನಿರೂಪಣೆಗೆ ಅವಿಭಾಜ್ಯವಾಗಿದೆ.

ದೀಪಿಕಾ ದಾಸ್ ಹೊರತಾಗಿ, ಚಿತ್ರದ ತಾರಾಗಣದಲ್ಲಿ ಪೂನಂ ಸಿರ್ನಾಯಕ್ ಮತ್ತು ಫವಾಜ್ ಅಶ್ರಫ್ ಪ್ರಮುಖ ಪಾತ್ರಗಳಲ್ಲಿದ್ದಾರೆ. 'ಈ ಪ್ರಯಾಣ ಆಧರಿತ ಚಲನಚಿತ್ರವು ಭಾವನೆಗಳು, ಸಂಸ್ಕೃತಿ ಮತ್ತು ಅನ್ವೇಷಿಸದ ಸ್ಥಳಗಳನ್ನು ಪರಿಶೋಧಿಸುತ್ತದೆ. ಇದು ಮನರಂಜನೆ, ಮಾಹಿತಿ ಮತ್ತು ಪ್ರೇಕ್ಷಕರೊಂದಿಗೆ ಆಳವಾಗಿ ಸಂಪರ್ಕ ಸಾಧಿಸುತ್ತದೆ' ಎಂದು ದೀಪಿಕಾ ಹೇಳುತ್ತಾರೆ.

ಆರ್ ಹರಿ ಸಂಯೋಜಿಸಿದ ಒಂಬತ್ತು ಹಾಡುಗಳು ಚಿತ್ರದಲ್ಲಿವೆ. ಅಬಿನ್ ರಾಜೇಶ್ ಛಾಯಾಗ್ರಹಣ ಚಿತ್ರಕ್ಕಿದೆ. ಸಾಹಸ ಮತ್ತು ಭಾವನೆಗಳನ್ನು ಪಾರು ಪಾರ್ವತಿ ಚಿತ್ರ ಸಂಯೋಜಿಸುತ್ತದೆ. Eighteen Thirty Six Pictures ಅಡಿಯಲ್ಲಿ ಈ ಯೋಜನೆಯನ್ನು ನಿರ್ಮಿಸುತ್ತಿರುವ ನಿರ್ಮಾಪಕ ಪಿಬಿ ಪ್ರೇಮನಾಥ್ ಅವರು ಕನ್ನಡ ಚಿತ್ರರಂಗವನ್ನು ಉನ್ನತೀಕರಿಸುವ ಉತ್ಸಾಹವನ್ನು ವ್ಯಕ್ತಪಡಿಸಿದರು. ಇದು ಅವರ ಕನಸು ನನಸಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT