ಅಯೋಗ್ಯ 2 ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಆಗಸ್ಟ್‌ನಲ್ಲಿ ಸತೀಶ್ ನೀನಾಸಂ, ರಚಿತಾ ರಾಮ್ ನಟನೆಯ 'ಅಯೋಗ್ಯ 2' ಬಿಡುಗಡೆ

ಮಹೇಶ್ ಕುಮಾರ್ ನಿರ್ದೇಶನದ ಮತ್ತು ಎಂ ಮುನೇಗೌಡ ನಿರ್ಮಾಣದ ಚಿತ್ರದ ಎರಡನೇ ಹಂತದ ಚಿತ್ರೀಕರಣ ₹ 2 ಕೋಟಿ ವೆಚ್ಚದಲ್ಲಿ ನಡೆಯಲಿದೆ.

ಸತೀಶ್ ನೀನಾಸಂ ಮತ್ತು ರಚಿತಾ ರಾಮ್ ಅಭಿನಯದ 'ಅಯೋಗ್ಯ 2' ಚಿತ್ರತಂಡವು ಮಂಡ್ಯ ಸುತ್ತಮುತ್ತ ಮೊದಲ ಶೂಟಿಂಗ್ ಶೆಡ್ಯೂಲ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇದೀಗ ಶುಕ್ರವಾರದಿಂದ ಎರಡನೇ ಹಂತದ ಚಿತ್ರೀಕರಣವನ್ನು ಪ್ರಾರಂಭಿಸಿದೆ.

ಮಹೇಶ್ ಕುಮಾರ್ ನಿರ್ದೇಶನದ ಮತ್ತು ಎಂ ಮುನೇಗೌಡ ನಿರ್ಮಾಣದ ಚಿತ್ರದ ಎರಡನೇ ಹಂತದ ಚಿತ್ರೀಕರಣ ₹ 2 ಕೋಟಿ ವೆಚ್ಚದಲ್ಲಿ ನಡೆಯಲಿದೆ. ಈ ಚಿತ್ರೀಕರಣವು ನಾಯಕನ ಪರಿಚಯದ ಸೀಕ್ವೆನ್ಸ್, ರೊಮ್ಯಾಂಟಿಕ್ ಹಾಡು ಮತ್ತು ಫೈಟ್ ಸೀಕ್ವೆನ್ಸ್ ಅನ್ನು ಒಳಗೊಂಡಿದೆ. 20 ದಿನಗಳ ಕಾಲ ಚಿತ್ರೀಕರಣ ನಡೆಯಲಿದ್ದು, ಅದ್ಧೂರಿ ದೃಶ್ಯ ವೈಭವವನ್ನು ತೆರೆ ಮೇಲೆ ತರಲು ಚಿತ್ರತಂಡ ಯೋಜನೆ ರೂಪಿಸಿದೆ.

ಮಹೇಶ್ ಕುಮಾರ್ ಮಾತನಾಡಿ, 'ಮೊದಲ ಚಿತ್ರವು (ಅಯೋಗ್ಯ) ಕೊನೆಗೊಂಡ ಸ್ಥಳದಿಂದಲೇ ಅಯೋಗ್ಯ 2 ಚಿತ್ರವು ಪ್ರಾರಂಭವಾಗುತ್ತದೆ. ಒಂದೆರಡು ಹೊಸ ಪಾತ್ರಗಳು ಚಿತ್ರತಂಡ ಸೇರಿದ್ದು, ಮುಖ್ಯ ಪಾತ್ರವರ್ಗವು ಪ್ರಯಾಣವನ್ನು ಮುಂದುವರೆಸುತ್ತದೆ. ಈಗ ಗ್ರಾಮ ಪಂಚಾಯಿತಿ ಸದಸ್ಯರಾಗಿರುವ ಸಿದ್ಧೇಗೌಡ ಅವರು ಸಮಸ್ಯೆಗಳ ಹೊಸ ಅಲೆಯನ್ನು ಎದುರಿಸುತ್ತಿದ್ದಾರೆ. ಮೊದಲ ಚಿತ್ರದ ಸಾರವನ್ನು ಉಳಿಸಿಕೊಂಡು ಕಥೆಯು ಮುಖ್ಯ ಪಾತ್ರವು ಎದುರಿಸುತ್ತಿರುವ ಸವಾಲುಗಳನ್ನು ಅನ್ವೇಷಿಸುತ್ತದೆ. ಚಿತ್ರವು ಕನ್ನಡದಲ್ಲಿ ತಯಾರಾಗಲಿದ್ದು, ನಂತರ ತೆಲುಗು ಮತ್ತು ತಮಿಳಿಗೆ ಡಬ್ಬಿಂಗ್ ಮಾಡಲಾಗುತ್ತಿದೆ' ಎಂದರು.

ಆಗಸ್ಟ್‌ನಲ್ಲಿ ಚಿತ್ರ ಬಿಡುಗಡೆ ಮಾಡುವ ಗುರಿಯನ್ನು ಚಿತ್ರತಂಡ ಹೊಂದಿದೆ. ಚಿತ್ರದ ತಾರಾಗಣದಲ್ಲಿ ಸುಂದರ್ ರಾಜ್, ಶಿವರಾಜ್ ಕೆಆರ್ ಪೇಟೆ, ಅರುಣಾ ಬಾಲರಾಜ್, ಮಂಜು ಪಾವಗಡ ಇದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆ, ಮಾಸ್ತಿ ಉಪ್ಪಾರಳ್ಳಿ ಅವರ ಸಂಭಾಷಣೆ ಮತ್ತು ಬಹದ್ದೂರ್ ಚೇತನ್ ಅವರ ಸಾಹಿತ್ಯವಿದೆ. ಶಾಕಾಹಾರಿ ಚಿತ್ರಕ್ಕೆ ಛಾಯಾಗ್ರಾಹಕರಾಗಿದ್ದ ವಿಶ್ವಜಿತ್ ರಾವ್ ಈ ಚಿತ್ರಕ್ಕೆ ಕ್ಯಾಮರಾ ನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT