ಅಯೋಗ್ಯ 2 ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಆಗಸ್ಟ್‌ನಲ್ಲಿ ಸತೀಶ್ ನೀನಾಸಂ, ರಚಿತಾ ರಾಮ್ ನಟನೆಯ 'ಅಯೋಗ್ಯ 2' ಬಿಡುಗಡೆ

ಮಹೇಶ್ ಕುಮಾರ್ ನಿರ್ದೇಶನದ ಮತ್ತು ಎಂ ಮುನೇಗೌಡ ನಿರ್ಮಾಣದ ಚಿತ್ರದ ಎರಡನೇ ಹಂತದ ಚಿತ್ರೀಕರಣ ₹ 2 ಕೋಟಿ ವೆಚ್ಚದಲ್ಲಿ ನಡೆಯಲಿದೆ.

ಸತೀಶ್ ನೀನಾಸಂ ಮತ್ತು ರಚಿತಾ ರಾಮ್ ಅಭಿನಯದ 'ಅಯೋಗ್ಯ 2' ಚಿತ್ರತಂಡವು ಮಂಡ್ಯ ಸುತ್ತಮುತ್ತ ಮೊದಲ ಶೂಟಿಂಗ್ ಶೆಡ್ಯೂಲ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇದೀಗ ಶುಕ್ರವಾರದಿಂದ ಎರಡನೇ ಹಂತದ ಚಿತ್ರೀಕರಣವನ್ನು ಪ್ರಾರಂಭಿಸಿದೆ.

ಮಹೇಶ್ ಕುಮಾರ್ ನಿರ್ದೇಶನದ ಮತ್ತು ಎಂ ಮುನೇಗೌಡ ನಿರ್ಮಾಣದ ಚಿತ್ರದ ಎರಡನೇ ಹಂತದ ಚಿತ್ರೀಕರಣ ₹ 2 ಕೋಟಿ ವೆಚ್ಚದಲ್ಲಿ ನಡೆಯಲಿದೆ. ಈ ಚಿತ್ರೀಕರಣವು ನಾಯಕನ ಪರಿಚಯದ ಸೀಕ್ವೆನ್ಸ್, ರೊಮ್ಯಾಂಟಿಕ್ ಹಾಡು ಮತ್ತು ಫೈಟ್ ಸೀಕ್ವೆನ್ಸ್ ಅನ್ನು ಒಳಗೊಂಡಿದೆ. 20 ದಿನಗಳ ಕಾಲ ಚಿತ್ರೀಕರಣ ನಡೆಯಲಿದ್ದು, ಅದ್ಧೂರಿ ದೃಶ್ಯ ವೈಭವವನ್ನು ತೆರೆ ಮೇಲೆ ತರಲು ಚಿತ್ರತಂಡ ಯೋಜನೆ ರೂಪಿಸಿದೆ.

ಮಹೇಶ್ ಕುಮಾರ್ ಮಾತನಾಡಿ, 'ಮೊದಲ ಚಿತ್ರವು (ಅಯೋಗ್ಯ) ಕೊನೆಗೊಂಡ ಸ್ಥಳದಿಂದಲೇ ಅಯೋಗ್ಯ 2 ಚಿತ್ರವು ಪ್ರಾರಂಭವಾಗುತ್ತದೆ. ಒಂದೆರಡು ಹೊಸ ಪಾತ್ರಗಳು ಚಿತ್ರತಂಡ ಸೇರಿದ್ದು, ಮುಖ್ಯ ಪಾತ್ರವರ್ಗವು ಪ್ರಯಾಣವನ್ನು ಮುಂದುವರೆಸುತ್ತದೆ. ಈಗ ಗ್ರಾಮ ಪಂಚಾಯಿತಿ ಸದಸ್ಯರಾಗಿರುವ ಸಿದ್ಧೇಗೌಡ ಅವರು ಸಮಸ್ಯೆಗಳ ಹೊಸ ಅಲೆಯನ್ನು ಎದುರಿಸುತ್ತಿದ್ದಾರೆ. ಮೊದಲ ಚಿತ್ರದ ಸಾರವನ್ನು ಉಳಿಸಿಕೊಂಡು ಕಥೆಯು ಮುಖ್ಯ ಪಾತ್ರವು ಎದುರಿಸುತ್ತಿರುವ ಸವಾಲುಗಳನ್ನು ಅನ್ವೇಷಿಸುತ್ತದೆ. ಚಿತ್ರವು ಕನ್ನಡದಲ್ಲಿ ತಯಾರಾಗಲಿದ್ದು, ನಂತರ ತೆಲುಗು ಮತ್ತು ತಮಿಳಿಗೆ ಡಬ್ಬಿಂಗ್ ಮಾಡಲಾಗುತ್ತಿದೆ' ಎಂದರು.

ಆಗಸ್ಟ್‌ನಲ್ಲಿ ಚಿತ್ರ ಬಿಡುಗಡೆ ಮಾಡುವ ಗುರಿಯನ್ನು ಚಿತ್ರತಂಡ ಹೊಂದಿದೆ. ಚಿತ್ರದ ತಾರಾಗಣದಲ್ಲಿ ಸುಂದರ್ ರಾಜ್, ಶಿವರಾಜ್ ಕೆಆರ್ ಪೇಟೆ, ಅರುಣಾ ಬಾಲರಾಜ್, ಮಂಜು ಪಾವಗಡ ಇದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆ, ಮಾಸ್ತಿ ಉಪ್ಪಾರಳ್ಳಿ ಅವರ ಸಂಭಾಷಣೆ ಮತ್ತು ಬಹದ್ದೂರ್ ಚೇತನ್ ಅವರ ಸಾಹಿತ್ಯವಿದೆ. ಶಾಕಾಹಾರಿ ಚಿತ್ರಕ್ಕೆ ಛಾಯಾಗ್ರಾಹಕರಾಗಿದ್ದ ವಿಶ್ವಜಿತ್ ರಾವ್ ಈ ಚಿತ್ರಕ್ಕೆ ಕ್ಯಾಮರಾ ನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT