ಮಾಂಕ್ ದಿ ಯಂಗ್ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಫೆಬ್ರುವರಿಯಲ್ಲಿ 'Monk the Young' ತೆರೆಗೆ; ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣಕ್ಕೆ ಚಿತ್ರತಂಡ ಸಿದ್ಧತೆ

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎನ್‌ಜಿಒ ನಾಯಕಿ ಉಷಾ, ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ತನ್ನ ಶೀರ್ಷಿಕೆಯಿಂದಲೇ ತೀವ್ರ ಕುತೂಹಲ ಕೆರಳಿಸಿರುವ 'Monk The Young' ಚಿತ್ರವನ್ನು ಫೆಬ್ರುವರಿಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ. ಇತ್ತೀಚೆಗಷ್ಟೇ ಚಿತ್ರದ 'ಮಾಯೆ' ಹಾಡು ಬಿಡುಗಡೆಯಾಗಿದ್ದು, ಆನಂದ್ ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ವೀಕ್ಷಣೆಗೆ ಲಭ್ಯವಿದೆ. ಹಾಡಿಗೆ ಪ್ರತಾಪ್ ಭಟ್ ಅವರು ಸಾಹಿತ್ಯ ಬರೆದಿದ್ದು, ಸಿರಿ ಕಟ್ಟೆ ಹಾಡಿದ್ದಾರೆ. ಸ್ವಾಮಿನಾಥನ್ ಅವರ ಸಂಗೀತ ಸಂಯೋಜನೆಯಿದ್ದು, ಈ ಹಾಡಿಗೆ ಈಗಾಗಲೇ ಕೇಳುಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎನ್‌ಜಿಒ ನಾಯಕಿ ಉಷಾ, ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

'ಕೆಆರ್‌ಜಿ ಸ್ಟುಡಿಯೋಸ್ ಚಿತ್ರದ ವಿತರಣೆಯ ಹಕ್ಕನ್ನು ಪಡೆದುಕೊಂಡಿದ್ದು, ಫೆಬ್ರುವರಿ ಮಧ್ಯ ಅಥವಾ ಕೊನೆಯಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಕನ್ನಡ ಸೇರಿದಂತೆ ಮೂರು ಭಾಷೆಗಳಲ್ಲಿ 'ಮಾಂಕ್ ದಿ ಯಂಗ್' ಚಿತ್ರ ಬಿಡುಗಡೆಯಾಗಲಿದೆ. ಈ ಚಿತ್ರಕ್ಕೆ ಐವರು ನಿರ್ಮಾಪಕರಿದ್ದು, ಪ್ರತಿಯೊಬ್ಬರು ಒಂದೊಂದು ರಾಜ್ಯವನ್ನು ಪ್ರತಿನಿಧಿಸುತ್ತಾರೆ. ಹೀಗಾಗಿ, ಚಿತ್ರವನ್ನು ಪ್ಯಾನ್-ಇಂಡಿಯಾ ಆಗಿ ಮಾಡುವ ಗುರಿಯನ್ನು ಚಿತ್ರತಂಡ ಹೊಂದಿದೆ ಎಂದು ನಿರ್ಮಾಪಕರಾದ ಕರ್ನಲ್ ರಾಜೇಂದ್ರನ್, ಗೋಪಿಚಂದ್ ಮತ್ತು ಲಾಲ್ ಚಂದ್ ಖಟ್ಟರ್ ತಿಳಿಸಿದರು. ಇವರೊಂದಿಗೆ ವಿನಯ್ ಬಾಬು ರೆಡ್ಡಿ ಶೆಟ್ಟಿಹಳ್ಳಿ ಮತ್ತು ಸರೋವರ್ ಅವರು ಸಹ ನಿರ್ಮಾಪಕರಾಗಿದ್ದಾರೆ.

ಮಾಂಕ್ ದಿ ಯಂಗ್ ಸಿನಿಮಾ ವಿಂಟೇಜ್ ಫ್ಯಾಂಟಸಿ ಕಥಾಹಂದರವನ್ನು ಹೊಂದಿದ್ದು, ಚಿತ್ರದ ಪ್ರಯಾಣವು 1869 ರಲ್ಲಿ ಪ್ರಾರಂಭವಾಗುತ್ತದೆ ಮತ್ತು ವಿವಿಧ ಕಾಲಘಟ್ಟಗಳ ಕಥೆಯನ್ನು ಒಳಗೊಂಡಿದೆ. ನಿರ್ದೇಶಕ ಮಾಸ್ಚಿತ್ ಸೂರ್ಯ ಅದರ ಲೇಯರ್ಡ್ ಕಥಾಹಂದರವು ವೀಕ್ಷಕರೊಂದಿಗೆ ಸಂಪರ್ಕ ಸಾಧಿಸುತ್ತದೆ. ಆತ್ಮಾವಲೋಕನ ಮಾಡಿಕೊಂಡಾಗ ಎಲ್ಲ ಪ್ರಶ್ನೆಗಳಿಗೂ ಉತ್ತರ ಸಿಗಲಿದೆ.

ನಾಯಕ ಸರೋವರ್ ಮಾತನಾಡಿ, ತಮ್ಮ ಪಾತ್ರ ಮತ್ತು ಚಿತ್ರದ ನಿರೂಪಣೆಯು ಪ್ರೇಕ್ಷಕರ ಮೇಲೆ ಶಾಶ್ವತವಾದ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ಮಾಂಕ್ ದಿ ಯಂಗ್ ಚಿತ್ರದ ಪೋಸ್ಟರ್

ಚಿತ್ರದ ತಾರಾಗಣದಲ್ಲಿ ನಾಯಕಿಯಾಗಿ ಸೌಂದರ್ಯ ಗೌಡ ನಟಿಸಿದ್ದಾರೆ. ಇನ್ನುಳಿದಂತೆ ಕೃತಿ, ರವಿಶಂಕರ್, ಸಾರಸ್ ಮಂಜುನಾಥ್, ರವಿ ಮಟ್ಟಿ, ಸುಮಂತ್ ಮತ್ತು ಶಿವಪ್ಪ ಇದ್ದಾರೆ. ಚಿತ್ರಕ್ಕೆ ಕಾರ್ತಿಕ್ ಶರ್ಮಾ ಅವರ ಛಾಯಾಗ್ರಹಣ, ಸ್ವಾಮಿನಾಥನ್ ಅವರ ಸಂಗೀತ ಸಂಯೋಜನೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ