ಧರ್ಮ ಕೀರ್ತಿರಾಜ್ - ಪ್ರಶಾಂತ್ ಎಚ್ಇ 
ಸಿನಿಮಾ ಸುದ್ದಿ

ಬಿಗ್ ಬಾಸ್ ಖ್ಯಾತಿಯ ನಟ ಧರ್ಮ ಕೀರ್ತಿರಾಜ್ ಹೊಸ ಚಿತ್ರ ಘೋಷಣೆ; ಸಸ್ಪೆನ್ಸ್ ಥ್ರಿಲ್ಲರ್ 'ಹ್ಯಾರಿ' ಶೀರ್ಷಿಕೆ

ಚಿತ್ರದಲ್ಲಿ ನವಾಜ್, ಅಶೋಕ್ ಕೆರವತ್ತಿ, ಕಿರಣ್ ಮತ್ತು ಪ್ರೇಮ್ ಜೊತೆಗೆ ಪ್ರೀತಿ ನಾಯಕಿಯಾಗಿ ನಟಿಸಿದ್ದಾರೆ.

ಬಿಗ್ ಬಾಸ್ ಖ್ಯಾತಿಯ ನಟ ಧರ್ಮ ಕೀರ್ತಿರಾಜ್ ಹೊಸ ಚಿತ್ರದೊಂದಿಗೆ ಮತ್ತೆ ನಟನೆಯತ್ತ ಮರಳುತ್ತಿದ್ದಾರೆ. ಚಿತ್ರಕ್ಕೆ 'ಹ್ಯಾರಿ' ಎಂದು ಹೆಸರಿಡಲಾಗಿದ್ದು, ಸೂರ್ಯ ಕಿರಣ್ ಮತ್ತು ಅರುಣ್ ಸೂರ್ಯ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರವು ಸಸ್ಪೆನ್ಸ್ ಮತ್ತು ಥ್ರಿಲ್‌ಗಳಿಂದ ತುಂಬಿರುವ ಮರ್ಡರ್ ಮಿಸ್ಟರಿಯಾಗಿದೆ.

ದೈವಿಕ ಸಿನಿ ಕ್ರಿಯೇಷನ್ಸ್ ಅಡಿಯಲ್ಲಿ ಪ್ರಶಾಂತ್ ಹೆಚ್ ಇ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಹ್ಯಾರಿ ನಿರೀಕ್ಷಿಸಲಾಗದ ಮಾನವ ನಡವಳಿಕೆ ಮತ್ತು ಅದು ಉಂಟುಮಾಡಬಹುದಾದ ಅನಿರೀಕ್ಷಿತ ಪರಿಣಾಮಗಳ ಬಗ್ಗೆ ಹೇಳುತ್ತದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ನವಗ್ರಹ, ಅಂತರರಾಷ್ಟ್ರೀಯ ಮನ್ನಣೆ ಗಳಿಸಿದ ಲಂಬಾಣಿ (2018), ಕೋಲ್ಕತ್ತಾ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡ ಅನಿವಾರ್ಯ (2019) ಚಿತ್ರಗಳ ಮೂಲಕ ಧರ್ಮ ಕೀರ್ತಿರಾಜ್ ಹೆಸರು ಗಳಿಸಿದ್ದಾರೆ. ಇದೀಗ ಸ್ವಲ್ಪ ವಿರಾಮದ ನಂತರ ಮತ್ತೆ ಕನ್ನಡ ಚಿತ್ರರಂಗಕ್ಕೆ ಮರಳುತ್ತಿದ್ದಾರೆ.

ಚಿತ್ರದಲ್ಲಿ ನವಾಜ್, ಅಶೋಕ್ ಕೆರವತ್ತಿ, ಕಿರಣ್ ಮತ್ತು ಪ್ರೇಮ್ ಜೊತೆಗೆ ಪ್ರೀತಿ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರಕ್ಕೆ ಶಾಶ್ತ್ ಅವರ ಸಂಗೀತ ಸಂಯೋಜನೆ, ಗಗನ್ ಅವರ ಛಾಯಾಗ್ರಹಣ, ಶ್ರೀನಿವಾಸ್ ಅವರ ಸಂಕಲನ ಮತ್ತು ಕುಂಗ್‌ಫು ಚಂದ್ರು ಅವರ ಸಾಹಸ ದೃಶ್ಯಗಳನ್ನು ಒಳಗೊಂಡಿದೆ.

ಮಡಿಕೇರಿ ಮತ್ತು ಚಿಕ್ಕಮಗಳೂರಿನಂತಹ ಸುಂದರವಾದ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದ್ದು, ಬಾಕಿಯಿರುವ ಎರಡು ಹಾಡುಗಳು ಮತ್ತು ಆಕ್ಷನ್ ಸೀಕ್ವೆನ್ಸ್ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ. ಚಿತ್ರವು ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿದ್ದು, ಹೆಚ್ಚಿನ ಪ್ರೇಕ್ಷಕರನ್ನು ತಲುಪಲು ಯೋಜಿಸಿದೆ. ಶೀಘ್ರದಲ್ಲೇ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗುತ್ತಿದೆ. ನಂತರ ಚಿತ್ರ ಬಿಡುಗಡೆ ಕುರಿತು ಅಧಿಕೃತ ಪ್ರಕಟಣೆ ನೀಡಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT