ವಿಕೆ 30 ಪೋಸ್ಟರ್ - ದುನಿಯಾ ವಿಜಯ್ 
ಸಿನಿಮಾ ಸುದ್ದಿ

ಆರ್ ಆರ್ ವೆಟ್ರಿ ವೇಲ್ ನಿರ್ದೇಶನದ 'VK 30' ಚಿತ್ರದಲ್ಲಿ ನಟ ದುನಿಯಾ ವಿಜಯ್; ಕೆಪಿ ಶ್ರೀಕಾಂತ್ ನಿರ್ಮಾಪಕ

ದುನಿಯಾ ವಿಜಯ್ ಅವರ ಭೀಮ ಚಿತ್ರದಲ್ಲಿ ಸಹ ನಿರ್ದೇಶಕರಾಗಿದ್ದ ಮಹೇಶ್ ಅವರು ವೆಟ್ರಿ ವೇಲ್ ಎಂದು ಹೆಸರು ಬದಲಿಸಿಕೊಂಡಿದ್ದಾರೆ.

ಕೊನೆಯದಾಗಿ ಭೀಮ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ನಟ ದುನಿಯಾ ವಿಜಯ್ ಇದೀಗ ಹೊಸ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೊಸ ಸಿನಿಮಾಗಾಗಿ ಸಲಗ ಚಿತ್ರದ ನಂತರ ಕೆಪಿ ಶ್ರೀಕಾಂತ್ ಜೊತೆಗೆ ಕೈಜೋಡಿಸುತ್ತಿದ್ದು, ಚಿತ್ರಕ್ಕೆ 'VK 30' ಎಂದು ತಾತ್ಕಾಲಿಕವಾಗಿ ಹೆಸರಿಡಲಾಗಿದೆ. ವಿಶೇಷ ಅಂದ್ರೆ ಈ ಚಿತ್ರಕ್ಕೆ ತಂಬಿ ಎಂದೇ ಹೆಸರಾದ ಆರ್ ಆರ್ ವೆಟ್ರಿ ವೇಲ್ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರವನ್ನು ಕೆಪಿ ಶ್ರೀಕಾಂತ್ ನಿರ್ಮಿಸುತ್ತಿದ್ದಾರೆ.

ನಟ ವಿಜಯ್ ಸಲಗ ಚಿತ್ರವನ್ನು ನಿರ್ದೇಶಿಸಿದ್ದರು. ಆದರೆ, ಈ ಬಾರಿ ಅವರು ನಟನೆಯ ಮೇಲೆ ಮಾತ್ರ ಗಮನ ಹರಿಸುತ್ತಿದ್ದು, ತಂಬಿಗೆ ನಿರ್ದೇಶನದ ಜವಾಬ್ದಾರಿಯನ್ನು ನೀಡಲಾಗಿದೆ. ದುನಿಯಾ ವಿಜಯ್ ಅವರ ಭೀಮ ಚಿತ್ರದಲ್ಲಿ ಸಹ ನಿರ್ದೇಶಕರಾಗಿದ್ದ ಮಹೇಶ್ ಅವರು ವೆಟ್ರಿ ವೇಲ್ ಎಂದು ಹೆಸರು ಬದಲಿಸಿಕೊಂಡಿದ್ದಾರೆ.

ವೀನಸ್ ಎಂಟರ್‌ಟೈನರ್ಸ್ ಬ್ಯಾನರ್‌ನಡಿಯಲ್ಲಿ ಗೀತಾ ಶಿವರಾಜ್‌ಕುಮಾರ್ ಬೆಂಬಲದೊಂದಿಗೆ 'ವಿಕೆ 30' ನಿರ್ಮಾಣವಾಗುತ್ತಿದೆ. ದುನಿಯಾ ವಿಜಯ್ ಹುಟ್ಟುಹಬ್ಬದಂದು ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದ್ದು, ಚಿತ್ರಕ್ಕಾಗಿ ಸಲಗ ಮತ್ತು ಭೀಮ ಚಿತ್ರತಂಡ ಒಂದಾಗಿದೆ. ಚಿತ್ರಕ್ಕೆ ಚರಣ್ ರಾಜ್ ಅವರ ಸಂಗೀತ, ಮಾಸ್ತಿ ಅವರ ಸಂಭಾಷಣೆ ಮತ್ತು ಶಿವಸೇನಾ ಅವರ ಛಾಯಾಗ್ರಹಣವಿದೆ.

ಸದ್ಯ, ವಿಜಯ್ ಕುಮಾರ್ ಅವರು ನಿರ್ದೇಶಕ ಜಡೇಶಾ ಕೆ ಹಂಪಿ ಅವರೊಂದಿಗೆ ಲ್ಯಾಂಡ್ ಲಾರ್ಡ್ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರದಲ್ಲಿ ವಿಜಯ್ ರಾಚಯ್ಯನ ಪಾತ್ರದಲ್ಲಿ ನಟಿಸಿದ್ದು, ರಚಿತಾ ರಾಮ್ ಮತ್ತು ರಾಜ್ ಬಿ ಶೆಟ್ಟಿ ಜೊತೆ ತೆರೆ ಹಂಚಿಕೊಂಡಿದ್ದಾರೆ. ಇದು ಮುಗಿದ ನಂತರ ವಿಜಯ್ ಅವರು ವಿಕೆ 30 ಚಿತ್ರೀಕರಣವನ್ನು ಪ್ರಾರಂಭಿಸುತ್ತಾರೆ.

ವಿಕೆ 30 ಚಿತ್ರದ ಪೋಸ್ಟರ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತ: 5ನೇ ತರಗತಿವರೆಗಿನ ವಿದ್ಯಾರ್ಥಿಗಳ ದೈಹಿಕ ತರಗತಿಗಳಿಗೆ ಬ್ರೇಕ್!

ಪಹಲ್ಗಾಮ್ ಉಗ್ರ ದಾಳಿ: 1,597 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ NIA; ಉನ್ನತ LeT ಕಮಾಂಡರ್ ಸಾಜಿದ್ ಜಾಟ್ ಹೆಸರು ಉಲ್ಲೇಖ!

Gold Rate: ಮತ್ತೆ ಗಗನಕ್ಕೇರಿದ ಚಿನ್ನದ ದರ, ಒಂದೇ ದಿನ ಬರೊಬ್ಬರಿ 4 ಸಾವಿರ ರೂ ಏರಿಕೆ, ಎಷ್ಟು ಗೊತ್ತಾ?

Video: ಯಶವಂತಪುರ ನಿಲ್ದಾಣದಲ್ಲಿ ಹೈಡ್ರಾಮಾ: RPF ಸಿಬ್ಬಂದಿ ಮೇಲೆ ಪುಂಡರ ಹಲ್ಲೆ, ರೈಲು ವಿಳಂಬ! ಆಗಿದ್ದೇನು?

ನವೆಂಬರ್‌ನಲ್ಲಿ ನಿರುದ್ಯೋಗ ದರ ಶೇ. 4.7 ಕ್ಕೆ ಇಳಿಕೆ, ಉದ್ಯೋಗ ಮಾರುಕಟ್ಟೆ ಚೇತರಿಕೆ!

SCROLL FOR NEXT