ನಟ ದರ್ಶನ್  
ಸಿನಿಮಾ ಸುದ್ದಿ

ನಟ ದರ್ಶನ್ ಮನವಿಗೆ ಡೋಂಟ್ ಕೇರ್: ಗನ್ ಲೈಸೆನ್ಸ್ ರದ್ದು ಮಾಡಿದ ಪೊಲೀಸ್

ನೀವು ಕೊಲೆ ಪ್ರಕರಣದ ಆರೋಪಿಯಾಗಿದ್ದೀರಿ. ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಬಳಿಯಿರುವ ಗನ್ ಲೈಸೆನ್ಸ್ ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ ಎಂದು ಪೊಲೀಸ್‌ ಕಮಿಷನರ್‌ ದಯಾನಂದ್‌ ತಿಳಿಸಿದ್ದಾರೆ.

ಮೂರು ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷೆ ವಿಧಿಸಬಹುದಾದ ಕೇಸ್‍ನಲ್ಲಿ ಆರೋಪಿಯಾಗಿರುವ ವ್ಯಕ್ತಿಯ ಬಳಿ ಲೈಸೆನ್ಸ್ ಇರುವ ಗನ್ ಇದ್ದರೆ ಅದನ್ನು ಕೂಡಲೇ ವಶಕ್ಕೆ ಪಡೆಯಲಾಗುತ್ತದೆ. ಅಲ್ಲದೇ ಆ ವ್ಯಕ್ತಿಯ ಲೈಸೆನ್ಸ್ ರದ್ದು ಮಾಡಬಹುದಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್‍ನಲ್ಲಿ ಲೈಸೆನ್ಸ್ ಗನ್ ಬಳಕೆ ಮಾಡಿರೊದು ಎಲ್ಲಿಯೂ ಕಂಡುಬರದ ಕಾರಣ ತಾತ್ಕಾಲಿಕವಾಗಿ ಅಂದರೆ ಕೇಸ್ ಮುಗಿಯುವತನಕ ಅಮಾನತ್ತಿನಲ್ಲಿಡಲು ಪೊಲೀಸರು ನಿರ್ಧರಿಸಿದ್ದಾರೆ.

ನಟ ದರ್ಶನ್ ಗನ್ ಲೈಸೆನ್ಸ್ ರದ್ದು ಮಾಡಲು ಈಗಾಗಲೇ ಪೊಲೀಸರು ನೋಟಿಸ್ ನೀಡಿದ್ದರು. ನೋಟಿಸ್‍ನಲ್ಲಿ, ನೀವು ಕೊಲೆ ಪ್ರಕರಣದ ಆರೋಪಿಯಾಗಿದ್ದೀರಿ. ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ಗನ್ ಇರುವುದರಿಂದ ಸಾಕ್ಷಿಗಳನ್ನು ಬೆದರಿಸುವ ಬಗ್ಗೆ ಅನುಮಾನ ಇದೆ. ಆದ್ದರಿಂದ ನಿಮ್ಮ ಲೈಸೆನ್ಸ್ ರದ್ದು ಮಾಡಬೇಕಿದೆ.

ಈ ಬಗ್ಗೆ ಒಂದು ವಾರದೊಳಗೆ ಉತ್ತರಿಸಬೇಕು. ನೋಟಿಸ್‍ಗೆ ಉತ್ತರ ನೀಡಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದರು.

ಪೊಲೀಸರಿಗೆ ಪತ್ರ ಬರೆದಿದ್ದ ದರ್ಶನ್, ತಮ್ಮ ಬಂದೂಕು ಲೈಸೆನ್ಸ್ ರದ್ದು ಮಾಡದಂತೆ ಮನವಿ ಮಾಡಿದ್ದರು. ತಮಗೆ ಭದ್ರತೆಯ ಅವಶ್ಯಕತೆ ಇದ್ದು, ಆ ಕಾರಣಕ್ಕೆ ತಮಗೆ ಬಂದೂಕಿನ ಅಗತ್ಯತೆ ಇದೆಯೆಂದು ಹೇಳಿದ್ದರು. ಆದರೆ ದರ್ಶನ್ ಮನವಿಯನ್ನು ತಿರಸ್ಕರಿಸಿರುವ ಪೊಲೀಸ್ ಇಲಾಖೆ, ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಮುಗಿಯುವವರೆಗೆ ಬಂದೂಕನ್ನು ಇರಿಸಿಕೊಳ್ಳುವಂತಿಲ್ಲ ಎಂದು ಹೇಳಿ ಲೈಸೆನ್ಸ್ ಅನ್ನು ತಾತ್ಕಾಲಿಕವಾಗಿ ರದ್ದು ಮಾಡಿದೆ. ಲೈಸೆನ್ಸ್ ರದ್ದಾಗಿರುವ ಕಾರಣ, ದರ್ಶನ್ ಈ ಕೂಡಲೇ ತಮ್ಮ ಬಂದೂಕನ್ನು ಸ್ಥಳೀಯ ಪೊಲೀಸ್ ಠಾಣೆಗೆ ಸರೆಂಡರ್ ಮಾಡಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT