ಸಿನಿಮಾ ಸುದ್ದಿ

ಲಾಯರ್ ಜಗದೀಶ್ ಮೇಲೆ ಭೀಕರ ಹಲ್ಲೆ: ರಕ್ತ ಸುರಿಯುತ್ತಿದ್ರು ವಿಡಿಯೋ ಮಾಡಿ ವಾರ್ನಿಂಗ್!

Bigg Boss Kannada 11ನೇ ಆವೃತ್ತಿಯ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದಾರೆ. ಕೈಕೈ ಮಿಲಾಯಿಸಿ ಬಿಗ್ ಬಾಸ್ ಮನೆಯಿಂದ ಜಗದೀಶ್ ಹೊರಬಂದಿದ್ದರು.

Bigg Boss Kannada 11ನೇ ಆವೃತ್ತಿಯ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದಾರೆ. ಕೈಕೈ ಮಿಲಾಯಿಸಿ ಬಿಗ್ ಬಾಸ್ ಮನೆಯಿಂದ ಜಗದೀಶ್ ಹೊರಬಂದಿದ್ದರು. ನಂತರ ಸುಮ್ಮನಿರದೆ ಅವರಿವರ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ಇನ್ನು ನಿನ್ನೆಯಷ್ಟೇ ಜಗದೀಶ್ ಅವರು ವ್ಯಕ್ತಿಯೊಬ್ಬರ ಜೊತೆ ಜಗಳವಾಗಿತ್ತು. ಇದರ ಬೆನ್ನಲ್ಲೇ ಇಂದು ಜಗದೀಶ್ ಮೇಲೆ ಭೀಕರವಾಗಿ ಹಲ್ಲೆ ಮಾಡಲಾಗಿದೆ. ಜಗದೀಶ್ ಮೂಗು, ತುಟಿಗಳಿಂದ ರಕ್ತ ಹೊರಬರುವಂತೆ ಹಲ್ಲೆ ನಡೆದಿದ್ದು, ರಕ್ತ ಸುರಿಯುತ್ತಿರುವಾಗಲೇ ಫೇಸ್​ ಬುಕ್ ಮೂಲಕ ಲೈವ್ ಬಂದು ಜಗದೀಶ್ ಮಾತನಾಡಿದ್ದಾರೆ.

ಪೊಲೀಸ್ ಜೀಪಿನಲ್ಲಿ ಕುಳಿತುಕೊಂಡೇ ಜಗದೀಶ್ ಅವರು ಲೈವ್ ಮಾಡಿದ್ದು ಇವತ್ತು ನನ್ನ ಮತ್ತು ನನ್ನ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಆಗಿದೆ. ಪೊಲೀಸರು ಬಂದು ನಮ್ಮನ್ನು ಕಾಪಾಡಿದರು. ನನ್ನ ಸ್ಕಾರ್ಪಿಯೋ ಕಾರನ್ನು ಧ್ವಂಸ ಮಾಡಿದ್ದಾರೆ. ನನ್ನು ಗನ್ ಮ್ಯಾನ್ ಮೇಲೂ ಹಲ್ಲೆ ಮಾಡಿದ್ದಾರೆ. ಜನಪರ ಧ್ವನಿ ಎತ್ತುವರರ ಮೇಲೆ ಹಲ್ಲೆ ಆಗಿದೆ. ಎಲ್ಲಿದೆ ಕಾನೂನು ಸುವ್ಯವಸ್ಥೆ. ಸಿಎಂ ಸಿದ್ದರಾಮಯ್ಯ ಅವರೇ ಏನು ಮಾಡುತ್ತಿದ್ದೀರಿ. ಅನ್ಯಾಯದ ವಿರುದ್ಧ ಧ್ವನಿ ಎತ್ತುವವರ ಸ್ಥಿತಿ ಏನಾಗಿದೆ. ಇದು ಟೆರರಿಸ್ಟ್​ ಗಳ ರಾಜ್ಯವಾಗಿದೆ ಎಂದು ಹೇಳಿದ್ದಾರೆ.

ನನ್ನನ್ನು, ನನ್ನ ಕುಟುಂಬವನ್ನು ಕೊಲ್ಲಲು ಕೆಲವು ಪುಡಿ ರೌಡಿಗಳು ನಮ್ಮ ಮೇಲೆ ದಾಳಿ ಮಾಡಿದ್ದಾರೆ. ಕರ್ನಾಟಕದಲ್ಲಿ ಪುಡಿ ರೌಡಿಗಳ ಹಾವಳಿ ಹೆಚ್ಚಾಗಿದೆ. ಸುಮಾರು 500ಕ್ಕೂ ಹೆಚ್ಚು ಜನ, ಮದ್ಯ ಸೇವಿಸಿ, ಗಾಂಜಾ ಮತ್ತಿನಲ್ಲಿ ನಮ್ಮ ಮೇಲೆ ದಾಳಿ ಮಾಡಿದ್ದಾರೆ. ನನ್ನು ಕಾಪಾಡಿ ಎಂದು ನಾನು ಗೋಗರಿಯಲ್ಲ. ನನ್ನ ಜೀವ ಹೋದರೂ ನಾನು ಯೋಚನೆ ಮಾಡಲ್ಲ. ಆದರೆ ಅನ್ಯಾಯ ಗೆಲ್ಲಬಾರದು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ನಾನು ಇವರನ್ನು ಬಿಡುವುದಿಲ್ಲ. ದಾಳಿಕೋರರ ವಿರುದ್ಧ ಠಾಣೆಯಲ್ಲಿ ದೂರು ನೀಡಿದ್ದಾಗಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT