ಮುಹೂರ್ತ ಸಮಾರಂಭದಲ್ಲಿ ನಟ ಕಿಚ್ಚ ಸುದೀಪ್ 
ಸಿನಿಮಾ ಸುದ್ದಿ

ಸಂಚಿತ್ ಸಂಜೀವ್ ಚೊಚ್ಚಲ ಚಿತ್ರ; ಮುಹೂರ್ತಕ್ಕೆ ಬಂದು ಸೋದರಳಿಯನಿಗೆ ಹಾರೈಸಿದ ಕಿಚ್ಚ ಸುದೀಪ್!

ಚಿತ್ರಕ್ಕೆ ತಾತ್ಕಾಲಿಕವಾಗಿ ಸಂಚಿ01 ಎಂದು ಹೆಸರಿಡಲಾಗಿದ್ದು, ಮೈಸೂರಿನಲ್ಲಿ ನಡೆಯುವ ಈ ಕಥೆಯು 1990 ಮತ್ತು 2010 ರ ನಡುವಿನ ನೈಜ ಘಟನೆಗಳಿಂದ ಪ್ರೇರಿತಗೊಂಡಿದೆ.

ಕಿಚ್ಚ ಸುದೀಪ್ ಅವರ ಅಕ್ಕ ಸರೋಜಾ ಅವರ ಮಗ ಸಂಚಿತ್ ಸಂಜೀವ್ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಚಿತ್ರವನ್ನು KRG ಸ್ಟುಡಿಯೋಸ್ ಮತ್ತು ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಜಂಟಿಯಾಗಿ ನಿರ್ಮಿಸುತ್ತಿದ್ದು, ಶುಕ್ರವಾರ ಸಾಂಪ್ರದಾಯಿಕ ಮುಹೂರ್ತ ಸಮಾರಂಭದೊಂದಿಗೆ ಚಿತ್ರ ಸೆಟ್ಟೇರಿದೆ. ಸಮಾರಂಭದಲ್ಲಿ ಸುದೀಪ್ ಅವರ ತಂದೆ, ಅಶ್ವಿನಿ ಪುನೀತ್ ರಾಜ್‌ಕುಮಾರ್, ಯುವ ರಾಜ್‌ಕುಮಾರ್ ಮತ್ತು ಇತರರು ಪಾಲ್ಗೊಂಡಿದ್ದರು. ಫೆಬ್ರುವರಿ 5 ರಂದು ಸಂಚಿ ಅವರ ಜನ್ಮದಿನದಂದು ಚಿತ್ರದ ಶೀರ್ಷಿಕೆ ಮತ್ತು ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದೆ.

ಚಿತ್ರಕ್ಕೆ ತಾತ್ಕಾಲಿಕವಾಗಿ ಸಂಚಿ01 ಎಂದು ಹೆಸರಿಡಲಾಗಿದ್ದು, ಮೈಸೂರಿನಲ್ಲಿ ನಡೆಯುವ ಈ ಕಥೆಯು 1990 ಮತ್ತು 2010 ರ ನಡುವಿನ ನೈಜ ಘಟನೆಗಳಿಂದ ಪ್ರೇರಿತಗೊಂಡಿದೆ. ದಿಟ್ಟ ಮತ್ತು ಸಾಹಸಮಯ ವ್ಯಕ್ತಿಯ ಕಥೆಯನ್ನು ಹೇಳುತ್ತದೆ.

ಚಿತ್ರಕ್ಕೆ ವಿವೇಕ್ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಕುತೂಹಲಕಾರಿ ಪಾತ್ರಗಳು ಮತ್ತು ವಿಶಿಷ್ಟವಾದ ಕಥಾಹಂದರದ ಮಿಶ್ರಣದೊಂದಿಗೆ ತೆರೆಗೆ ಬರಲಿದೆ. ಚಿತ್ರದಲ್ಲಿ ಮಾಲಾಶ್ರೀ ಮತ್ತು ಮಯೂರ್ ಪಟೇಲ್ ಜೊತೆಗೆ ಕಾಜಲ್ ಕುಂದರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ ನೀಡಲಿದ್ದು, ಶೇಖರ್ ಚಂದ್ರ ಅವರ ಛಾಯಾಗ್ರಹಣ, ಶರತ್ ವಸಿಷ್ಠ ಅವರ ಸಂಕಲನ ಮತ್ತು ವಿಶ್ವಾಸ್ ಕಶ್ಯಪ್ ನಿರ್ಮಾಣ ವಿನ್ಯಾಸವನ್ನು ನಿರ್ವಹಿಸುತ್ತಿದ್ದಾರೆ.

ಕಥೆ ಮತ್ತು ಚಿತ್ರಕಥೆಯನ್ನು ವಿವೇಕ್ ಮತ್ತು ನಾಗಭೂಷಣ ದೇಶಪಾಂಡೆ ಬರೆದಿದ್ದಾರೆ. ಸುಪ್ರಿಯಾನ್ವಿ ಸ್ಟುಡಿಯೋಸ್ ಅಡಿಯಲ್ಲಿ ಪ್ರಿಯಾ ಸುದೀಪ್ ಸಹಯೋಗದೊಂದಿಗೆ ಕೆಆರ್‌ಜಿ ಸ್ಟುಡಿಯೋಸ್‌ನ ಕಾರ್ತಿಕ್ ಮತ್ತು ಯೋಗಿ ಜಿ ರಾಜ್ ನಿರ್ಮಿಸಿರುವ ಈ ಚಿತ್ರವು ಫೆಬ್ರುವರಿ 10 ರಂದು ಚಿತ್ರೀಕರಣವನ್ನು ಪ್ರಾರಂಭಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT