ನಟ ಗಣೇಶ್ 
ಸಿನಿಮಾ ಸುದ್ದಿ

ದಿವಂಗತ ಪುನೀತ್ ರಾಜ್‌ಕುಮಾರ್ ನಟನೆಯ 'ಜೇಮ್ಸ್' ನಿರ್ದೇಶಕ ಚೇತನ್ ಕುಮಾರ್ ಜೊತೆ ಗಣೇಶ್ ಹೊಸ ಚಿತ್ರ

ಚಿತ್ರದ ಪ್ರೀ-ಪ್ರೊಡಕ್ಷನ್ ಕಾರ್ಯವು ಈಗಾಗಲೇ ನಡೆಯುತ್ತಿದೆ ಮತ್ತು ಜುಲೈ 2 ರಂದು ಗಣೇಶ್ ಅವರ ಜನ್ಮದಿನದಂದು ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ.

ಕೃಷ್ಣಂ ಪ್ರಣಯ ಸಖಿ ಚಿತ್ರದ ಯಶಸ್ಸಿನ ಗುಂಗಿನಲ್ಲಿರುವ ಗೋಲ್ಡನ್ ಸ್ಟಾರ್ ಗಣೇಶ್ ಸದ್ಯ ಹಲವಾರು ಅತ್ಯಾಕರ್ಷಕ ಯೋಜನೆಗಳಲ್ಲಿ ತೊಡಗಿಕೊಂಡಿದ್ದಾರೆ. ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಕೊನೆಯ ಚಿತ್ರ 'ಜೇಮ್ಸ್' ನಿರ್ದೇಶಿಸಿದ್ದ ನಿರ್ದೇಶಕ ಚೇತನ್ ಕುಮಾರ್ ಅವರ ಮುಂಬರುವ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಗಣೇಶ್ ಮತ್ತು ಚೇತನ್ ಜೋಡಿಯು ಚಿತ್ರವೊಂದರಲ್ಲಿ ಕೆಲಸ ಮಾಡಲಿದೆ ಎಂದು ಈ ಮೊದಲೇ ವರದಿಯಾಗಿದ್ದರೂ, ಇದೀಗ ಯೋಜನೆಗೆ ಅಧಿಕೃತವಾಗಿ ಮುದ್ರೆಯೊತ್ತಲಾಗಿದೆ. ಈ ಯೋಜನೆಗೆ ನಿರ್ಮಾಪಕ ಮುನೇಗೌಡ ಬೆಂಬಲ ನೀಡಲಿದ್ದಾರೆ. ಅವರು ಈ ಹಿಂದೆ 'ಭುವನಂ ಗಗನಂ' ಮತ್ತು ಇನ್ನೂ ಬಿಡುಗಡೆಯಾಗದ ಅಯೋಗ್ಯ 2 ಚಿತ್ರವನ್ನು ನಿರ್ಮಿಸಿದ್ದಾರೆ. ಇದು ಗಣೇಶ್, ಚೇತನ್ ಮತ್ತು ಮುನೇಗೌಡ ನಡುವಿನ ಮೊದಲ ಸಹಯೋಗವಾಗಿದೆ.

ರೊಮ್ಯಾನ್ಸ್ ಮತ್ತು ಫ್ಯಾಮಿಲಿ ಎಂಟರ್‌ಟೈನರ್ ಚಿತ್ರಗಳಿಗೆ ಹೆಸರುವಾಸಿಯಾದ ಗಣೇಶ್, ಈಗಲೂ ಅದೇ ಧಾಟಿಯಲ್ಲಿ ಮುಂದುವರಿಯುವ ನಿರೀಕ್ಷೆಯಿದೆ. ಆದರೆ, ಕಮರ್ಷಿಯಲ್ ಎಂಟರ್‌ಟೈನರ್ ಚಿತ್ರಗಳ ನಿರ್ದೇಶನಕ್ಕೆ ಹೆಸರುವಾಸಿಯಾದ ಚೇತನ್, ಯಾವ ರೀತಿಯ ಚಿತ್ರವನ್ನು ನಿರ್ದೇಶಿಸಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

ಚಿತ್ರದ ಪ್ರೀ-ಪ್ರೊಡಕ್ಷನ್ ಕಾರ್ಯವು ಈಗಾಗಲೇ ನಡೆಯುತ್ತಿದೆ ಮತ್ತು ಜುಲೈ 2 ರಂದು ಗಣೇಶ್ ಅವರ ಜನ್ಮದಿನದಂದು ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ.

ಈಮಧ್ಯೆ, ಗಣೇಶ್ ಸದ್ಯ ವಿಖ್ಯಾತ್ ನಿರ್ದೇಶನದ 'Yours Sincerely ರಾಮ್' ಮತ್ತು ನೃತ್ಯ ಸಂಯೋಜಕ-ನಿರ್ದೇಶಕ ಧನಂಜಯ್ ನಿರ್ದೇಶನದ ಪಿನಾಕಾದಲ್ಲಿ ನಟಿಸುತ್ತಿದ್ದಾರೆ. ಅರಸು ಅಂತಾರೆ ನಿರ್ದೇಶನದ ಇನ್ನೂ ಹೆಸರಿಡದ ಚಿತ್ರದ ಚಿತ್ರೀಕರಣ ಈಗಾಗಲೇ ಪೂರ್ಣಗೊಳಿಸಿದ್ದಾರೆ.

ಗಣೇಶ್ 'ಕೃಷ್ಣಂ ಪ್ರಣಯ ಸಖಿ' ನಿರ್ದೇಶಕ ಶ್ರೀನಿವಾಸ್ ರಾಜು ಅವರೊಂದಿಗೂ ಮತ್ತೊಂದು ಚಿತ್ರಕ್ಕಾಗಿ ಮತ್ತೆ ಒಂದಾಗುತ್ತಿದ್ದಾರೆ. ಈ ಚಿತ್ರವನ್ನು ಸಮೃದ್ಧಿ ಮಂಜುನಾಥ್ ನಿರ್ಮಿಸಲಿದ್ದಾರೆ. ಈ ಯೋಜನೆ ಸೆಪ್ಟೆಂಬರ್‌ನಲ್ಲಿ ಆರಂಭವಾಗಲಿದ್ದು, ಅದೇ ಸಮಯದಲ್ಲಿ ಚೇತನ್ ಕುಮಾರ್ ಅವರ ಚಿತ್ರದ ಕೆಲಸವನ್ನೂ ಪ್ರಾರಂಭಿಸುವ ಭರವಸೆ ಗಣೇಶ್ ಅವರಿಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 35 ಮಿ. ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ-Video

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

ಕೇರಳ- ಕೇರಳಂ: ಯಾವುದೇ ಪ್ರಯೋಜನವಿಲ್ಲ, ಹೆಸರು ಬದಲಿಸುವ ಬದಲು ಹೆಚ್ಚಿನ ಅನುದಾನ ಘೋಷಿಸಿ; ಅಚ್ಚರಿ ಮೂಡಿಸಿದ ಶಶಿ ತರೂರ್ ವಿರೋಧ!

SCROLL FOR NEXT