ನಟ ಗಣೇಶ್ 
ಸಿನಿಮಾ ಸುದ್ದಿ

ದಿವಂಗತ ಪುನೀತ್ ರಾಜ್‌ಕುಮಾರ್ ನಟನೆಯ 'ಜೇಮ್ಸ್' ನಿರ್ದೇಶಕ ಚೇತನ್ ಕುಮಾರ್ ಜೊತೆ ಗಣೇಶ್ ಹೊಸ ಚಿತ್ರ

ಚಿತ್ರದ ಪ್ರೀ-ಪ್ರೊಡಕ್ಷನ್ ಕಾರ್ಯವು ಈಗಾಗಲೇ ನಡೆಯುತ್ತಿದೆ ಮತ್ತು ಜುಲೈ 2 ರಂದು ಗಣೇಶ್ ಅವರ ಜನ್ಮದಿನದಂದು ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ.

ಕೃಷ್ಣಂ ಪ್ರಣಯ ಸಖಿ ಚಿತ್ರದ ಯಶಸ್ಸಿನ ಗುಂಗಿನಲ್ಲಿರುವ ಗೋಲ್ಡನ್ ಸ್ಟಾರ್ ಗಣೇಶ್ ಸದ್ಯ ಹಲವಾರು ಅತ್ಯಾಕರ್ಷಕ ಯೋಜನೆಗಳಲ್ಲಿ ತೊಡಗಿಕೊಂಡಿದ್ದಾರೆ. ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಕೊನೆಯ ಚಿತ್ರ 'ಜೇಮ್ಸ್' ನಿರ್ದೇಶಿಸಿದ್ದ ನಿರ್ದೇಶಕ ಚೇತನ್ ಕುಮಾರ್ ಅವರ ಮುಂಬರುವ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಗಣೇಶ್ ಮತ್ತು ಚೇತನ್ ಜೋಡಿಯು ಚಿತ್ರವೊಂದರಲ್ಲಿ ಕೆಲಸ ಮಾಡಲಿದೆ ಎಂದು ಈ ಮೊದಲೇ ವರದಿಯಾಗಿದ್ದರೂ, ಇದೀಗ ಯೋಜನೆಗೆ ಅಧಿಕೃತವಾಗಿ ಮುದ್ರೆಯೊತ್ತಲಾಗಿದೆ. ಈ ಯೋಜನೆಗೆ ನಿರ್ಮಾಪಕ ಮುನೇಗೌಡ ಬೆಂಬಲ ನೀಡಲಿದ್ದಾರೆ. ಅವರು ಈ ಹಿಂದೆ 'ಭುವನಂ ಗಗನಂ' ಮತ್ತು ಇನ್ನೂ ಬಿಡುಗಡೆಯಾಗದ ಅಯೋಗ್ಯ 2 ಚಿತ್ರವನ್ನು ನಿರ್ಮಿಸಿದ್ದಾರೆ. ಇದು ಗಣೇಶ್, ಚೇತನ್ ಮತ್ತು ಮುನೇಗೌಡ ನಡುವಿನ ಮೊದಲ ಸಹಯೋಗವಾಗಿದೆ.

ರೊಮ್ಯಾನ್ಸ್ ಮತ್ತು ಫ್ಯಾಮಿಲಿ ಎಂಟರ್‌ಟೈನರ್ ಚಿತ್ರಗಳಿಗೆ ಹೆಸರುವಾಸಿಯಾದ ಗಣೇಶ್, ಈಗಲೂ ಅದೇ ಧಾಟಿಯಲ್ಲಿ ಮುಂದುವರಿಯುವ ನಿರೀಕ್ಷೆಯಿದೆ. ಆದರೆ, ಕಮರ್ಷಿಯಲ್ ಎಂಟರ್‌ಟೈನರ್ ಚಿತ್ರಗಳ ನಿರ್ದೇಶನಕ್ಕೆ ಹೆಸರುವಾಸಿಯಾದ ಚೇತನ್, ಯಾವ ರೀತಿಯ ಚಿತ್ರವನ್ನು ನಿರ್ದೇಶಿಸಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

ಚಿತ್ರದ ಪ್ರೀ-ಪ್ರೊಡಕ್ಷನ್ ಕಾರ್ಯವು ಈಗಾಗಲೇ ನಡೆಯುತ್ತಿದೆ ಮತ್ತು ಜುಲೈ 2 ರಂದು ಗಣೇಶ್ ಅವರ ಜನ್ಮದಿನದಂದು ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ.

ಈಮಧ್ಯೆ, ಗಣೇಶ್ ಸದ್ಯ ವಿಖ್ಯಾತ್ ನಿರ್ದೇಶನದ 'Yours Sincerely ರಾಮ್' ಮತ್ತು ನೃತ್ಯ ಸಂಯೋಜಕ-ನಿರ್ದೇಶಕ ಧನಂಜಯ್ ನಿರ್ದೇಶನದ ಪಿನಾಕಾದಲ್ಲಿ ನಟಿಸುತ್ತಿದ್ದಾರೆ. ಅರಸು ಅಂತಾರೆ ನಿರ್ದೇಶನದ ಇನ್ನೂ ಹೆಸರಿಡದ ಚಿತ್ರದ ಚಿತ್ರೀಕರಣ ಈಗಾಗಲೇ ಪೂರ್ಣಗೊಳಿಸಿದ್ದಾರೆ.

ಗಣೇಶ್ 'ಕೃಷ್ಣಂ ಪ್ರಣಯ ಸಖಿ' ನಿರ್ದೇಶಕ ಶ್ರೀನಿವಾಸ್ ರಾಜು ಅವರೊಂದಿಗೂ ಮತ್ತೊಂದು ಚಿತ್ರಕ್ಕಾಗಿ ಮತ್ತೆ ಒಂದಾಗುತ್ತಿದ್ದಾರೆ. ಈ ಚಿತ್ರವನ್ನು ಸಮೃದ್ಧಿ ಮಂಜುನಾಥ್ ನಿರ್ಮಿಸಲಿದ್ದಾರೆ. ಈ ಯೋಜನೆ ಸೆಪ್ಟೆಂಬರ್‌ನಲ್ಲಿ ಆರಂಭವಾಗಲಿದ್ದು, ಅದೇ ಸಮಯದಲ್ಲಿ ಚೇತನ್ ಕುಮಾರ್ ಅವರ ಚಿತ್ರದ ಕೆಲಸವನ್ನೂ ಪ್ರಾರಂಭಿಸುವ ಭರವಸೆ ಗಣೇಶ್ ಅವರಿಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT