ಶ್ರೀನಿ 
ಸಿನಿಮಾ ಸುದ್ದಿ

ಕೆವಿಎನ್ ಪ್ರೊಡಕ್ಷನ್ಸ್ ಬೆಂಬಲ: ಸದ್ದಿಲ್ಲದೆ ಸೆಟ್ಟೇರಿದ ಘೋಸ್ಟ್ ಖ್ಯಾತಿಯ ಶ್ರೀನಿ ನಿರ್ದೇಶನದ 'ಬೀರ್‌ಬಲ್ 2'

ಈ ಯೋಜನೆಯ ವಿವರಗಳನ್ನು ಗೌಪ್ಯವಾಗಿಡಲಾಗಿದ್ದರೂ, ಬೀರ್‌ಬಲ್ 2 ಸದ್ದಿಲ್ಲದೆ ಔಪಚಾರಿಕ ಮುಹೂರ್ತದೊಂದಿಗೆ ಪ್ರಾರಂಭವಾಗಿದೆ ಎಂದು ಸಿನಿಮಾ ಎಕ್ಸ್‌ಪ್ರೆಸ್‌ಗೆ ತಿಳಿದುಬಂದಿದೆ.

ಶಿವರಾಜ್‌ಕುಮಾರ್ ನಟನೆ ಆ್ಯಕ್ಷನ್-ಥ್ರಿಲ್ಲರ್ ಚಿತ್ರ 'ಘೋಸ್ಟ್'ಗೆ ಹೆಸರುವಾಸಿಯಾದ ನಿರ್ದೇಶಕ ಶ್ರೀನಿ ಇದೀಗ 'ಬೀರ್‌ಬಲ್ 2' ಚಿತ್ರದ ಮೂಲಕ ಮರಳಲು ಸಿದ್ಧರಾಗಿದ್ದಾರೆ. 'ಬೀರ್‌ಬಲ್' ಚಿತ್ರದ ಸೀಕ್ವೆನ್ಸ್ ಅಧಿಕೃತವಾಗಿ ಆರಂಭವಾಗಿದ್ದು, ಹೈ ಪ್ರೊಫೈಲ್ ಕೆವಿಎನ್ ಪ್ರೊಡಕ್ಷನ್ಸ್ ಈ ಯೋಜನೆಗೆ ಬೆಂಬಲ ನೀಡುತ್ತಿದೆ ಎಂದು ಮೂಲಗಳು ಬಹಿರಂಗಪಡಿಸಿವೆ. ನಟ ಧ್ರುವ ಸರ್ಜಾ ಅಭಿನಯದ 'ಕೆಡಿ' ಮತ್ತು ತಮಿಳು ಸೂಪರ್‌ಸ್ಟಾರ್ ವಿಜಯ್ ಅಭಿನಯದ 'ಜನ ನಾಯಗನ್' ಚಿತ್ರಕ್ಕೆ ವೆಂಕಟ್ ಕೆ ನಾರಾಯಣ ಈಗಾಗಲೇ ಬೆಂಬಲ ನೀಡುತ್ತಿದ್ದಾರೆ.

ಈ ಯೋಜನೆಯ ವಿವರಗಳನ್ನು ಗೌಪ್ಯವಾಗಿಡಲಾಗಿದ್ದರೂ, ಬೀರ್‌ಬಲ್ 2 ಸದ್ದಿಲ್ಲದೆ ಔಪಚಾರಿಕ ಮುಹೂರ್ತದೊಂದಿಗೆ ಪ್ರಾರಂಭವಾಗಿದೆ ಮತ್ತು ಈ ವಾರದ ಕೊನೆಯಲ್ಲಿ ಚಿತ್ರೀಕರಣ ಪ್ರಾರಂಭವಾಗುವ ನಿರೀಕ್ಷೆಯಿದೆ ಎಂದು ಸಿನಿಮಾ ಎಕ್ಸ್‌ಪ್ರೆಸ್‌ಗೆ ತಿಳಿದುಬಂದಿದೆ.

ಶ್ರೀನಿ ಈ ಹಿಂದೆ ಬೀರ್‌ಬಲ್ ಪಾತ್ರವನ್ನು ಘೋಸ್ಟ್‌ನಲ್ಲಿ ಸೂಕ್ಷ್ಮವಾಗಿ ಸೇರಿಸುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದರು. ಇದು ಸಂಭಾವ್ಯ ಕ್ರಾಸ್‌ಒವರ್ ಬಗ್ಗೆ ಗುಸುಗುಸು ಹುಟ್ಟಿಸಿತು. ಇದೀಗ ವಿಶಿಷ್ಟವಾದ ಘೋಸ್ಟ್-ಬೀರ್ಬಲ್ ಮಲ್ಟಿವರ್ಸ್ ಆಗಿ ಕಾರ್ಯರೂಪಕ್ಕೆ ಬಂದಿದ್ದು, ಮುಂಬರುವ ಸೀಕ್ವೆಲ್‌ಗೆ ಹೊಸ ಆಯಾಮ ನೀಡಲಿದೆ.

2019ರಲ್ಲಿ ಬಿಡುಗಡೆಯಾದ ಮೂಲ ಬೀರ್‌ಬಲ್: ಕೇಸ್ 1' ಚಿತ್ರದಲ್ಲಿ ನಟಿ ರುಕ್ಮಿಣಿ ವಸಂತ್ ನಟಿಸಿದ್ದರು. ಅದಾದ ಬಳಿಕ ಅವರು ರಕ್ಷಿತ್ ಶೆಟ್ಟಿ ಜೊತೆ ಸಪ್ತ ಸಾಗರದಾಚೆ ಎಲ್ಲೋ ಮತ್ತು ಶ್ರೀಮುರಳಿ ಜೊತೆ ಬಘೀರ ಸೇರಿದಂತೆ ಇತರ ಚಿತ್ರಗಳಲ್ಲಿ ನಟಿಸಿದ್ದಾರೆ. ಆದಾಗ್ಯೂ, ಬೀರ್‌ಬಲ್ 2 ಚಿತ್ರದಲ್ಲಿ ರುಕ್ಮಿಣಿ ವಸಂತ್ ಇರುವುದಿಲ್ಲ ಎಂದು ತಿಳಿದುಬಂದಿದೆ ಮತ್ತು ಶ್ರೀನಿ ಹೊಸ ನಾಯಕಿಯ ಹುಡುಕಾಟದಲ್ಲಿದ್ದಾರೆ.

ಪಾತ್ರವರ್ಗ ಮತ್ತು ಸಿಬ್ಬಂದಿ ಕುರಿತು ಹೆಚ್ಚಿನ ವಿವರಗಳನ್ನು ಸದ್ಯಕ್ಕೆ ಗೌಪ್ಯವಾಗಿಡಲಾಗಿದೆ. ಶ್ರೀನಿ ಮತ್ತು ಕೆವಿಎನ್ ಪ್ರೊಡಕ್ಷನ್ಸ್‌ನಿಂದ ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT