ಮಡೆನೂರು ಮನು 
ಸಿನಿಮಾ ಸುದ್ದಿ

ಜೊತೆಯಲ್ಲಿ ಇದ್ದವರೇ ಚೂರಿ ಹಾಕಿದರು, ಆ ವಾಯ್ಸ್ ನನ್ನದೆ; ಕ್ಷಮಿಸಿ.. ಕ್ಷಮಿಸಿ.. ಕ್ಷಮಿಸಿ: ಮಡೆನೂರು ಮನು

ಒಂದ ಸಲ ದರ್ಶನ್‌ ಅವರನ್ನ ಮೀಟ್‌ ಮಾಡಿ, ಅಂದ್ರು, ಡಿ ಬಾಸ್‌‌ ನಾನು ಪುಟ್ಟ ಕಲಾವಿದ. ನನ್ನನ್ನು ದಯವಿಟ್ಟು ಕ್ಷಮಿಸಿ. ನಾನು ಸುಮಾರು ಸಲ ಅವರನ್ನು ಭೇಟಿಯಾಗುವ ಉದ್ದೇಶದಿಂದ ಕರೆ ಮಾಡಿದೆ, ಮೆಸೇಜ್ ಮಾಡಿದೆ.

ಬೆಂಗಳೂರು: ಕನ್ನಡದ ಸ್ಟಾರ್‌ ನಟರಾದ ಶಿವರಾಜ್‌ಕುಮಾರ್, ದರ್ಶನ್ ಹಾಗೂ ಧ್ರುವ ಸರ್ಜಾ ಬಗ್ಗೆ ನಟ ಮಡೆನೂರು ಮನು ಅವಹೇಳನಕಾರಿಯಾಗಿ ಮಾತನಾಡಿದ್ದ ಆಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ಇದರಿಂದ ನಟರ​ ಅಭಿಮಾನಿಗಳು ತೀವ್ರ ಆಕ್ರೋಶ ಹೊರ ಹಾಕಿದ್ದರು.

ಈ ವಿಚಾರವಾಗಿ ಇತ್ತೀಚೆಗೆ ಶಿವರಾಜ್‌ಕುಮಾರ್‌ ಅವರಿಗೆ ಕ್ಷಮೆಯಾಚಿಸಿದ್ದ ನಟ ಮಡೆನೂರು ಮನು ಇದೀಗ ನಟ ದರ್ಶನ್ ಅವರಿಗೆ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ತುಂಬಾ ಡಿ ಬಾಸ್‌ ಫ್ಯಾನ್ಸ್‌‌ ನನಗೆ ಫೋನ್‌ ಮೆಸೇಜ್‌ ಎಲ್ಲ ಮಾಡಿದ್ದರು. ಒಂದ ಸಲ ದರ್ಶನ್‌ ಅವರನ್ನ ಮೀಟ್‌ ಮಾಡಿ, ಅಂದ್ರು, ಡಿ ಬಾಸ್‌‌ ನಾನು ಪುಟ್ಟ ಕಲಾವಿದ. ನನ್ನನ್ನು ದಯವಿಟ್ಟು ಕ್ಷಮಿಸಿ. ನಾನು ಸುಮಾರು ಸಲ ಅವರನ್ನು ಭೇಟಿಯಾಗುವ ಉದ್ದೇಶದಿಂದ ಕರೆ ಮಾಡಿದೆ, ಮೆಸೇಜ್ ಮಾಡಿದೆ. ಆದರೆ ಅವರು ಬ್ಯುಸಿಯಾಗಿದ್ದಾರೆ ಎನ್ನುವುದು ನನಗೆ ಗೊತ್ತಾಯ್ತು ಎಂದು ಹೇಳಿರುವ ಮಡೆನೂರು ಮನು, ಹೀಗಾಗಿ ಬಹಿರಂಗವಾಗಿ ಕ್ಷಮೆ ಕೇಳಬೇಕು ಎನ್ನುವ ಉದ್ದೇಶದಿಂದ ನಾನು ಈ ವಿಡಿಯೋ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ನನ್ನ ಉಸಿರು ಇರುವವರೆಗೂ ನಿಮ್ಮನ್ನೆಲ್ಲ ನಾನು ಮರೆಯೋದಿಲ್ಲ ಎಂದು ಹೇಳಿದ್ದಾರೆ ಮಡೆನೂರು ಮನು.

ಡಿ ಬಾಸ್​ ನಾನೊಬ್ಬ ಪುಟ್ಟ ಕಲಾವಿದ. ಒಂದು ಸಂಘ, ಸಹವಾಸಗಳನ್ನು ಮಾಡಿ, ಜೊತೆಯಲ್ಲಿ ಇರುವವರನ್ನು ನಂಬಿ, ಈ ಆಡಿಯೋಗೆ ನಾನು ಬಲಿಯಾಗಿದ್ದೇನೆ ಎಂದಿರುವ ಮಡೆನೂರು ಮನು, ದಯಮಾಡಿ ನನ್ನ ಕ್ಷಮಿಸಿ..ಕ್ಷಮಿಸಿ..ಕ್ಷಮಿಸಿ.. ಎಂದು ಕೈ ಮುಗಿದು ಕೇಳಿಕೊಂಡಿದ್ದಾರೆ.

ಕುಲದಲ್ಲಿ ಕೀಳ್ಯಾವುದೋ ಸಿನಿಮಾ ಬಿಡುಗಡೆ ಹೊತ್ತಲ್ಲಿ ನಟ ಮಡೇನೂರು ಮನು ಅವರ ಆಡಿಯೋ ವೈರಲ್‌ ಆಗಿತ್ತು. ಜತೆಗೆ ಸಹನಟಿ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಪ್ರಕರಣ ದಾಖಲಾಗಿ ಬಂಧನವಾಗಿದ್ದರು. ಶಿವಣ್ಣ, ದರ್ಶನ್ ಮತ್ತು ಧ್ರುವ ಸರ್ಜಾ ಬಗ್ಗೆ ಆಡಿಯೋ ನನ್ನದಲ್ಲ. ನಾನು ಶಿವಣ್ಣ, ದರ್ಶನ್ ಮತ್ತು ಧ್ರುವ ಬಗ್ಗೆ ಮಾತನಾಡಿಲ್ಲ ಎಂದು ಮಡೆನೂರು ಮನು ರಿಲೀಸ್‌ ಆದ ಬಳಿಕ ಹೇಳಿಕೆ ನೀಡಿದ್ದರು. ಇದೀಗ ಮತ್ತೆ ವಿಡಿಯೋ ಮೂಲಕ ದರ್ಶನ್‌ ಫ್ಯಾನ್ಸ್‌ಗೆ ಕ್ಷಮೆಯಾಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

SCROLL FOR NEXT