ಕಮಲ್ ಶ್ರೀದೇವಿ ಚಿತ್ರದ ಚಿತ್ರೀಕರಣ ಪೂರ್ಣ 
ಸಿನಿಮಾ ಸುದ್ದಿ

ಸಚಿವ ಚೆಲುವರಾಯಸ್ವಾಮಿ ನಟನೆಯ 'ಕಮಲ್ ಶ್ರೀದೇವಿ' ಚಿತ್ರೀಕರಣ ಪೂರ್ಣ; ತ್ರಿಭಾಷೆಯಲ್ಲಿ ಬಿಡುಗಡೆ

ಸಚಿವ ಎನ್ ಚೆಲುವರಾಯಸ್ವಾಮಿ ಅವರು ಪ್ರಸ್ತುತ ಪಡಿಸುತ್ತಿರುವ ಚಿತ್ರದಲ್ಲಿ ಅವರ ಮಗ ಸಚಿನ್ ನಾಯಕನಾಗಿದ್ದಾರೆ. ನಟಿ ಸಂಗೀತ ಭಟ್ ಸಚಿನ್‌ಗೆ ಜೊತೆಯಾಗಿದ್ದಾರೆ.

ಸುನೀಲ್ ಕುಮಾರ್ ವಿಎ ನಿರ್ದೇಶನದ 'ಕಮಲ್ ಶ್ರೀದೇವಿ' ಚಿತ್ರ ಈಗಾಗಲೇ ತನ್ನ ಶೀರ್ಷಿಕೆಯಿಂದಲೇ ತೀವ್ರ ಕುತೂಹಲ ಮೂಡಿಸಿದ್ದು, ಚಿತ್ರೀಕರಣ ಪೂರ್ಣಗೊಂಡಿದೆ ಎಂದು ಚಿತ್ರತಂಡ ಘೋಷಿಸಿದೆ. 63 ದಿನಗಳ ಚುರುಕಾದ ಚಿತ್ರೀಕರಣದ ನಂತರ, ಚಿತ್ರತಂಡ ಮೈಸೂರಿನಲ್ಲಿ ಚಿತ್ರೀಕರಣವನ್ನು ಪೂರ್ಣಗೊಳಿಸಿದೆ.

ಸಚಿವ ಎನ್ ಚೆಲುವರಾಯಸ್ವಾಮಿ ಅವರು ಪ್ರಸ್ತುತ ಪಡಿಸುತ್ತಿರುವ ಚಿತ್ರದಲ್ಲಿ ಅವರ ಮಗ ಸಚಿನ್ ನಾಯಕನಾಗಿದ್ದಾರೆ. ಹ್ಯಾಪಿ ಬರ್ತ್‌ಡೇ (2016) ಮತ್ತು ಬೆಂಗಳೂರು ಬಾಯ್ಸ್ (2023) ನಂತರ ಸಚಿನ್ ಅವರ ಮೂರನೇ ಚಿತ್ರ ಇದಾಗಿದೆ. ಸ್ವರ್ಣಾಂಬಿಕಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಧನಲಕ್ಷ್ಮಿ ಬಿಕೆ ಚಿತ್ರವನ್ನು ನಿರ್ಮಿಸಲಿದ್ದಾರೆ ಮತ್ತು ರಾಜವರ್ದನ್ ಅವರ ಬಾರ್ನ್ ಸ್ವಾಲೋ ಸಹ ನಿರ್ಮಾಣದ ಹೊಣೆ ಹೊತ್ತಿದೆ. ಚಿತ್ರದಲ್ಲಿ ರಾಜವರ್ದನ್ ಕ್ರಿಯೇಟೀವ್ ಹೆಡ್ ಆಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ನಟ ಕಿಶೋರ್ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಎರಡನೇ ಸಲ ಮತ್ತು ಕೊನೆಯದಾಗಿ ಕ್ಲಾಂಟಾ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ಸಂಗೀತ ಭಟ್ ಸಚಿನ್‌ಗೆ ಜೊತೆಯಾಗಿದ್ದಾರೆ. ಚಿತ್ರದಲ್ಲಿ ರಮೇಶ್ ಇಂದಿರಾ, ಮಿತ್ರ ಮತ್ತು ಎಂಎಸ್ ಉಮೇಶ್ ಸೇರಿದಂತೆ ಇತರರು ನಟಿಸಿದ್ದಾರೆ.

ಕಮಲ್ ಶ್ರೀದೇವಿ ಚಿತ್ರದ ಸ್ಟಿಲ್

ಕಮಲ್ ಶ್ರೀದೇವಿ ಚಿತ್ರವು ಕನ್ನಡ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆ ಮಾಡಲು ಯೋಜಿಸಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಚಿತ್ರವು ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಇನ್ಮುಂದೆ ಚಿತ್ರದ ಟೀಸರ್‌, ಹಾಡುಗಳು ಮತ್ತು ತೆರೆ ಹಿಂದಿನ ದೃಶ್ಯಗಳನ್ನು ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?