ದೀಪ್ಶಿಖಾ ಉಮಾಪತಿ 
ಸಿನಿಮಾ ಸುದ್ದಿ

ವಿಜಯ್ ಕಾರ್ತಿಕೇಯನ್ ನಿರ್ದೇಶನದ, ಕಿಚ್ಚ ಸುದೀಪ್ ನಟನೆಯ 'K47' ಚಿತ್ರತಂಡಕ್ಕೆ ದೀಪ್ಶಿಖಾ ಸೇರ್ಪಡೆ!

ಮ್ಯಾಕ್ಸ್ ಚಿತ್ರಕ್ಕಾಗಿ ಕೆಲಸ ಮಾಡಿದ್ದ ತಾಂತ್ರಿಕ ತಂಡವು ಈ ಯೋಜನೆಯಲ್ಲಿಯೂ ಮುಂದುವರೆದಿದೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ ಮತ್ತು ಶೇಖರ್ ಚಂದ್ರು ಛಾಯಾಗ್ರಹಣವನ್ನು ನಿರ್ವಹಿಸಿದ್ದಾರೆ.

ಕಿಚ್ಚ ಸುದೀಪ್ ಅವರ K47 ಚಿತ್ರವು ಚೆನ್ನೈನಲ್ಲಿ ನಡೆದ ಸರಳ ಮುಹೂರ್ತ ಸಮಾರಂಭದೊಂದಿಗೆ ಅಧಿಕೃತವಾಗಿ ಆರಂಭಗೊಂಡಿದೆ. ವಿಜಯ್ ಕಾರ್ತಿಕೇಯನ್ ನಿರ್ದೇಶನದ ಈ ಚಿತ್ರವನ್ನು ಸತ್ಯ ಜ್ಯೋತಿ ಫಿಲ್ಮ್ಸ್ ನಿರ್ಮಿಸಿದೆ. ಮ್ಯಾಕ್ಸ್ ನಂತರ ನಿರ್ದೇಶಕರೊಂದಿಗೆ ಸುದೀಪ್ ಅವರ ಎರಡನೇ ಸಹಯೋಗ ಇದಾಗಿದೆ.

ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲವಾದರೂ, ಪಾತ್ರವರ್ಗ ಮತ್ತು ಸಿಬ್ಬಂದಿ ಬಗ್ಗೆ ನಿರಂತರವಾಗಿ ಚರ್ಚೆ ನಡೆಯುತ್ತಿದೆ. ಮ್ಯಾಕ್ಸ್‌ನಂತೆ ಈ ಚಿತ್ರದಲ್ಲಿ ಸಾಂಪ್ರದಾಯಿಕ ನಾಯಕಿ ಪಾತ್ರವಿರುವುದಿಲ್ಲ, ಆದರೆ ಬಲವಾದ ಮಹಿಳಾ ಪಾತ್ರಗಳನ್ನು ಒಳಗೊಂಡಿರುತ್ತದೆ ಎಂದು ಚಿತ್ರತಂಡ ಈ ಹಿಂದೆ ಬಹಿರಂಗಪಡಿಸಿದ್ದರು. ಅದರಂತೆ, ಮೈಕೆಲ್, ರವಿಕುಲ ರಘುರಾಮ ಮತ್ತು ಮಾರ್ಗನ್ ಚಿತ್ರಗಳಲ್ಲಿ ನಟಿಸಿದ ನಟಿ ದೀಪ್ಶಿಖಾ ಅವರನ್ನು ಪ್ರಮುಖ ಪಾತ್ರಗಳಲ್ಲಿ ಒಂದಕ್ಕೆ ಅಂತಿಮಗೊಳಿಸಲಾಗಿದೆ. ನಟಿ ಮುಹೂರ್ತ ಸಮಾರಂಭದಲ್ಲಿ ಕಾಣಿಸಿಕೊಂಡರು.

ಈ ಚಿತ್ರಕ್ಕೆ ಮತ್ತೊಂದು ಪ್ರಮುಖ ಸೇರ್ಪಡೆ ನವೀನ್ ಚಂದ್ರ, ಅವರು ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ತೆಲುಗು ಮತ್ತು ತಮಿಳು ಚಿತ್ರರಂಗದಾದ್ಯಂತ ತಮ್ಮ ಕೆಲಸಕ್ಕೆ ಹೆಸರುವಾಸಿಯಾದ ನವೀನ್, ಅರವಿಂದ ಸಮೇತ, ವಿರಾಟ ಪರ್ವಂ ಮತ್ತು ಅಂದಾಲ ರಾಕ್ಷಸಿ ಮುಂತಾದ ಚಿತ್ರಗಳಲ್ಲಿನ ತಮ್ಮ ಅಭಿನಯಕ್ಕಾಗಿ ಹೆಸರಾಗಿದ್ದಾರೆ.

ಕುತೂಹಲಕಾರಿಯಾಗಿ, ಇನ್ನೂ ಹೆಸರಿಡದ ಈ ಚಿತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ಮತ್ತು ಭೀಮ ಚಿತ್ರದ ಮೂಲಕ ಗಮನ ಸೆಳೆದ ಡ್ರ್ಯಾಗನ್ ಮಂಜು ಈ ಆ್ಯಕ್ಷನ್ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆಯಾಗಬೇಕಿದೆ.

ಮ್ಯಾಕ್ಸ್ ಚಿತ್ರಕ್ಕಾಗಿ ಕೆಲಸ ಮಾಡಿದ್ದ ತಾಂತ್ರಿಕ ತಂಡವು ಈ ಯೋಜನೆಯಲ್ಲಿಯೂ ಮುಂದುವರೆದಿದೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ ಮತ್ತು ಶೇಖರ್ ಚಂದ್ರು ಛಾಯಾಗ್ರಹಣವನ್ನು ನಿರ್ವಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT