ಧ್ರುವ ಸರ್ಜಾ - ಕಮಲ್ ಹಾಸನ್ 
ಸಿನಿಮಾ ಸುದ್ದಿ

'ಥಗ್ ಲೈಫ್' ವಿವಾದ: 'ಮಾತೃಭಾಷೆ-ಸ್ವಾಭಿಮಾನಕ್ಕೆ ಧಕ್ಕೆಯಾದಾಗ ನಾವು ವಿರೋಧಿಸುತ್ತೇವೆ'- ಧ್ರುವ ಸರ್ಜಾ

ಕಮಲ್ ಅವರ ಹೇಳಿಕೆ ಕನ್ನಡಿಗರ ಸ್ವಾಭಿಮಾನಕ್ಕೆ ನೋವುಂಟು ಮಾಡಿರುವುದರಿಂದ ಥಗ್ ಲೈಫ್ ಚಿತ್ರಕ್ಕೆ ವಿರೋಧ ಹುಟ್ಟಿಕೊಂಡಿತು.

'ತಮಿಳುನಾಡಿನ ಜನರಂತೆ ನಾವು (ಕನ್ನಡಿಗರು) ಕೂಡ ನಮ್ಮ ಮಾತೃಭಾಷೆಯನ್ನು ಪ್ರೀತಿಸುತ್ತೇವೆ. ನಮ್ಮ ಮಾತೃಭಾಷೆಯ ವಿಷಯಕ್ಕೆ ಬಂದಾಗ, ಜನರು ಖಂಡಿತವಾಗಿಯೂ ಪ್ರತಿಕ್ರಿಯಿಸುತ್ತಾರೆ' ಎಂದು ನಟ ಧ್ರುವ ಸರ್ಜಾ ಹೇಳಿದರು.

ತಮ್ಮ ಮುಂಬರುವ ಚಿತ್ರ 'ಕೆಡಿ- ದಿ ಡೆವಿಲ್'ನ ಟೀಸರ್ ಬಿಡುಗಡೆ ಸಮಾರಂಭದಲ್ಲಿ, ಕಮಲ್ ಹಾಸನ್ ನಟನೆಯ 'ಥಗ್ ಲೈಫ್' ಚಿತ್ರವನ್ನು ಕರ್ನಾಟಕದಲ್ಲಿ ನಿಷೇಧಿಸಿದ್ದಕ್ಕೆ ಕನ್ನಡ ಚಲನಚಿತ್ರೋದ್ಯಮದಿಂದ ವಿರೋಧ ವ್ಯಕ್ತವಾಗದಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಧ್ರುವ ಸರ್ಜಾ ಉತ್ತರಿಸಿದರು.

ನೆರೆಯ ರಾಜ್ಯದಲ್ಲಿ ತಯಾರಾಗುವ ಚಿತ್ರಗಳನ್ನು ತಮಿಳು ಚಿತ್ರೋದ್ಯಮ ಬೆಂಬಲಿಸುವಂತೆಯೇ ಕನ್ನಡ ಚಿತ್ರರಂಗವೂ ತಮಿಳು ಚಿತ್ರಗಳನ್ನು ಏಕೆ ಬೆಂಬಲಿಸುವುದಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಥಗ್ ಲೈಫ್ ಹೊರತುಪಡಿಸಿ ಕರ್ನಾಟಕದಲ್ಲಿ ಬಿಡುಗಡೆಯಾಗಿರುವ ಪ್ರತಿಯೊಂದು ತಮಿಳು ಚಿತ್ರಗಳನ್ನೂ ಕನ್ನಡ ಪ್ರೇಕ್ಷಕರು ಪ್ರೋತ್ಸಾಹಿಸುತ್ತಾರೆ. ಕಮಲ್ ಅವರ ಹೇಳಿಕೆ ಕನ್ನಡಿಗರ ಸ್ವಾಭಿಮಾನಕ್ಕೆ ನೋವುಂಟು ಮಾಡಿರುವುದರಿಂದ ಥಗ್ ಲೈಫ್ ಚಿತ್ರಕ್ಕೆ ವಿರೋಧ ಹುಟ್ಟಿಕೊಂಡಿತು ಎಂದರು.

ಇತ್ತೀಚೆಗೆ ನಡೆದ ಥಗ್ ಲೈಫ್ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಕಮಲ್ ಹಾಸನ್ ಕನ್ನಡ ತಮಿಳಿನಿಂದ ಹುಟ್ಟಿದೆ ಎಂದು ಹೇಳಿದ ಬಳಿಕ ವಿವಾದ ಭುಗಿಲೆದ್ದಿತು. ಆ ಕಾರ್ಯಕ್ರಮದಲ್ಲಿದ್ದ ನಟ ಶಿವರಾಜ್‌ಕುಮಾರ್ ಮತ್ತು ಕನ್ನಡಿಗರ ಮೇಲಿನ ಅಪಾರ ಪ್ರೀತಿಯಿಂದಾಗಿ ಆ ಹೇಳಿಕೆ ನೀಡಿದ್ದೇನೆ ಎಂದು ಕಮಲ್ ಸ್ಪಷ್ಟಪಡಿಸಿದರೂ, ಕನ್ನಡ ಪರ ಸಂಘಟನೆಗಳು ತಣ್ಣಗಾಗಲಿಲ್ಲ. ಇದರ ಪರಿಣಾಮವಾಗಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ರಾಜ್ಯದಲ್ಲಿ ಥಗ್ ಲೈಫ್ ಚಿತ್ರ ಬಿಡುಗಡೆಯಾಗದಂತೆ ತಡೆಹಿಡಿಯಿತು. ನಂತರ ಸುಪ್ರೀಂ ಕೋರ್ಟ್ ಚಿತ್ರದ ಮೇಲಿನ ನಿಷೇಧವನ್ನು ತೆಗೆದುಹಾಕಿತು. ಆದರೆ, ಆ ಹೊತ್ತಿಗಾಗಲೇ ಸ್ಥಳೀಯ ವಿತರಕರು ಚಿತ್ರದ ಮೇಲೆ ಕ್ರಮ ಕೈಗೊಳ್ಳಲು ತುಂಬಾ ತಡವಾಗಿತ್ತು.

ಮತ್ತೊಂದೆಡೆ, ನಿರ್ದೇಶಕ ಪ್ರೇಮ್ ಅವರ ಕೆಡಿ- ದಿ ಡೆವಿಲ್ ಜುಲೈ 10 ರಂದು ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ರೀಷ್ಮಾ ನಾಣಯ್ಯ, ಸಂಜಯ್ ದತ್, ಶಿಲ್ಪಾ ಶೆಟ್ಟಿ, ರಮೇಶ್ ಅರವಿಂದ್ ಮತ್ತು ನೋರಾ ಫತೇಹಿ ಇತರರು ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಮತಗಳ್ಳತನ': ಆಳಂದ ಮಾಜಿ ಬಿಜೆಪಿ ಶಾಸಕ ಸುಭಾಷ್ ಗುತ್ತೇದಾರ್ ಮನೆ ಮೇಲೆ SIT ದಾಳಿ; Video

ನೀನು ನೇರವಾಗಿ ನನ್ನನ್ನೇ ಕೇಳಬೇಕಿತ್ತು: BCCI ಆಯ್ಕೆ ಸಮಿತಿ ವಿರುದ್ಧ ಮೊಹಮ್ಮದ್ ಶಮಿ ಆರೋಪಕ್ಕೆ ಮೌನ ಮುರಿದ ಅಜಿತ್ ಅಗರ್ಕರ್!

ಚಾಮರಾಜನಗರ: 27 ತಿಂಗಳಿಂದ ಸಿಗದ ಸಂಬಳ, ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ 'ವಾಟರ್ ಮ್ಯಾನ್' ಆತ್ಮಹತ್ಯೆ!

ಶ್ರೀಲಂಕಾ ಪ್ರಧಾನಿಯಿಂದ ಮೋದಿ ಭೇಟಿ; ಭಾರತೀಯ ಮೀನುಗಾರರ ಸಮಸ್ಯೆ ಬಗ್ಗೆ ಚರ್ಚೆ

ರಾಯಚೂರು: RSS ಪಥಸಂಚಲನದಲ್ಲಿ ಭಾಗಿ, PDO ಅಮಾನತು!

SCROLL FOR NEXT