ನಿರ್ದೇಶಕ ಪ್ರೇಮ್ 
ಸಿನಿಮಾ ಸುದ್ದಿ

Thug Life ವಿವಾದ: ತಾಯಿಗೆ ಬೈದರೆ ಸುಮ್ಮನಿರುತ್ತಾರಾ? ತಮಿಳು ಮಾಧ್ಯಮಗಳಿಗೆ ಕನ್ನಡದಲ್ಲಿಯೇ ಖಡಕ್ಕಾಗಿ ಹೇಳಿದ ಪ್ರೇಮ್!

ಈ ವೇಳೆ ನಟ ಕಮಲ್ ಹಾಸನ್ ಅವರ ವಿವಾದಾತ್ಮಕ ಹೇಳಿಕೆಯಿಂದ 'ಥಗ್ ಲೈಫ್' ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ಅವಕಾಶ ನೀಡದೇ ಇರುವ ತಮಿಳು ಮಾಧ್ಯಮಗಳ ಪ್ರಶ್ನೆಗೆ ಕನ್ನಡದಲ್ಲಿಯೇ ನಯವಾಗಿಯೇ ಮುಟ್ಟಿ ನೋಡಿಕೊಳ್ಳುವಂತೆ ಉತ್ತರಿಸಿದರು.

ಚೆನ್ನೈ: ಪ್ರೇಮ್ ನಿರ್ದೇಶನದ, ನಟ ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ 'ಕೆಡಿ' ಚಿತ್ರತಂಡ ಭರ್ಜರಿ ಪ್ರಚಾರವನ್ನು ಆರಂಭಿಸಿದೆ. ಮುಂಬೈಯಲ್ಲಿ ಇತ್ತೀಚಿಗೆ ಟೀಸರ್ ಬಿಡುಗಡೆ ಮಾಡಿದ ಚಿತ್ರತಂಡ ಶುಕ್ರವಾರ ಚೆನ್ನೈನಲ್ಲಿ ಪ್ರಚಾರದ ಭಾಗವಾಗಿ ಸುದ್ದಿಗೋಷ್ಠಿ ನಡೆಸಿತು.

ಈ ವೇಳೆ ನಟ ಕಮಲ್ ಹಾಸನ್ ಅವರ ವಿವಾದಾತ್ಮಕ ಹೇಳಿಕೆಯಿಂದ 'ಥಗ್ ಲೈಫ್' ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ಅವಕಾಶ ನೀಡದೇ ಇರುವ ತಮಿಳು ಮಾಧ್ಯಮಗಳ ಪ್ರಶ್ನೆಗೆ ಕನ್ನಡದಲ್ಲಿಯೇ ನಯವಾಗಿಯೇ ಮುಟ್ಟಿ ನೋಡಿಕೊಳ್ಳುವಂತೆ ಉತ್ತರಿಸಿದರು.

'ನಾವೇನು ಬೇರೆ ದೇಶದಲ್ಲಿಲ್ಲ. ಇನ್ನೂರು-ಮುನ್ನೂರು ಕಿಲೋ ಮೀಟರ್ ದೂರದಲ್ಲಿದ್ದೇವೆ ಅಷ್ಟೇ. ಎಲ್ಲರೂ ಒಂದೇ. ತಾಯಿಗೆ ಯಾರಾದರೂ ಬೈದರೆ ಸುಮ್ಮನಿರುತ್ತಾರಾ? ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲಿ ಎಲ್ಲಾ ತಮಿಳು ಸಿನಿಮಾಗಳು ಚೆನ್ನಾಗಿ ಓಡುತ್ತವೆ. ನಾನೂ ತಮಿಳು ಸಿನಿಮಾಗಳನ್ನು ನೋಡುತ್ತೇನೆ. ಕರ್ನಾಟಕದಲ್ಲಿ ತಮಿಳು ಸಿನಿಮಾಗಳ ಬಿಡುಗಡೆಗೆ ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಕಮಲ್ ಸರ್ ಹೇಳಿಕೆಯಿಂದ ಕನ್ನಡಿಗರಿಗೆ ನೋವಾಗಿದೆ. ಹಾಗಾಗೀ ಅವರ ಸಿನಿಮಾ ಬಿಡುಗಡೆಗೆ ವಿರೋಧ ವ್ಯಕ್ತವಾಯಿತು. ಕಮಲ್ ಸರ್ ಕ್ಷಮೆ ಕೇಳಬೇಕಿತ್ತು ಎಂದಿದ್ದಾರೆ.

ಇದೇ ವೇಳೆ ಮಾತನಾಡಿದ ನಟ ಧ್ರುವ ಸರ್ಜಾ, ತಮಿಳುನಾಡಿನ ಜನರಂತೆ ನಾವು (ಕನ್ನಡಿಗರು) ಕೂಡ ನಮ್ಮ ಮಾತೃಭಾಷೆಯನ್ನು ಪ್ರೀತಿಸುತ್ತೇವೆ. ನಮ್ಮ ಮಾತೃಭಾಷೆಯ ವಿಷಯಕ್ಕೆ ಬಂದಾಗ, ಜನರು ಖಂಡಿತವಾಗಿಯೂ ಪ್ರತಿಕ್ರಿಯಿಸುತ್ತಾರೆ' ಎಂದು ಹೇಳಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕನ್ನಡಿಗರು ಫಿದಾ ಆಗಿದ್ದು, ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೆಕ್ಸಿಕೋ ಮಧ್ಯಭಾಗದಲ್ಲಿ ಫುಟ್ಬಾಲ್ ಮೈದಾನದಲ್ಲಿ ಬಂದೂಕುಧಾರಿಗಳ ಗುಂಡಿನ ದಾಳಿ: 11 ಮಂದಿ ಸಾವು, 12 ಜನರಿಗೆ ಗಾಯ-Video

ಭಾರತ-ಯುರೋಪಿಯನ್ ಒಕ್ಕೂಟ ನಡುವೆ 'Mother of All Deals'ಗೆ ಶೀಘ್ರದಲ್ಲೇ ಅಂತಿಮ ಸಹಿ; ಒಪ್ಪಂದ 2027ರಿಂದಲೇ ಶುರು!

ವಿಮಾನ ಅಪಘಾತ: ಟೇಕ್ ಆಫ್ ವೇಳೆ ಜೆಟ್ ಅಪಘಾತ; 7 ಮಂದಿ ಸಾವು, ಬದುಕುಳಿದ ಓರ್ವ ಸಿಬ್ಬಂದಿ!

T20 ವಿಶ್ವಕಪ್‌ಗೂ ಮುನ್ನ PAK ಹೊಸ ಆಟ: ಭಾರತದ ವಿರುದ್ಧದ ಪಂದ್ಯ ಬಹಿಷ್ಕರಿಸುವ ಬೆದರಿಕೆ!

ಮನ್ರೇಗಾ ಹೆಸರು ಬದಲಾವಣೆಗೆ ವಿರೋಧ: ನಾಳೆ ಕಾಂಗ್ರೆಸ್​ನಿಂದ ರಾಜಭವನ ಚಲೋ- DCM ಡಿ.ಕೆ ಶಿವಕುಮಾರ್

SCROLL FOR NEXT