ಟಂಟ್​ಮ್ಯಾನ್ ಮೋಹನ್ ರಾಜ್  
ಸಿನಿಮಾ ಸುದ್ದಿ

ಶೂಟಿಂಗ್ ವೇಳೆ ದುರಂತ: ಸ್ಥಳದಲ್ಲಿಯೇ ಸ್ಟಂಟ್​ಮ್ಯಾನ್ ಮೋಹನ್ ರಾಜ್ ಸಾವು; ಅಪಘಾತದ ವಿಡಿಯೋ ವೈರಲ್

ತಮಿಳು ಸಿನಿಮಾದ ಸ್ಟಾರ್ ನಟ ಆರ್ಯ ಅವರ ಹೊಸ ಸಿನಿಮಾದ ಶೂಟಿಂಗ್​ನಲ್ಲಿ ಕಾರು ಸ್ಟಂಟ್​ ಮಾಡುವ ಸನ್ನಿವೇಶ ಇತ್ತು. ಇದಕ್ಕಾಗಿ ಸಾಹಸ ಕಲಾವಿದ ರಾಜು ಅವರಿಂದ ಕಾರು ಸ್ಟಂಟ್​ ಮಾಡಿಸಲಾಗುತ್ತಿತ್ತು.

ಚೆನ್ನೈ: ಕಾಲಿವುಡ್​ ಸ್ಟಾರ್​ ಆರ್ಯ ನಟನೆಯ ಹೊಸ ಸಿನಿಮಾದ ಶೂಟಿಂಗ್ ಮಾಡುವ ವೇಳೆ ಸ್ಟಂಟ್​ಮ್ಯಾನ್ ಒಬ್ಬರು ನಿಧನರಾಗಿದ್ದಾರೆ. ಶೂಟಿಂಗ್​ನಲ್ಲಿ ಕಾರು ಸ್ಟಂಟ್ ಮಾಡುವಾಗ ಈ ಅವಘಡ ನಡೆದಿದೆ ಎಂದು ಹೇಳಲಾಗಿದೆ.

ತಮಿಳು ಸಿನಿ ರಂಗದ ಸಾಹಸ ಕಲಾವಿದ ರಾಜು ಎನ್ನುವರು ಕೊನೆಯುಸಿರೆಳೆದಿದ್ದಾರೆ. ತಮಿಳು ಸಿನಿಮಾದ ಸ್ಟಾರ್ ನಟ ಆರ್ಯ ಅವರ ಹೊಸ ಸಿನಿಮಾದ ಶೂಟಿಂಗ್​ನಲ್ಲಿ ಕಾರು ಸ್ಟಂಟ್​ ಮಾಡುವ ಸನ್ನಿವೇಶ ಇತ್ತು. ಇದಕ್ಕಾಗಿ ಸಾಹಸ ಕಲಾವಿದ ರಾಜು ಅವರಿಂದ ಕಾರು ಸ್ಟಂಟ್​ ಮಾಡಿಸಲಾಗುತ್ತಿತ್ತು. ಈ ವೇಳೆ ಅವಘಡ ಸಂಭವಿಸಿ ಘಟನೆಯಲ್ಲಿ ಸ್ಟಂಟ್ ಮ್ಯಾನ್ ರಾಜು ಅವರು ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ತಮಿಳು ನಟ ವಿಶಾಲ್ ಅವರು ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ನಾನು, ರಾಜು ಸಾಕಷ್ಟು ಸಿನಿಮಾಗಳಲ್ಲಿ ಸ್ಟಂಟ್​ಗಳನ್ನು ಮಾಡಿದ್ದೇವೆ. ಅವರನ್ನು ಕಳೆದುಕೊಂಡಿರುವುದು ನಮಗೆ ತುಂಬಾ ದುಃಖ ತರಿಸಿದೆ. ಕಾರು ಉರುಳಿಸುವ ಸನ್ನಿವೇಶದ ಸ್ಟಂಟ್ ಮಾಡುವಾಗ ಈ ಘಟನೆ ನಡೆದಿದೆ. ತಮಿಳು ಸಿನಿ ರಂದಲ್ಲಿ ಕೆಲವು ವರ್ಷಗಳಿಂದ ರಾಜು ರಿಸ್ಕ್​ ತೆಗೆದುಕೊಂಡು ಸ್ಟಂಟ್​ಗಳನ್ನು ಮಾಡುತ್ತಿದ್ದರು. ಆದರೆ ಇಂದು ಕೆಚ್ಚೆದೆಯ ವ್ಯಕ್ತಿ ನಮ್ಮನ್ನು ಅಗಲಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ತಮಿಳು ಸಿನಿಮಾ ಶೂಟಿಂಗ್​ಗಳಲ್ಲಿ ಸ್ಟಂಟ್ ಮಾಡುತ್ತಿದ್ದ ರಾಜು ಎಲ್ಲರಿಗೂ ಪರಿಚಿತರಾಗಿದ್ದರು. ಪಾ.ರಂಜೀತ್ ನಿರ್ದೇಶನದಲ್ಲಿ ಆರ್ಯ ಅವರು ನಟಿಸುತ್ತಿರುವ ಹೊಸ ಸಿನಿಮಾದ ಶೂಟಿಂಗ್​ನಲ್ಲಿ ರಾಜು ಸ್ಟಂಟ್ ಮಾಡುವಾಗ ಇದು ನಡೆದಿದೆ ಎಂದು ಚಿತ್ರತಂಡ ಅಧಿಕೃತ ಹೇಳಿಕೆ ನೀಡಿದೆ. ಕಾರು ಎತ್ತರಕ್ಕೆ ಹಾರಬೇಕಾದ ಹೈ-ರಿಸ್ಕ್ ಆಕ್ಷನ್ ಸೀಕ್ವೆನ್ಸ್ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಪಘಾತಕ್ಕೆ ಕಾರಣವಾದ ಸಂದರ್ಭಗಳ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಶೂಟಿಂಗ್ ವೇಳೆ ನಡೆದ ಅವಘಡದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT