ಸ್ವಪ್ನ ಮಂಟಪ ಚಿತ್ರದ ಸ್ಟಿಲ್ - ಚಿತ್ರತಂಡ 
ಸಿನಿಮಾ ಸುದ್ದಿ

ಬರಗೂರು ರಾಮಚಂದ್ರಪ್ಪ ನಿರ್ದೇಶನದ 'ಸ್ವಪ್ನ ಮಂಟಪ' ಬಿಡುಗಡೆ ದಿನಾಂಕ ಘೋಷಣೆ

ಬರಗೂರು ಅವರ 25 ವರ್ಷಗಳ ಹಳೆಯ ಕಾದಂಬರಿಯನ್ನು ಆಧರಿಸಿದ ಸ್ವಪ್ನ ಮಂಟಪವು ಸಾಂಪ್ರದಾಯಿಕ ರಚನೆಗಳ ಸಂರಕ್ಷಣೆಯ ಮೇಲೆ ಗಮನ ಕೇಂದ್ರೀಕರಿಸುತ್ತದೆ.

ಹಲವಾರು ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿದ್ದ, ಖ್ಯಾತ ಬರಹಗಾರ ಬರಗೂರು ರಾಮಚಂದ್ರಪ್ಪ ನಿರ್ದೇಶನದ ಸ್ವಪ್ನ ಮಂಟಪ ಇದೀಗ ಬಿಡುಗಡೆಗೆ ಸಿದ್ಧವಾಗಿದ್ದು, ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಜುಲೈ 25 ರಂದು ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ವಿಜಯ್ ರಾಘವೇಂದ್ರ ಮತ್ತು ರಂಜನಿ ರಾಘವನ್ ದ್ವಿಪಾತ್ರಗಳಲ್ಲಿ ನಟಿಸಿದ್ದಾರೆ. ಮಲೆ ಮಹದೇಶ್ವರ ಎಂಟರ್‌ಪ್ರೈಸಸ್ ಅಡಿಯಲ್ಲಿ ಎಎಂ ಬಾಬು ಚಿತ್ರವನ್ನು ನಿರ್ಮಿಸಿದ್ದು, ಮಾರ್ಸ್ ಸುರೇಶ್ ವಿತರಣೆ ಮಾಡಿದ್ದಾರೆ.

ಬರಗೂರು ಅವರ 25 ವರ್ಷಗಳ ಹಳೆಯ ಕಾದಂಬರಿಯನ್ನು ಆಧರಿಸಿದ ಸ್ವಪ್ನ ಮಂಟಪವು ಸಾಂಪ್ರದಾಯಿಕ ರಚನೆಗಳ ಸಂರಕ್ಷಣೆಯ ಮೇಲೆ ಗಮನ ಕೇಂದ್ರೀಕರಿಸುತ್ತದೆ. ಐತಿಹಾಸಿಕವಾಗಿ, ರಾಜರು ತಮ್ಮ ಎರಡನೇ ಪತ್ನಿಯರಿಗಾಗಿ 'ಸ್ವಪ್ನ ಮಂಟಪ'ಗಳನ್ನು ನಿರ್ಮಿಸಿದರು. ದುರುಪಯೋಗಕ್ಕೆ ಒಳಗಾದ ಹಳ್ಳಿಯೊಂದರಲ್ಲಿ ನಿರ್ಮಿಸಲಾದ ಅಂತಹ ಒಂದು ರಚನೆಯನ್ನು ಉಳಿಸಲು ಹೇಗೆ ಜಾಗೃತಿ ಮೂಡಿಸಲಾಗುತ್ತದೆ ಎಂಬುದನ್ನು ಈ ಚಿತ್ರವು ವಿವರಿಸುತ್ತದೆ.

ಚಿತ್ರಕಥೆ ಮತ್ತು ಸಂಭಾಷಣೆ ಬರೆದಿರುವ ಬರಗೂರು ರಾಮಚಂದ್ರಪ್ಪ ಅವರು, ಪ್ರಾಯೋಗಿಕ ಸಿನಿಮಾಗಳನ್ನು ಬೆಂಬಲಿಸಬೇಕು. ಟಿಕೆಟ್ ಬೆಲೆ ₹100 ಕ್ಕೆ ಸೀಮಿತಗೊಳಿಸಿ, ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ 150 ಆಸನಗಳ ಚಿತ್ರಮಂದಿರಗಳನ್ನು ಸ್ಥಾಪಿಸಲು ಸರ್ಕಾರವನ್ನು ಒತ್ತಾಯಿಸಿದರು. ಈ ಸಂಬಂಧ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗೆ ಸಲ್ಲಿಸಲಾಗಿದೆ ಎಂದು ಹೇಳಿದರು.

ಬರಗೂರು ಅವರೊಂದಿಗೆ ಕೆಲಸ ಮಾಡುವ ತಮ್ಮ ಬಹುದಿನಗಳ ಆಸೆ ಇದೀಗ ಈಡೇರಿದೆ ಎಂದ ನಟ ವಿಜಯ್ ರಾಘವೇಂದ್ರ, ಚಿತ್ರದಲ್ಲಿ ಒಂದು ಹಾಡನ್ನು ಹಾಡಿರುವುದಾಗಿಯೂ ಬಹಿರಂಗಪಡಿಸಿದ್ದಾರೆ. ಚಿತ್ರಕ್ಕೆ ಶಮಿತಾ ಮಲ್ನಾಡ್ ಅವರ ಸಂಗೀತ, ನಾಗರಾಜ್ ಅಡವಾನಿ ಅವರ ಛಾಯಾಗ್ರಹಣ ಮತ್ತು ಸುರೇಶ್ ಯು ಅವರ ಸಂಕಲನವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT