ಸ್ವಪ್ನ ಮಂಟಪ ಚಿತ್ರದ ಸ್ಟಿಲ್ - ಚಿತ್ರತಂಡ 
ಸಿನಿಮಾ ಸುದ್ದಿ

ಬರಗೂರು ರಾಮಚಂದ್ರಪ್ಪ ನಿರ್ದೇಶನದ 'ಸ್ವಪ್ನ ಮಂಟಪ' ಬಿಡುಗಡೆ ದಿನಾಂಕ ಘೋಷಣೆ

ಬರಗೂರು ಅವರ 25 ವರ್ಷಗಳ ಹಳೆಯ ಕಾದಂಬರಿಯನ್ನು ಆಧರಿಸಿದ ಸ್ವಪ್ನ ಮಂಟಪವು ಸಾಂಪ್ರದಾಯಿಕ ರಚನೆಗಳ ಸಂರಕ್ಷಣೆಯ ಮೇಲೆ ಗಮನ ಕೇಂದ್ರೀಕರಿಸುತ್ತದೆ.

ಹಲವಾರು ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿದ್ದ, ಖ್ಯಾತ ಬರಹಗಾರ ಬರಗೂರು ರಾಮಚಂದ್ರಪ್ಪ ನಿರ್ದೇಶನದ ಸ್ವಪ್ನ ಮಂಟಪ ಇದೀಗ ಬಿಡುಗಡೆಗೆ ಸಿದ್ಧವಾಗಿದ್ದು, ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಜುಲೈ 25 ರಂದು ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ವಿಜಯ್ ರಾಘವೇಂದ್ರ ಮತ್ತು ರಂಜನಿ ರಾಘವನ್ ದ್ವಿಪಾತ್ರಗಳಲ್ಲಿ ನಟಿಸಿದ್ದಾರೆ. ಮಲೆ ಮಹದೇಶ್ವರ ಎಂಟರ್‌ಪ್ರೈಸಸ್ ಅಡಿಯಲ್ಲಿ ಎಎಂ ಬಾಬು ಚಿತ್ರವನ್ನು ನಿರ್ಮಿಸಿದ್ದು, ಮಾರ್ಸ್ ಸುರೇಶ್ ವಿತರಣೆ ಮಾಡಿದ್ದಾರೆ.

ಬರಗೂರು ಅವರ 25 ವರ್ಷಗಳ ಹಳೆಯ ಕಾದಂಬರಿಯನ್ನು ಆಧರಿಸಿದ ಸ್ವಪ್ನ ಮಂಟಪವು ಸಾಂಪ್ರದಾಯಿಕ ರಚನೆಗಳ ಸಂರಕ್ಷಣೆಯ ಮೇಲೆ ಗಮನ ಕೇಂದ್ರೀಕರಿಸುತ್ತದೆ. ಐತಿಹಾಸಿಕವಾಗಿ, ರಾಜರು ತಮ್ಮ ಎರಡನೇ ಪತ್ನಿಯರಿಗಾಗಿ 'ಸ್ವಪ್ನ ಮಂಟಪ'ಗಳನ್ನು ನಿರ್ಮಿಸಿದರು. ದುರುಪಯೋಗಕ್ಕೆ ಒಳಗಾದ ಹಳ್ಳಿಯೊಂದರಲ್ಲಿ ನಿರ್ಮಿಸಲಾದ ಅಂತಹ ಒಂದು ರಚನೆಯನ್ನು ಉಳಿಸಲು ಹೇಗೆ ಜಾಗೃತಿ ಮೂಡಿಸಲಾಗುತ್ತದೆ ಎಂಬುದನ್ನು ಈ ಚಿತ್ರವು ವಿವರಿಸುತ್ತದೆ.

ಚಿತ್ರಕಥೆ ಮತ್ತು ಸಂಭಾಷಣೆ ಬರೆದಿರುವ ಬರಗೂರು ರಾಮಚಂದ್ರಪ್ಪ ಅವರು, ಪ್ರಾಯೋಗಿಕ ಸಿನಿಮಾಗಳನ್ನು ಬೆಂಬಲಿಸಬೇಕು. ಟಿಕೆಟ್ ಬೆಲೆ ₹100 ಕ್ಕೆ ಸೀಮಿತಗೊಳಿಸಿ, ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ 150 ಆಸನಗಳ ಚಿತ್ರಮಂದಿರಗಳನ್ನು ಸ್ಥಾಪಿಸಲು ಸರ್ಕಾರವನ್ನು ಒತ್ತಾಯಿಸಿದರು. ಈ ಸಂಬಂಧ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗೆ ಸಲ್ಲಿಸಲಾಗಿದೆ ಎಂದು ಹೇಳಿದರು.

ಬರಗೂರು ಅವರೊಂದಿಗೆ ಕೆಲಸ ಮಾಡುವ ತಮ್ಮ ಬಹುದಿನಗಳ ಆಸೆ ಇದೀಗ ಈಡೇರಿದೆ ಎಂದ ನಟ ವಿಜಯ್ ರಾಘವೇಂದ್ರ, ಚಿತ್ರದಲ್ಲಿ ಒಂದು ಹಾಡನ್ನು ಹಾಡಿರುವುದಾಗಿಯೂ ಬಹಿರಂಗಪಡಿಸಿದ್ದಾರೆ. ಚಿತ್ರಕ್ಕೆ ಶಮಿತಾ ಮಲ್ನಾಡ್ ಅವರ ಸಂಗೀತ, ನಾಗರಾಜ್ ಅಡವಾನಿ ಅವರ ಛಾಯಾಗ್ರಹಣ ಮತ್ತು ಸುರೇಶ್ ಯು ಅವರ ಸಂಕಲನವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT