ಸಿನಿಮಾ ಸುದ್ದಿ

ರಮ್ಯಾಗೆ ಬೆಂಬಲ: ನಿಮ್ಮ ಕುಟುಂಬದಲ್ಲೇ ಇದೆಲ್ಲ ಆದಾಗ ನಿದ್ದೆ ಮಾಡ್ತಾ ಇದ್ರಾ? ಯುವರಾಜಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ಆಕ್ರೋಶ!

ನಟಿ ರಮ್ಯಾಗೆ ನಟ ದರ್ಶನ್ ಅಭಿಮಾನಿಗಳು ಮಾಡಿದ ಅಶ್ಲೀಲ ಸಂದೇಶಗಳ ವಿರುದ್ಧ ಕನ್ನಡ ಚಿತ್ರರಂಗದ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವರಾಜ್​​ಕುಮಾರ್, ಯುವರಾಜಕುಮಾರ್ ವಿನಯ್ ರಾಜ್​ಕುಮಾರ್ ಮತ್ತು ಪ್ರಥಮ್ ಮುಂತಾದವರು ರಮ್ಯಾಗೆ ಬೆಂಬಲ ನೀಡಿದ್ದಾರೆ.

ನಟಿ ರಮ್ಯಾಗೆ ನಟ ದರ್ಶನ್ ಅಭಿಮಾನಿಗಳು ಮಾಡಿದ ಅಶ್ಲೀಲ ಸಂದೇಶಗಳ ವಿರುದ್ಧ ಕನ್ನಡ ಚಿತ್ರರಂಗದ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವರಾಜ್​​ಕುಮಾರ್, ಯುವರಾಜಕುಮಾರ್ ವಿನಯ್ ರಾಜ್​ಕುಮಾರ್ ಮತ್ತು ಪ್ರಥಮ್ ಮುಂತಾದವರು ರಮ್ಯಾಗೆ ಬೆಂಬಲ ನೀಡಿದ್ದಾರೆ. ಆದರೆ ಡಾ. ರಾಜಕುಮಾರ್ ಕುಟುಂಬದ ಸದಸ್ಯರ ಮಾತಿಗೆ ಯುವ ರಾಜ್​ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ತಿರುಗೇಟು ನೀಡಿದ್ದಾರೆ.

ಮಾಧ್ಯಮಗಳಲ್ಲಿ ಮಹಿಳೆಯರನ್ನು ಅವಮಾನಿಸುವುದರ ವಿರುದ್ಧ ಮಾತನಾಡುವುದು ನೋಡುವಾಗ, ತಮ್ಮ ಕುಟುಂಬದಲ್ಲೇ ಇದೆಲ್ಲ ನಡೆಯುವಾಗ ಮಾತಾಡದೇ ಸುಮ್ಮನೇ ಇದ್ರಲ್ಲ, ಆವಾಗ ನಿದ್ರೆ ಮಾಡ್ತಾ ಇದ್ರಾ ಎಲ್ಲ? ಎಂದು ಶ್ರೀದೇವಿ ಭೈರಪ್ಪ ಅವರು ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದು ಇದರ ಜೊತೆ 'ಬೂಟಾಟಿಕೆ ವ್ಯಕ್ತಿಗಳು' ಮತ್ತು 'ಡ್ರಾಮಾ' ಎಂಬ ಹ್ಯಾಶ್​ ಟ್ಯಾಗ್​ಗಳನ್ನು ಬಳಸಿದ್ದಾರೆ.

ನಟ ದರ್ಶನ್ ಅಭಿಮಾನಿಗಳ ದುರ್ವರ್ತನೆ ವಿರುದ್ಧ ನಟಿ ರಮ್ಯಾ ಸಾರಿರುವ ಸಮರಕ್ಕೆ ದೊಡ್ಮನೆ ಬೆಂಬಲ ನೀಡಿದ್ದು ನಟ ಶಿವರಾಜ್ ಕುಮಾರ್ ದಂಪತಿ ರಮ್ಯಾ ಪರ ಬ್ಯಾಟ್ ಬೀಸಿದ್ದಾರೆ. ಹೌದು.. ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರವಾಗಿ ನಟ ದರ್ಶನ್ ಅಭಿಮಾನಿಗಳು ನಟಿ ರಮ್ಯಾ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿ ಟೀಕೆ ಮಾಡುತ್ತಿದ್ದು, ಇದರ ವಿರುದ್ಧ ನಟಿ ಬಹಿರಂಗವಾಗಿಯೇ ಸಮರ ಸಾರಿದ್ದರು. ಈ ಸಂಬಂಧ ಪೊಲೀಸ್ ದೂರು ನೀಡಿರುವ ನಟಿ ರಮ್ಯಾಗೆ ಇದೀಗ ಎಲ್ಲಡೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ಈ ಕುರಿತು ಟ್ವೀಟ್ ಮಾಡಿರುವ ಶಿವಣ್ಣ, 'ರಮ್ಯಾ, ನಿಮ್ಮ ನಿಲವು ಸರಿಯಿದೆ, ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ' ಎಂದಿದ್ದಾರೆ. ಮುಂದುವರೆದು, ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಹೀಗೆ ಮಾತನಾಡುವುದು ಸರಿಯಲ್ಲ. ಅದನ್ನು ನಾವು ಸಹಿಸಬಾರದು ಎಂದು ಎಕ್ಸ್ ನಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ವಿದ್ಯುತ್ ಸ್ಥಾವರಗಳ ಮೇಲೆ ದಾಳಿಯಾದರೆ, ಹಾರ್ಮುಜ್ ಜಲಸಂಧಿ ಸಂಪೂರ್ಣ ಬಂದ್; ಇರಾನ್ ಕಠಿಣ ಎಚ್ಚರಿಕೆ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ಉರಿದ ಹೊರ್ಮುಸ್; ಮುಂಚೂಣಿಗೆ ಬಂದ ಯುಎಸ್ ಮರೀನ್ಸ್ (ಜಾಗತಿಕ ಜಗಲಿ)

ಇಸ್ರೇಲ್ ಬುಡಕ್ಕೇ ಕೈ ಹಾಕಿದ ಇರಾನ್; Nuclear ಕೇಂದ್ರದ ಮೇಲೆ ಕ್ಷಿಪಣಿ ದಾಳಿ, ಧ್ವಂಸ?

ಆಫ್ರಿಕಾ, ದುಬೈವರೆಗೂ ಹಬ್ಬಿತ್ತು ನಟಿ 'ರನ್ಯಾ ರಾವ್' ಗೋಲ್ಡ್ ಸ್ಮಗ್ಲಿಂಗ್ ನೆಟ್ ವರ್ಕ್!

SCROLL FOR NEXT