ಚಂದನ್ ಶೆಟ್ಟಿ 
ಸಿನಿಮಾ ಸುದ್ದಿ

ಜನರ ಮಧ್ಯೆ ಸಿಲುಕಿ ನನಗೂ ಉಸಿರಾಡಲು ಕಷ್ಟ ಆಯ್ತು: ಘಟನೆ ಬಗ್ಗೆ ಮಾಹಿತಿ ಬಿಚ್ಚಿಟ್ಟ ಚಂದನ್ ಶೆಟ್ಟಿ

ಗೇಟ್ ನಂಬರ್ 3ರಲ್ಲಿ ಹೋಗಲು ನನಗೆ ಪಾಸ್ ಸಿಕ್ಕಿತ್ತು. ಗೇಟ್ ನಂಬರ್ 3ಕ್ಕೆ ತಲುಪಲು ಆಗಲೇ ಇಲ್ಲ, ಅಷ್ಟು ಜನ ಸೇರಿದ್ದರು. ಗೇಟ್ ನಂಬರ್ 10ಕ್ಕೆ ಹೋದೆ,

ಬೆಂಗಳೂರು: ಬುಧವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಘಟನೆಯನ್ನು ನಾನು ಕಣ್ಣಾರೆ ನೋಡಿದೆ ಎಂದು ರ‍್ಯಾಪರ್ ಚಂದನ್ ಶೆಟ್ಟಿ ಹೇಳಿದ್ದಾರೆ.

ಆರ್‌ಸಿಬಿ (RCB) ಗೆಲುವಿನ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ ಕುರಿತು ಮಾತನಾಡಿದ ಅವರು, ಗೇಟ್ ನಂಬರ್ 3ರಲ್ಲಿ ಹೋಗಲು ನನಗೆ ಪಾಸ್ ಸಿಕ್ಕಿತ್ತು. ಗೇಟ್ ನಂಬರ್ 3ಕ್ಕೆ ತಲುಪಲು ಆಗಲೇ ಇಲ್ಲ, ಅಷ್ಟು ಜನ ಸೇರಿದ್ದರು. ಗೇಟ್ ನಂಬರ್ 10ಕ್ಕೆ ಹೋದೆ, ಅಲ್ಲೂ ತುಂಬಾ ಜನರಿದ್ದರು. ಜನರ ಮಧ್ಯೆ ಸಿಲುಕಿ ನನಗೂ ಉಸಿರಾಡಲು ಕಷ್ಟ ಆಯಿತು ಎಂದರು.

ಅಲ್ಲಿಂದ ಹೇಗೋ ಮಾಡಿ ಗೇಟ್ ನಂಬರ್ 10 ಹತ್ತಿರ ಬಂದೆ. ಅಲ್ಲಿ ಇನ್ನೂ ತುಂಬಾ ತುಂಬಾ ಕ್ರೌಡ್ ಇತ್ತು. ಒಂದು ಘಳಿಗೆ ನನಗೆ ಉಸಿರಾಡೋಕೆ ಕಷ್ಟ ಆಯ್ತು. ಅದೆಷ್ಟು ಕಷ್ಟ ಆಗಿರಬಹುದು ಎನ್ನುವುದು ನನಗೆ ಅನಿಸಿತು. ಕಾಲ್ತುಳಿತದಲ್ಲಿ ಮೃತಪಟ್ಟ 11 ಜನರ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ ಚಂದನ್ ಶೆಟ್ಟಿ.

"ಆ ಕ್ಷಣ ಅಲ್ಲಿ ಏನಾಗಿರಬಹುದು ಎಂಬುದು ನಾನು ಊಹಿಸಿದೆ. ಯಾಕೆಂದರೆ, ನಾನು ಅಂಥದ್ದೇ ಪರಿಸ್ಥಿತಿಯನ್ನು ಅಲ್ಲಿ ಎದುರಿಸಿದೆ. ಕಾಲ್ತುಳಿತಲ್ಲಿ ಪ್ರಾಣ ಕಳೆದಕೊಂಡವರ ಆತ್ಮಕ್ಕೆ ಶಾಂತಿ ಸಿಗಲಿ ಅಂತ ನಾನು ಕೇಳಿಕೊಳ್ಳುತ್ತೇನೆ. ನನಗಂತೂ ತುಂಬಾ ಬೇಜಾರು ಆಗ್ತಿದೆ. ಇದಕ್ಕೆ ಯಾರು ಹೊಣೆ ಅಂತ ಹೇಳೋದಕ್ಕೆ ತುಂಬಾ ಕಷ್ಟ ಆಗ್ತಿದೆ. ಸರಿಯಾಗಿ ಆಯೋಜನೆ ಮಾಡಲಿಲ್ವಾ" ಎಂದು ಬೇಸರ ಮಾಡಿಕೊಂಡಿದ್ದಾರೆ ಚಂದನ್ ಶೆಟ್ಟಿ.

ಇಲ್ಲ, ಎರಡ್ಮೂರು ದಿನ ಬಿಟ್ಟು ಸರಿಯಾಗಿ ಪಾಸ್‌ಗಳನ್ನು ಹಂಚಿ ಶನಿವಾರನೋ, ಭಾನುವಾರನೋ ಇವೆಂಟ್ ಮಾಡಬಹುದಿತ್ತಾ? ನನಗೆ ಗೊತ್ತಿಲ್ಲ. ಆದರೆ ಇನ್ನೂ ಯಾರೆಲ್ಲಾ ಗಂಭೀರ ಪರಿಸ್ಥಿತಿಯಲ್ಲಿ ಇದ್ದಾರೋ, ಅವರೆಲ್ಲಾ ಬೇಗ ಗುಣವಾಗಿ ಬರಲಿ ಅಂತ ದೇವರಲ್ಲಿ ನಾನು ಪ್ರಾರ್ಥನೆ ಮಾಡುತ್ತೇನೆ. ಆ 11 ಜೀವಗಳ ಆತ್ಮಕ್ಕೆ ಶಾಂತಿ ಸಿಗಲಿ" ಎಂದು ಚಂದನ್ ಶೆಟ್ಟಿ.

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ 11 ಆರ್‌ಸಿಬಿ ಅಭಿಮಾನಿಗಳು ದುರ್ಮರಣಕ್ಕೀಡಾಗಿದ್ದಾರೆ. 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT