ವಿಕ್ರಮ್ ರವಿಚಂದ್ರನ್ 
ಸಿನಿಮಾ ಸುದ್ದಿ

'ಮುಧೋಳ್' ಚಿತ್ರೀಕರಣ ಮುಕ್ತಾಯದ ಹಂತಕ್ಕೆ, ಇನ್ನೂ ಹೆಸರಿಡದ ಹೊಸ ಚಿತ್ರದಲ್ಲಿ ವಿಕ್ರಮ್ ರವಿಚಂದ್ರನ್!

ನನ್ನ ಕೈಯಲ್ಲಿ ಪ್ರಸ್ತುತ ಮೂರು ಚಿತ್ರಗಳಿವೆ. ಎಲ್ಲವೂ ಹೊಸ ನಿರ್ದೇಶಕರು ಮತ್ತು ಹೊಸ ಕಥೆಗಳಾಗಿವೆ. ಅದರಲ್ಲಿ ಒಂದನ್ನು ಮಂಜುನಾಥ್ ರೆಡ್ಡಿ ನಿರ್ಮಿಸುತ್ತಿದ್ದಾರೆ.

ರವಿಚಂದ್ರನ್ ಪುತ್ರ ವಿಕ್ರಮ್ ರವಿಚಂದ್ರನ್ ಅಭಿನಯದ ಎರಡನೇ ಸಿನಿಮಾ 'ಮುಧೋಳ್' ಚಿತ್ರೀಕರಣ ಮುಕ್ತಾಯದ ಹಂತಕ್ಕೆ ಬಂದಿದ್ದು, ಇನ್ನೂ ಕೇವಲ 10 ರಿಂದ 14 ದಿನಗಳ ಚಿತ್ರೀಕರಣ ಬಾಕಿ ಉಳಿದಿದೆ. ಈ ನಡುವೆ ನಟ ಮಂಜುನಾಥ್ ರೆಡ್ಡಿ ನಿರ್ಮಾಣದ ಇನ್ನೂ ಹೆಸರಿಡದ ಚಿತ್ರಕ್ಕೆ ಈಗಾಗಲೇ ಕ್ಯಾಮೆರಾ ಎದುರಿಸುತ್ತಿದ್ದಾರೆ.

"ನನ್ನ ಕೈಯಲ್ಲಿ ಪ್ರಸ್ತುತ ಮೂರು ಚಿತ್ರಗಳಿವೆ. ಎಲ್ಲವೂ ಹೊಸ ನಿರ್ದೇಶಕರು ಮತ್ತು ಹೊಸ ಕಥೆಗಳಾಗಿವೆ. ಅದರಲ್ಲಿ ಒಂದನ್ನು ಮಂಜುನಾಥ್ ರೆಡ್ಡಿ ನಿರ್ಮಿಸುತ್ತಿದ್ದಾರೆ. ಚಿತ್ರದ ಹೆಸರನ್ನು ಶೀಘ್ರದಲ್ಲೇ ಘೋಷಿಸುತ್ತೇವೆ. ಮೂರನೇ ಸಿನಿಮಾದ ಬಗ್ಗೆ ಅಂತಿಮ ಹಂತದ ಚರ್ಚೆ ನಡೆಯುತ್ತಿದೆ ಎಂದು ವಿಕ್ರಮ್ ತಿಳಿಸಿದರು.

ಒಂದು ವರ್ಷದಿಂದ ಸ್ನಾಯು ಎಳೆತ ಸಮಸ್ಯೆಯಿಂದ ಬಳಲುತ್ತಿದ್ದು, ಈಗ ಎರಡೂ ಭುಜಗಳಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ. ಅದಕ್ಕೂ ಮುನ್ನಾ ಶೂಟಿಂಗ್ ಮುಗಿಸಲು ಪರ್ಯಾಯ ಮಾರ್ಗ ಹುಡುಕುತ್ತಿರುವುದಾಗಿ ಅವರು ಹೇಳಿದರು.

ಸಂಭಾವನೆ ಹೊರತಾಗಿ ವೃತ್ತಿಪರತೆಗೆ ಬದ್ಧತೆ ದೃಢವಾಗಿ ಉಳಿದಿದೆ. ನೆಲ್ಸನ್‌ ಚಿತ್ರದಲ್ಲಿ ಒಂದು ಪಾತ್ರವಿದ್ದರೂ ಆ ಪ್ರಾಜೆಕ್ಟ್ ಸದ್ಯ ಸ್ಥಗಿತಗೊಂಡಿದೆ. ಮೂರು ನಿರ್ಮಾಪಕರಿಗೆ ಮುಂಗಡ ಹಣವನ್ನು ಹಿಂದಿರುಗಿಸಿದ್ದೇನೆ. ನನ್ನಗೆ ಪಾತ್ರ ಹೊಂದಿಕೆಯಾಗದಿದ್ದರೆ ನಿರ್ಮಾಪಕರ ಹಣ ದುರುಪಯೋಗವಾಗಲು ಬಯಸುವುದಿಲ್ಲ. ಪ್ರತಿಯೊಂದು ಪ್ರಾಜೆಕ್ಟ್ ಗೂ ಸೂಕ್ತ ಸಮಯ ಮತ್ತು ಶ್ರಮವನ್ನು ಗೌರವಿಸುತ್ತೇನೆ ಎನ್ನುತ್ತಾರೆ ವಿಕ್ರಮ್.

ಮಂಜುನಾಥ್ ರೆಡ್ಡಿ ಅವರ ಸಹಯೋಗದಲ್ಲಿ ನಿರ್ಮಾಣವಾಗುತ್ತಿರುವ ಚಿತ್ರ ಕಮರ್ಷಿಯಲ್ ಸಿನಿಮಾವಾಗಿದೆ. ಆದರೆ ಪೌರಾಣಿಕ ಹಿನ್ನೆಲೆಯ ಕಥಾಹಂದರವೂ ಇದೆ. ಹೊಸ ಪ್ರಕಾರದ ಚಿತ್ರಗಳಲ್ಲಿ ಅಭಿನಯಿಸಲು ಪ್ರಯತ್ನಿಸುತ್ತಿದ್ದೇನೆ ಮತ್ತು ಹೊಸ ನಿರ್ದೇಶಕರೊಂದಿಗೆ ಕೆಲಸ ಮಾಡುತ್ತಿದ್ದೇನೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!