ರಾಣಾ ದಗ್ಗುಬಾಟಿ - ಕಮಲ್ ಹಾಸನ್ 
ಸಿನಿಮಾ ಸುದ್ದಿ

'ತಮಿಳಿನಿಂದ ಕನ್ನಡ ಹುಟ್ಟಿತು' ಹೇಳಿಕೆ: ಕಮಲ್ ಹಾಸನ್‌ರ 'Thug Life' ವಿವಾದ ಕುರಿತು ರಾಣಾ ದಗ್ಗುಬಾಟಿ ಪ್ರತಿಕ್ರಿಯೆ

ಥಗ್ ಲೈಫ್ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ನೀಡಿದ ಹೇಳಿಕೆಯ ನಂತರ, ಕರ್ನಾಟಕದಿಂದ ಸಾಕಷ್ಟು ಟೀಕೆಗಳು ಕೇಳಿಬಂದವು.

ಇತ್ತೀಚೆಗೆ ನಡೆದ ಥಗ್ ಲೈಫ್ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಕನ್ನಡ ತಮಿಳಿನಿಂದ ಹುಟ್ಟಿದೆ ಎಂಬ ನಟ ಕಮಲ್ ಹಾಸನ್ ಅವರ ವಿವಾದಾತ್ಮಕ ಹೇಳಿಕೆಯ ಬಗ್ಗೆ ತೆಲುಗು ನಟ ರಾಣಾ ದಗ್ಗುಬಾಟಿ ಪ್ರತಿಕ್ರಿಯಿಸಿದ್ದಾರೆ. ಇತ್ತೀಚೆಗೆ ಇಂಡಿಯಾ ಟುಡೇ ಜೊತೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿನ ಟೀಕೆಗಳು ಇಂತಹ ವಿವಾದಗಳಲ್ಲಿ ಪಾತ್ರವಹಿಸುತ್ತವೆ ಎಂದು ಸೂಚಿಸಿದರು.

'ಸಾಮಾಜಿಕ ಮಾಧ್ಯಮವು ಅಭಿಪ್ರಾಯ ವ್ಯಕ್ತಪಡಿಸುವ ಸ್ಥಳವಾಗಿದೆ. ಈ ಹಿಂದೆ, ನಿಮಗೆ ಅದು ಇರಲಿಲ್ಲ. ಆದರೆ, ಈಗ ಯಾವುದೇ ವಿಷಯ ಬಹು ಬೇಗ ಭಾವನಾತ್ಮಕ ಮತ್ತು ರಾಜಕೀಯವಾಗಿ ಮಾರ್ಪಡುತ್ತದೆ' ಎಂದು ರಾಣಾ ಹೇಳಿದರು.

ಥಗ್ ಲೈಫ್ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ನೀಡಿದ ಹೇಳಿಕೆಯ ನಂತರ, ಕರ್ನಾಟಕದಿಂದ ಸಾಕಷ್ಟು ಟೀಕೆಗಳು ಕೇಳಿಬಂದವು. ನಟ ಶಿವರಾಜ್‌ಕುಮಾರ್ ಮೇಲಿನ ಪ್ರೀತಿಯಿಂದ ಈ ಹೇಳಿಕೆ ನೀಡಿದ್ದೇನೆ ಮತ್ತು ಕನ್ನಡಕ್ಕೆ ನಿರ್ವಿವಾದದ ಪರಂಪರೆ ಇದೆ ಎಂದು ನಟ ನಂತರ ಸ್ಪಷ್ಟಪಡಿಸಿದರು. ಆದಾಗ್ಯೂ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಮತ್ತು ರಾಜ್ಯ ಹೈಕೋರ್ಟ್ ಥಗ್ ಲೈಫ್ ಚಿತ್ರ ಬಿಡುಗಡೆಯನ್ನು ತಡೆದಿದೆ. ಜೂನ್ 10 ರಂದು ಕಮಲ್ ಕೆಎಫ್‌ಸಿಸಿ ಜೊತೆ ಈ ವಿಷಯದ ಬಗ್ಗೆ ಚರ್ಚಿಸಲಿದ್ದಾರೆ.

ನಟರು ಅಂತಹ ಸಂದರ್ಭಗಳನ್ನು ಹೇಗೆ ಎದುರಿಸಬೇಕು ಎಂಬುದರ ಕುರಿತು ಮಾತನಾಡಿದ ಬಾಹುಬಲಿ ತಾರೆ, ಸಾರ್ವಜನಿಕರು ಮತ್ತು ಮಾಧ್ಯಮಗಳು ನಟರು ಮಾದರಿಗಳಾಗಿ ವರ್ತಿಸಬೇಕು ಅಥವಾ ಸಮಾಜದಲ್ಲಿ ಜನರು ಹೇಗೆ ವರ್ತಿಸಬೇಕು ಎಂಬುದರ ಕುರಿತು ಮಾರ್ಗದರ್ಶನ ನೀಡಬೇಕು ಎಂದು ನಿರೀಕ್ಷಿಸಬಾರದು ಎಂದು ಹೇಳಿದರು.

'ನೀವು ರಾಜಕಾರಣಿಗಳು, ವಿದ್ವಾಂಸರು ಮತ್ತು ವಿದ್ಯಾವಂತ ವರ್ಗವನ್ನು ನೋಡಬೇಕು. ಅವರು ನಿಮಗೆ ದಾರಿ ತೋರಿಸಲು ಸಹಾಯ ಮಾಡುತ್ತಾರೆ' ಎಂದು ರಾಣಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT