ರಾಣಾ ದಗ್ಗುಬಾಟಿ - ಕಮಲ್ ಹಾಸನ್ 
ಸಿನಿಮಾ ಸುದ್ದಿ

'ತಮಿಳಿನಿಂದ ಕನ್ನಡ ಹುಟ್ಟಿತು' ಹೇಳಿಕೆ: ಕಮಲ್ ಹಾಸನ್‌ರ 'Thug Life' ವಿವಾದ ಕುರಿತು ರಾಣಾ ದಗ್ಗುಬಾಟಿ ಪ್ರತಿಕ್ರಿಯೆ

ಥಗ್ ಲೈಫ್ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ನೀಡಿದ ಹೇಳಿಕೆಯ ನಂತರ, ಕರ್ನಾಟಕದಿಂದ ಸಾಕಷ್ಟು ಟೀಕೆಗಳು ಕೇಳಿಬಂದವು.

ಇತ್ತೀಚೆಗೆ ನಡೆದ ಥಗ್ ಲೈಫ್ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಕನ್ನಡ ತಮಿಳಿನಿಂದ ಹುಟ್ಟಿದೆ ಎಂಬ ನಟ ಕಮಲ್ ಹಾಸನ್ ಅವರ ವಿವಾದಾತ್ಮಕ ಹೇಳಿಕೆಯ ಬಗ್ಗೆ ತೆಲುಗು ನಟ ರಾಣಾ ದಗ್ಗುಬಾಟಿ ಪ್ರತಿಕ್ರಿಯಿಸಿದ್ದಾರೆ. ಇತ್ತೀಚೆಗೆ ಇಂಡಿಯಾ ಟುಡೇ ಜೊತೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿನ ಟೀಕೆಗಳು ಇಂತಹ ವಿವಾದಗಳಲ್ಲಿ ಪಾತ್ರವಹಿಸುತ್ತವೆ ಎಂದು ಸೂಚಿಸಿದರು.

'ಸಾಮಾಜಿಕ ಮಾಧ್ಯಮವು ಅಭಿಪ್ರಾಯ ವ್ಯಕ್ತಪಡಿಸುವ ಸ್ಥಳವಾಗಿದೆ. ಈ ಹಿಂದೆ, ನಿಮಗೆ ಅದು ಇರಲಿಲ್ಲ. ಆದರೆ, ಈಗ ಯಾವುದೇ ವಿಷಯ ಬಹು ಬೇಗ ಭಾವನಾತ್ಮಕ ಮತ್ತು ರಾಜಕೀಯವಾಗಿ ಮಾರ್ಪಡುತ್ತದೆ' ಎಂದು ರಾಣಾ ಹೇಳಿದರು.

ಥಗ್ ಲೈಫ್ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ನೀಡಿದ ಹೇಳಿಕೆಯ ನಂತರ, ಕರ್ನಾಟಕದಿಂದ ಸಾಕಷ್ಟು ಟೀಕೆಗಳು ಕೇಳಿಬಂದವು. ನಟ ಶಿವರಾಜ್‌ಕುಮಾರ್ ಮೇಲಿನ ಪ್ರೀತಿಯಿಂದ ಈ ಹೇಳಿಕೆ ನೀಡಿದ್ದೇನೆ ಮತ್ತು ಕನ್ನಡಕ್ಕೆ ನಿರ್ವಿವಾದದ ಪರಂಪರೆ ಇದೆ ಎಂದು ನಟ ನಂತರ ಸ್ಪಷ್ಟಪಡಿಸಿದರು. ಆದಾಗ್ಯೂ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಮತ್ತು ರಾಜ್ಯ ಹೈಕೋರ್ಟ್ ಥಗ್ ಲೈಫ್ ಚಿತ್ರ ಬಿಡುಗಡೆಯನ್ನು ತಡೆದಿದೆ. ಜೂನ್ 10 ರಂದು ಕಮಲ್ ಕೆಎಫ್‌ಸಿಸಿ ಜೊತೆ ಈ ವಿಷಯದ ಬಗ್ಗೆ ಚರ್ಚಿಸಲಿದ್ದಾರೆ.

ನಟರು ಅಂತಹ ಸಂದರ್ಭಗಳನ್ನು ಹೇಗೆ ಎದುರಿಸಬೇಕು ಎಂಬುದರ ಕುರಿತು ಮಾತನಾಡಿದ ಬಾಹುಬಲಿ ತಾರೆ, ಸಾರ್ವಜನಿಕರು ಮತ್ತು ಮಾಧ್ಯಮಗಳು ನಟರು ಮಾದರಿಗಳಾಗಿ ವರ್ತಿಸಬೇಕು ಅಥವಾ ಸಮಾಜದಲ್ಲಿ ಜನರು ಹೇಗೆ ವರ್ತಿಸಬೇಕು ಎಂಬುದರ ಕುರಿತು ಮಾರ್ಗದರ್ಶನ ನೀಡಬೇಕು ಎಂದು ನಿರೀಕ್ಷಿಸಬಾರದು ಎಂದು ಹೇಳಿದರು.

'ನೀವು ರಾಜಕಾರಣಿಗಳು, ವಿದ್ವಾಂಸರು ಮತ್ತು ವಿದ್ಯಾವಂತ ವರ್ಗವನ್ನು ನೋಡಬೇಕು. ಅವರು ನಿಮಗೆ ದಾರಿ ತೋರಿಸಲು ಸಹಾಯ ಮಾಡುತ್ತಾರೆ' ಎಂದು ರಾಣಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT