ಶೈನ್ ಟಾಮ್ ಚಾಕೊ 
ಸಿನಿಮಾ ಸುದ್ದಿ

ಭೀಕರ ಅಪಘಾತ: ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ನಟನಿಗೆ ಗಂಭೀರ ಗಾಯ, ತಂದೆ ದುರ್ಮರಣ!

ಮಲಯಾಳಂ ನಟ ಶೈನ್ ಟಾಮ್ ಚಾಕೊ ಮತ್ತು ಅವರ ಕುಟುಂಬ ಕಾರು ಅಪಘಾತಕ್ಕೀಡಾಗಿದೆ. ಇಂದು ಬೆಳಿಗ್ಗೆ ತಮಿಳುನಾಡು ಬಳಿ ಈ ಅಪಘಾತ ಸಂಭವಿಸಿದೆ.

ಮಲಯಾಳಂ ನಟ ಶೈನ್ ಟಾಮ್ ಚಾಕೊ ಮತ್ತು ಅವರ ಕುಟುಂಬ ಕಾರು ಅಪಘಾತಕ್ಕೀಡಾಗಿದೆ. ಇಂದು ಬೆಳಿಗ್ಗೆ ತಮಿಳುನಾಡು ಬಳಿ ಈ ಅಪಘಾತ ಸಂಭವಿಸಿದೆ. ಟಾಮ್ ಚಾಕೊ ಅವರ ತಂದೆ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಅಪಘಾತದ ನಂತರ ನಟ ಮತ್ತು ಇತರ ಕುಟುಂಬ ಸದಸ್ಯರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಮನೋರಮಾ ಪ್ರಕಾರ, ಶುಕ್ರವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ತಮಿಳುನಾಡಿನ ಧರ್ಮಪುರಿ ಬಳಿಯ ಪಾಲಕೊಟ್ಟೈ ಬಳಿ ಈ ಘಟನೆ ನಡೆದಿದೆ. ಚಾಕೊ ತನ್ನ ಚಾಲಕ, ಪೋಷಕರು ಮತ್ತು ಸಹೋದರನೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಇದ್ದಕ್ಕಿದ್ದಂತೆ ಅವರ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಚಾಕೊ ಅವರ ತಂದೆ ಸಿಪಿ ಚಾಕೊ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಇತರರು ಪ್ರಸ್ತುತ ಪಾಲಕೊಟ್ಟೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಪೂರ್ಣವಾಗಿ ಹಾನಿಗೊಳಗಾದ ಕಾರಿನ ಫೋಟೋಗಳು ಆನ್‌ಲೈನ್‌ನಲ್ಲಿ ವೈರಲ್ ಆಗಿವೆ. ವೈದ್ಯರು ಚಾಕೊಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇದರ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿಯೂ ಕಾಣಿಸಿಕೊಂಡಿವೆ.

ಶೈನ್ ಟಾಮ್ ಚಾಕೊ ಒಂದು ತಿಂಗಳ ಹಿಂದೆ ಮಾದಕ ದ್ರವ್ಯ ಪ್ರಕರಣದಲ್ಲಿ ಬಂಧಿಸಲ್ಪಟ್ಟ ನಂತರ ಸುದ್ದಿಯಲ್ಲಿದ್ದರು. ಓರ್ವ ನಟಿ ಮಾದಕ ವಸ್ತುಗಳ ಪ್ರಭಾವದಿಂದ ತನಗೆ ಕಿರುಕುಳ ನೀಡುತ್ತಿದ್ದಾನೆಂದು ಆರೋಪಿಸಿದ್ದರು. ಇದಾದ ನಂತರ, ಪೊಲೀಸರು ಚಾಕೋ ವಿರುದ್ಧ ಕ್ರಮ ಕೈಗೊಂಡರು. ತನ್ನ ಸಿನಿಮಾಗಳ ಸೆಟ್‌ಗಳಲ್ಲಿಯೂ ಅವನು ಮಾದಕ ವಸ್ತುಗಳ ಸೇವನೆ ಮಾಡುತ್ತಿದ್ದನೆಂದು ನಟಿ ಹೇಳಿಕೊಂಡಿದ್ದರು. ಇಡೀ ತಂಡ ಮತ್ತು ನಿರ್ಮಾಣ ಘಟಕಕ್ಕೆ ಅವನ ನಡವಳಿಕೆಯ ಬಗ್ಗೆ ತಿಳಿದಿತ್ತು.

ನಟಿಯ ದೂರಿನ ಮೇರೆಗೆ, ಪೊಲೀಸರು ಚಾಕೊ ತಂಗಿದ್ದ ಹೋಟೆಲ್ ಮೇಲೆ ದಾಳಿ ನಡೆಸಿ ಮಾದಕ ವಸ್ತುಗಳ ಸೇವನೆ ಮಾಡುತ್ತಿದ್ದನೆಂದು ಆರೋಪಿಸಲಾಗಿದೆ. ಆದರೆ ಪೊಲೀಸರ ರೈಡ್ ಮಾಡುತ್ತಿರುವ ಸುಳಿವು ಸಿಕ್ಕ ತಕ್ಷಣ ನಟ ಅಲ್ಲಿಂದ ಪರಾರಿಯಾಗಿದ್ದನು. ಕೆಲ ದಿನಗಳ ಬಳಿಕ ಆತ ಪೊಲೀಸರ ಮುಂದೆ ಶರಣಾಗಿದ್ದು ಅದೇ ದಿನ ಜಾಮೀನು ಸಿಕ್ಕಿತ್ತು. ನಂತರ ಅವನನ್ನು ಕೇರಳ ಸರ್ಕಾರದ ವ್ಯಸನ ಮುಕ್ತಿ ಕಾರ್ಯಕ್ರಮ 'ವಿಮುಕ್ತಿ' ಅಡಿಯಲ್ಲಿ ಪುನರ್ವಸತಿ ಕೇಂದ್ರಕ್ಕೆ ಸೇರಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT