ಸಿನಿಮಾ ಸುದ್ದಿ

3ನೇ ದಿನಕ್ಕೆ ಮಕಾಡೆ ಮಲಗಿದ Thug Life: ಕನ್ನಡಿಗರನ್ನು ಕೆಣಕಿ ಸೋತು ಸುಣ್ಣವಾದ ಕಮಲ್ ಹಾಸನ್!

ನಟ ಕಮಲ್ ಹಾಸನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದ ಥಗ್ ಲೈಫ್ ಚಿತ್ರ ಜೂನ್ 5ರಂದು ಬಿಡುಗಡೆಯಾಗಿದೆ.

ನಟ ಕಮಲ್ ಹಾಸನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದ ಥಗ್ ಲೈಫ್ ಚಿತ್ರ ಜೂನ್ 5ರಂದು ಬಿಡುಗಡೆಯಾಗಿದೆ. ತಮಿಳಿನ ಬಹುನಿರೀಕ್ಷಿತ ಚಿತ್ರಗಳಲ್ಲಿ ಥಗ್ ಲೈಫ್ ಸಹ ಒಂದಾಗಿತ್ತು. ಆದರೆ ಕಮಲ್ ಹಾಸನ್ ಅವರ ಕನ್ನಡದ ಬಗ್ಗೆ ಆ ಒಂದು ಹೇಳಿಕೆ ಇದೀಗ ಚಿತ್ರದ ಮೇಲೆ ಋಣಾತ್ಮಕ ಪರಿಣಾಮ ಬೀರಿದೆ. ಮೊದಲ ದಿನದಂದು 30 ಕೋಟಿ ವ್ಯವಹಾರ ಮಾಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ವಾಸ್ತವವು ಇದಕ್ಕಿಂತ ಬಹಳ ಭಿನ್ನವಾಗಿತ್ತು. ಮೊದಲ ದಿನ ಚಿತ್ರವು ಒಟ್ಟು 15.5 ಕೋಟಿಗಳನ್ನು ಸಂಗ್ರಹಿಸಿತು. ಇದರಲ್ಲಿ ಹಿಂದಿ ಆವೃತ್ತಿ ಕೇವಲ 65 ಲಕ್ಷ ರೂಪಾಯಿಗಳನ್ನು ಗಳಿಸಿತ್ತು.

ಎರಡನೇ ದಿನದ ಗಳಿಕೆಯಲ್ಲಿ ಕುಸಿತ

ಎರಡನೇ ದಿನದ ಥಗ್ ಲೈಫ್ ಗಳಿಕೆಯಲ್ಲಿ ಭಾರಿ ಕುಸಿತ ಕಂಡುಬಂದಿದೆ. ಈ ಚಿತ್ರ ತಮಿಳು, ಹಿಂದಿ ಮತ್ತು ತೆಲುಗು ಭಾಷೆಗಳಲ್ಲಿ ಕೇವಲ 7.13 ಕೋಟಿ ವ್ಯವಹಾರ ಮಾಡಿದೆ. ವಿಶೇಷವೆಂದರೆ ಈ ಚಿತ್ರ ಹಿಂದಿಯಿಂದ ಕೇವಲ 29 ಲಕ್ಷ ರೂಪಾಯಿಗಳನ್ನು ಗಳಿಸಿದೆ. ಇದರಿಂದ ಒಂದು ವಿಷಯವೆಂದರೆ ಚಿತ್ರಕ್ಕೆ ಹಿಂದಿ ಪ್ರೇಕ್ಷಕರಿಂದ ಹೆಚ್ಚಿನ ಪ್ರತಿಕ್ರಿಯೆ ಸಿಗುತ್ತಿಲ್ಲ.

ಮೂರನೇ ದಿನದ ಕಲೆಕ್ಷನ್

ಚಿತ್ರದ ಮೂರನೇ ದಿನ ಅಂದರೆ ಇಂದು ಜೂನ್ 7ರ ಮಧ್ಯಾಹ್ನದವರೆಗೆ, ಆರಂಭಿಕ ವರದಿಗಳ ಪ್ರಕಾರ, ಚಿತ್ರವು 2.56 ಕೋಟಿಗಳನ್ನು ಸಂಗ್ರಹಿಸಿದೆ. ಇಂದು ಒಟ್ಟಾರೆ 7.50 ಕೋಟಿ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಇದರೊಂದಿಗೆ ಥಗ್ ಲೈಫ್‌ನ ಒಟ್ಟು ಗಳಿಕೆ ಸುಮಾರು 30 ಕೋಟಿಗಳಷ್ಟಾಗುತ್ತದೆ. ಇದು ಚಿತ್ರ ಸೋಲುವುದು ಸ್ಪಷ್ಟವಾಗಿದೆ. ಕಾರಣ ಈ ಚಿತ್ರವನ್ನು ಬರೋಬ್ಬರಿ 180 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಮೊದಲ ವಾರದಲ್ಲಿ ಬಜೆಟ್ ನ ಮೂಕ್ಕಾಲು ಭಾಗದಷ್ಟು ಕಲೆಕ್ಷನ್ ಆದರೆ ಮುಂದಿನ ವಾರಗಳಲ್ಲಿ ಚಿತ್ರ ಲಾಭ ಮಾಡುವುದು ಸಹಜ. ಆದರೆ ಇದೂವರೆಗೂ ಚಿತ್ರ ಶೇಕಡ 20ರಷ್ಟು ಕಲೆಕ್ಷನ್ ಮಾಡಿಲ್ಲ.

ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆಯಿಂದಾಗಿ ಚಿತ್ರಕ್ಕೆ ಭಾರೀ ಹಿನ್ನಡೆಯಾಗಿತ್ತು. ಹೌದು... ರಾಜ್ಯದಲ್ಲಿ ಚಿತ್ರ ಬಿಡುಗಡೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು ಕೊನೆಗೆ ಚಿತ್ರತಂಡವೇ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಹಿಂದೇಟು ಹಾಕಿತು. ಇದು ರಾಜ್ಯದಲ್ಲಿ ಬರೋಬ್ಬರಿ 40 ಕೋಟಿ ರೂಪಾಯಿ ನಷ್ಟವಾಗಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT