ಪೆನ್ ಡ್ರೈವ್ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಮಾಲಾಶ್ರೀ, ಬಿಗ್‌ಬಾಸ್ ಖ್ಯಾತಿಯ ತನಿಶಾ ಕುಪ್ಪಂಡ, ಕಿಶನ್ ನಟನೆಯ Pen Drive ಬಿಡುಗಡೆಗೆ ದಿನಾಂಕ ನಿಗದಿ

ಚಿತ್ರದಲ್ಲಿ ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನಾ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು ಮತ್ತು ಎನ್ ಹನುಮಂತರಾಜು ಮುಂತಾದವರು ನಟಿಸಿದ್ದಾರೆ.

ಮುಂಬರುವ ಕನ್ನಡ ಚಿತ್ರ ಪೆನ್ ಡ್ರೈವ್ ಈಗಾಗಲೇ ತನ್ನ ಪ್ರಚೋದನಕಾರಿ ಶೀರ್ಷಿಕೆಯಿಂದಾಗಿ ಭಾರಿ ಸದ್ದು ಮಾಡುತ್ತಿದೆ. ಈ ಹೆಸರು ತೂಕ ಹೊಂದಿದೆ ಎಂದು ನಿರ್ದೇಶಕ ಸೆಬಾಸ್ಟಿಯನ್ ಡೇವಿಡ್ ಹೇಳಿದ್ದಾರೆ. ಇದೀಗ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಜುಲೈ 4 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ನಟಿ ಮಾಲಾಶ್ರೀ ನಟನೆಯ ಈ ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ತನಿಶಾ ಕುಪ್ಪಂಡ ಮತ್ತು ಕಿಶನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆರ್‌ಎಚ್ ಎಂಟರ್‌ಪ್ರೈಸಸ್‌ನ ಎನ್ ಹನುಮಂತರಾಜು ಮತ್ತು ಲಯನ್ ಎಸ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಇತ್ತೀಚೆಗೆ ನಡೆದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಖ್ಯಾತ ಗೀತರಚನೆಕಾರ ಮತ್ತು ಸಂಗೀತ ಸಂಯೋಜಕ ಡಾ. ವಿ ನಾಗೇಂದ್ರ ಪ್ರಸಾದ್ ಅವರು ಕರ್ನಾಟಕ ಚಲನಚಿತ್ರ ಮಂಡಳಿಯ ಅಧ್ಯಕ್ಷ ನರಸಿಂಹುಲು ಅವರ ಸಮ್ಮುಖದಲ್ಲಿ ಹಾಡನ್ನು ಬಿಡುಗಡೆ ಮಾಡಿದರು.

ನಿರ್ದೇಶಕ ಡೇವಿಡ್ ಮಾತನಾಡಿ, 'ಪೆನ್ ಡ್ರೈವ್ ಎಂಬುದು ಕೇವಲ ತಾಂತ್ರಿಕ ಶೀರ್ಷಿಕೆಯಲ್ಲ. ಇದು ನನ್ನ ಹಿಂದಿನ ಸಿನಿಮಾಗಳಂತೆ ಸಮಾಜಕ್ಕೆ ಕನ್ನಡಿ ಹಿಡಿದಿದೆ. ಕರ್ನಾಟಕದಾದ್ಯಂತ 150ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ' ಎಂದರು.

ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ತನಿಶಾ, ಕಿಶನ್ ಜೊತೆ ಉತ್ಸಾಹಭರಿತ ಹಾಡಿನಲ್ಲಿ ನಟಿಸಿದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು. 'ಬಿಗ್ ಬಾಸ್ ನಂತರ ಇದು ನನ್ನ ಮೊದಲ ಪ್ರಾಜೆಕ್ಟ್ ಆಗಿದ್ದು, ಈ ಬಗ್ಗೆ ನನಗೆ ತುಂಬಾ ಸಂತೋಷವಾಗಿದೆ' ಎಂದು ಕಿಶನ್ ಹೇಳುತ್ತಾರೆ.

ಚಿತ್ರದಲ್ಲಿ ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನಾ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು ಮತ್ತು ಎನ್ ಹನುಮಂತರಾಜು ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಪಿವಿಆರ್ ಸ್ವಾಮಿ ಅವರ ಛಾಯಾಗ್ರಹಣ ಮತ್ತು ನಾಗೇಶ್ ಅವರ ಸಂಕಲನವಿದೆ. ನಾಗೇಶ್ ಅವರು ಚಿತ್ರಕಥೆಗೂ ಕೊಡುಗೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT