ಜೆನೆಸಿಸ್ ಯಾಸ್ಮಿನ್ ಮೋಹನರಾಜ್ 
ಸಿನಿಮಾ ಸುದ್ದಿ

ಹಿಂದೂ ದೇವತೆ ಕಾಳಿಯ ವೇಷ ಧರಿಸಿ ರ‍್ಯಾಪರ್ ಜೆನೆಸಿಸ್ ಕೀಳುಮಟ್ಟದ ಅಭಿನಯ; ಶಿಲುಬೆ ನೆಕ್ಕಿ ವಿಕೃತಿ, Video!

ಟಾಮಿ ಜೆನೆಸಿಸ್ ಎಂದೇ ಪ್ರಸಿದ್ಧರಾಗಿರುವ ಭಾರತೀಯ ಮೂಲದ ರ‍್ಯಾಪರ್ ಜೆನೆಸಿಸ್ ಯಾಸ್ಮಿನ್ ಮೋಹನರಾಜ್ ಅವರ ಹೊಸ ವೀಡಿಯೊ 'ಟ್ರೂ ಬ್ಲೂ' ವೈರಲ್ ಆದ ನಂತರ ತೀವ್ರ ಟೀಕೆಗಳನ್ನು ಎದುರಿಸುತ್ತಿದ್ದಾರೆ.

ಟಾಮಿ ಜೆನೆಸಿಸ್ ಎಂದೇ ಪ್ರಸಿದ್ಧರಾಗಿರುವ ಭಾರತೀಯ ಮೂಲದ ರ‍್ಯಾಪರ್ ಜೆನೆಸಿಸ್ ಯಾಸ್ಮಿನ್ ಮೋಹನರಾಜ್ ರ ಹೊಸ ವೀಡಿಯೊ 'ಟ್ರೂ ಬ್ಲೂ' ವೈರಲ್ ಆದ ನಂತರ ತೀವ್ರ ಟೀಕೆಗಳನ್ನು ಎದುರಿಸುತ್ತಿದ್ದಾರೆ. ವೀಡಿಯೊದಲ್ಲಿ, ಅವರು ನೀಲಿ ದೇಹದ ಬಣ್ಣ, ಚಿನ್ನದ ಆಭರಣಗಳು ಮತ್ತು ಕೆಂಪು ಬಿಂದಿಯೊಂದಿಗೆ ಹಿಂದೂ ದೇವತೆಯಂತೆ ಕಾಣಿಸುತ್ತಿದ್ದು, ಕ್ರಿಶ್ಚಿಯನ್ ಶಿಲುಬೆಯನ್ನು ಬಳಸಿರುವುದಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೀಡಿಯೊದಲ್ಲಿ ಜೆನೆಸಿಸ್ ಶಿಲುಬೆಯನ್ನು ನೆಕ್ಕುವುದು ಮತ್ತು ಅದನ್ನು ಎದೆಯ ಮೇಲಿಟ್ಟುಕೊಂಡು ಪೋಸ್ ನೀಡುವುದನ್ನು ಕಾಣಬಹುದು. ಈ ದೃಶ್ಯವು ಹಿಂದೂ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಜನರನ್ನು ಅಸಮಾಧಾನಗೊಳಿಸಿದೆ. ಇದನ್ನು 'ದೇವದೂಷಣೆ' ಎಂದು ಕರೆದಿದ್ದಾರೆ.

ಸಾಮಾಜಿಕ ಮಾಧ್ಯಮ ಬಳಕೆದಾರರು ರ‍್ಯಾಪರ್ ಟಾಮಿ ಜೆನೆಸಿಸ್ ಅವರ 'ಟ್ರೂ ಬ್ಲೂ' ಸಂಗೀತ ವೀಡಿಯೊದಲ್ಲಿನ ಈ ದೃಶ್ಯಗಳಿಗಾಗಿ ಬಲವಾಗಿ ಟೀಕಿಸಿದ್ದಾರೆ. ಉದ್ದೇಶಪೂರ್ವಕವಾಗಿ ಧಾರ್ಮಿಕ ಸಮುದಾಯಗಳನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮತ್ತೊಬ್ಬ ಬಳಕೆದಾರರು, ಭಾರತೀಯರ ಹಿಂದೂ ಭಾವನೆಗಳನ್ನು ನೋಯಿಸಲು ಉದ್ದೇಶಪೂರ್ವಕವಾಗಿ ಮಾಡಲಾಗಿರುವ ಸಾಧ್ಯತೆಯಿದೆ. ಪೃಷ್ಠದಿಂದ ಶಿಲುಬೆ ಹೊರ ತೆಗೆಯುವುದು? ಅವಳು ಎಲ್ಲರ ಭಾವನೆಗಳನ್ನು ನೋಯಿಸುತ್ತಿದ್ದಾಳೆ. ಬಹುಶಃ ಉದ್ದೇಶಪೂರ್ವಕವಾಗಿ ವೈರಲ್ ಮಾಡಲು ಈ ಅಗ್ಗದ ತಂತ್ರ ಬಳಸಿದ್ದಾರೆ ಎಂದು ಆರೋಪಿಸಿದರು.

ಜೆನೆಸಿಸ್ ಯಾಸ್ಮಿನ್ ಮೋಹನರಾಜ್ ಕೆನಡಾದ ವ್ಯಾಂಕೋವರ್‌ನಲ್ಲಿ ಜನಿಸಿದ್ದು ತಮಿಳು ಮತ್ತು ಸ್ವೀಡಿಷ್ ಹಿನ್ನೆಲೆಯಿಂದ ಬಂದವರು. ಅವರ ದಿಟ್ಟ ಶೈಲಿಗೆ ಹೆಸರುವಾಸಿಯಾದ ಗಾಯಕಿ ಆಗಾಗ್ಗೆ ಪ್ರಚೋದನಕಾರಿ ಹಾಡುಗಳೊಂದಿಗೆ ಬರುತ್ತಾರೆ. ಇದಕ್ಕೂ ಮೊದಲು ಅವರು ಬಹಳಷ್ಟು ಕೆಲಸಗಳನ್ನು ಮಾಡಿದ್ದು ನಂತರ ಅವರನ್ನು ತೀವ್ರವಾಗಿ ಟ್ರೋಲ್ ಗೆ ಗುರಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT