ಕಿಚ್ಚ ಸುದೀಪ್ 
ಸಿನಿಮಾ ಸುದ್ದಿ

BBK12 Big Update: ಬಿಗ್ ಬಾಸ್ ನಿರೂಪಣೆಗೆ ಒಪ್ಪಿಕೊಂಡ್ರಾ ಕಿಚ್ಚ ಸುದೀಪ್? ದಿಢೀರ್ ಪ್ರೆಸ್‌ಮೀಟ್‌ ಕರೆದ ಆಯೋಜಕರು!

ಬಿಗ್​ಬಾಸ್ ಕನ್ನಡ ಸೀಸನ್ 11 (Bigg Boss Kannada) ಮುಗಿದಿದ್ದು ಮತ್ತೊಂದು ಆವೃತ್ತಿಗೆ ತಯಾರಿಗಳು ಜೋರಾಗಿ ನಡೆಯುತ್ತಿವೆ.

ಬಿಗ್​ಬಾಸ್ ಕನ್ನಡ ಸೀಸನ್ 11 (Bigg Boss Kannada) ಮುಗಿದಿದ್ದು ಮತ್ತೊಂದು ಆವೃತ್ತಿಗೆ ತಯಾರಿಗಳು ಜೋರಾಗಿ ನಡೆಯುತ್ತಿವೆ. ಕಳೆದ ಬಾರಿ ಬಿಗ್ ಬಾಸ್ ಮುಗಿಯುತ್ತಿದ್ದಂತೆ ನಿರೂಪಣೆಗೆ ಕಿಚ್ಚ ಸುದೀಪ್ ಗುಡ್ ಬೈ ಹೇಳಿದ್ದರು. ಕನ್ನಡ ಬಿಗ್ ಬಾಸ್ ಶೋ ಆರಂಭವಾದಾಗಿನಿಂದಲೂ ಸುದೀಪ್ ಅವರು ನಿರೂಪಣೆ ಮಾಡಿಕೊಂಡು ಬಂದಿದ್ದಾರೆ. ಅವರ ಜಾಗದಲ್ಲಿ ಮತ್ತೊಬ್ಬರನ್ನು ಊಹಿಸುವುದು ಅಸಾಧ್ಯ. ಈಗಿರುವಾಗ ಹೊಸ ಆವೃತ್ತಿಯ ಕುರಿತಂತೆ ನಾಳೆ ಬಿಗ್ ಬಾಸ್ ಆಯೋಜಕರು ಪತ್ರಿಕಾಗೋಷ್ಠಿ ಆಯೋಜನೆ ಮಾಡಿದೆ.

ತಾಜ್ ಹೋಟೆಲ್​​ನಲ್ಲಿ ಜೂನ್ 30ರಂದು ಪತ್ರಿಕಾಗೋಷ್ಠಿ ಆಯೋಜನೆ ಮಾಡಲಾಗಿದ್ದು, ಸಾರ್ವಜನಿಕರಿಗೆ ಪ್ರವೇಶವಿಲ್ಲ. ನಾಳೆ ಬಿಗ್​ಬಾಸ್ ಕನ್ನಡ ಸೀಸನ್ 12 ಅನ್ನು ಯಾರು ನಿರೂಪಣೆ ಮಾಡಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಸಿಗುವ ಸಾಧ್ಯತೆ. ಒಂದು ವೇಳೆ ಕಿಚ್ಚ ಸುದೀಪ್ ಒಪ್ಪಿಕೊಂಡಿದ್ದರೆ ಮುಂದಿನ ಆವೃತ್ತಿಯನ್ನು ಅವರೇ ನಿರೂಪಣೆ ಮಾಡಲಿದ್ದಾರೆ. ಇಲ್ಲದಿದ್ದರೆ ಅವರ ಜಾಗಕ್ಕೆ ಯಾರೂ ಬರುತ್ತಾರೆ ಎಂಬುದು ನಾಳೆ ಸಂಜೆ 4 ಗಂಟೆಗೆ ತಿಳಿಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT