ಉಮೇಶ್ ಬಣಕಾರ್‌ ಅವರಿಗೆ ಪತ್ರ ನೀಡಿದ ಮಡೆನೂರು ಮನು 
ಸಿನಿಮಾ ಸುದ್ದಿ

ಮಡೆನೂರು ಮನುಗೆ ಬಿಗ್ ರಿಲೀಫ್; ಕನ್ನಡ ಚಿತ್ರರಂಗದಿಂದ ನಿಷೇಧ ತೆರವು

ಮಡೆನೂರು ಮನು ಅವರದ್ದು ಎನ್ನಲಾದ ವೈರಲ್ ಆದ ಆಡಿಯೋದಲ್ಲಿ ನಟರಾದ ಶಿವರಾಜ್​ಕುಮಾರ್, ಧ್ರುವ ಸರ್ಜಾ ಮತ್ತು ದರ್ಶನ್ ಬಗ್ಗೆ ಕೆಟ್ಟದಾಗಿ ಮಾತನಾಡಲಾಗಿತ್ತು. ಆ ಹಿನ್ನೆಲೆಯಲ್ಲಿ ಮನು ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಲಾಗಿತ್ತು.

ಬೆಂಗಳೂರು: ಸ್ನೇಹಿತೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಮಡೆನೂರು ಮನುಗೆ ಬಿಗ್ ರಿಲೀಫ್ ಸಿಕ್ಕಿದೆ. ಕನ್ನಡ ಚಿತ್ರರಂಗದಿಂದ ವಿಧಿಸಿದ್ದ ನಿಷೇಧವನ್ನು ಫಿಲ್ಮ್‌ ಚೇಂಬರ್‌ ತೆರವು ಮಾಡಿದೆ.

ಇತ್ತೀಚೆಗೆ ಸಾಕಷ್ಟು ವಿವಾದ ಮಾಡಿಕೊಂಡಿದ್ದ ಮಡೆನೂರು ಮನು ಅವರದ್ದು ಎನ್ನಲಾದ ವೈರಲ್ ಆದ ಆಡಿಯೋದಲ್ಲಿ ನಟರಾದ ಶಿವರಾಜ್​ಕುಮಾರ್, ಧ್ರುವ ಸರ್ಜಾ ಮತ್ತು ದರ್ಶನ್ ಬಗ್ಗೆ ಕೆಟ್ಟದಾಗಿ ಮಾತನಾಡಲಾಗಿತ್ತು. ಆ ಹಿನ್ನೆಲೆಯಲ್ಲಿ ಮನು ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಲಾಗಿತ್ತು. ಆದರೆ ಮನು ಮೇಲೆ ಹೇರಿದ್ದ ನಿಷೇಧವನ್ನು ತೆರೆವುಗೊಳಿಸಲು ತೀರ್ಮಾನಿಸಲಾಗಿದೆ.

ಮಡೆನೂರು ಮನು ಅವರುನಟರಾದ ಶಿವರಾಜ್​ಕುಮಾರ್, ಧ್ರುವ ಸರ್ಜಾ ಮತ್ತು ದರ್ಶನ್ ಅವರಿಗೆ ಕ್ಷಮೆಯಾಚಿಸಿ ಪತ್ರ ಬರೆದಿದ್ದು, ಆ ಪತ್ರವನ್ನು ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್‌ ಅವರಿಗೆ ನೀಡಿದ್ದಾರೆ.

ಮಡೆನೂರು ಮನು ಪತ್ರ ಸ್ವೀಕರಿಸಿದ ಉಮೇಶ್ ಬಣಕಾರ್ ಅವರು, ಈಗಾಗಲೇ ಮನು ಬಹಿರಂಗವಾಗಿ ಮೂವರು ನಟರ ಬಳಿ ಕ್ಷಮೆ ಕೇಳಿದ್ದಾರೆ. ಹೀಗಾಗಿ ಅವರಿಗೆ ಒಂದು ಅವಕಾಶ ಕೊಡುತ್ತೇವೆ. ಮುಂದಿನ ದಿನಗಳಲ್ಲಿ ಉತ್ತಮ ನಟನಾಗಿ ಕನ್ನಡ ಚಿತ್ರರಂಗದ ಹೆಸರು ಕಾಪಾಡಲಿ ಎಂದು ಮನುಗೆ ಉಮೇಶ್‌ ಬಣಕಾರ್‌ ಬುದ್ಧಿವಾದ ಹೇಳಿದ್ದಾರೆ.

ಮನು ಇತ್ತೀಚಿಗೆ ಕ್ಷಮೆ ಕೇಳಲು ಶಿವರಾಜ್ ​ಕುಮಾರ್ ಅವರ ಮನೆಗೆ ಹೋಗಿದ್ದರು. ಆದರೆ ಶಿವಣ್ಣನನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ. ಬಳಿಕ ನಿರಾಸೆಯಿಂದ ವಿಡಿಯೋ ಮೂಲಕ ಶಿವಣ್ಣನಿಗೆ ಮನು ಕ್ಷಮೆ ಕೇಳಿದ್ದರು. ಇದೀಗ ನಿರ್ಮಾಪಕ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಅವರನ್ನು ಮನು ಭೇಟಿ ಆಗಿದ್ದಾರೆ. ಮೂವರೂ ನಟರಿಗೆ ಕ್ಷಮೆ ಕೋರಿ ಮನು ಪತ್ರ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಮಸೂದೆ ವಿರುದ್ಧ ರಾಷ್ಟ್ರಪತಿಗೆ ನಿಯೋಗ; ರಾಜ್ಯ ಸರ್ಕಾರ

ಮಲಯಾಳಂ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್ಕೆ: ಕೇರಳ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ, ಪುನರ್ ಪರಿಶೀಲನೆಗೆ ಒತ್ತಾಯ

'ರಾಜಕೀಯ ದ್ವೇಷ, ಪೊಲೀಸರ ವೈಫಲ್ಯ' ಬಳ್ಳಾರಿ ಹಿಂಸಾಚಾರ ಘಟನೆಗೆ ಕಾರಣ: ಕಾಂಗ್ರೆಸ್ ಸಮಿತಿ

ಈ ಬಾರಿ ಫೆ.1ರ ಭಾನುವಾರ ಕೇಂದ್ರ ಬಜೆಟ್, ಜ. 29ಕ್ಕೆ ಆರ್ಥಿಕ ಸಮೀಕ್ಷೆ ಮಂಡನೆ!

'ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ': ಲುಟ್ನಿಕ್ ಹೇಳಿಕೆ ತಳ್ಳಿಹಾಕಿದ MEA, ಹೇಳಿದ್ದೇನು?

SCROLL FOR NEXT