ಮನದ ಕಡಲು ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಯೋಗರಾಜ್ ಭಟ್ ನಿರ್ದೇಶನದ, ಸುಮುಖ ನಟನೆಯ 'ಮನದ ಕಡಲು' ಬಿಡುಗಡೆಗೆ ದಿನಾಂಕ ನಿಗದಿ

2019ರಲ್ಲಿ ತೆರೆಕಂಡ ಯಾನ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದ ನಟ ಸುಮುಖ 2022ರಲ್ಲಿ ಫಿಸಿಕ್ಸ್ ಟೀಚರ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಮನದ ಕಡಲು ಚಿತ್ರದಲ್ಲಿ ನಟಿಸಿದ್ದಾರೆ.

ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಪೂಜಾ ಗಾಂಧಿ ಅಭಿನಯದ 'ಮುಂಗಾರು ಮಳೆ' ಚಿತ್ರ ವ್ಯಾಪಕ ಯಶಸ್ಸು ಕಂಡಿತ್ತು. ಅದಾದ 18 ವರ್ಷಗಳ ನಂತರ ನಿರ್ದೇಶಕ ಯೋಗರಾಜ್ ಭಟ್ ಮತ್ತು ನಿರ್ಮಾಪಕ ಇ ಕೃಷ್ಣಪ್ಪ ಇದೀಗ 'ಮನದ ಕಡಲು' ಎಂಬ ಮತ್ತೊಂದು ರೊಮ್ಯಾಂಟಿಕ್ ಚಿತ್ರಕ್ಕಾಗಿ ಮತ್ತೆ ಒಂದಾಗಿದ್ದಾರೆ.

EK ಎಂಟರ್ಟೈನರ್ಸ್ ಪಿಕ್ಚರ್ಸ್ ನಿರ್ಮಾಣದ ಈ ಚಿತ್ರವು ಮಾರ್ಚ್ 28 ರಂದು ತೆರೆಗೆ ಬರಲು ಸಿದ್ಧವಾಗಿದೆ. ಚಿತ್ರ ಬಿಡುಗಡೆ ದಿನಾಂಕವನ್ನು ವಿಡಿಯೋ ಮೂಲಕ ಅಧಿಕೃತವಾಗಿ ಘೋಷಿಸಲಾಗಿದೆ. ವಿಡಿಯೋದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ಪೂಜಾ ಗಾಂಧಿ ಮತ್ತು ಅನಂತ್ ನಾಗ್ ನಟಿಸಿದ ಮುಂಗಾರು ಮಳೆಗೆ ತಮಾಷೆಯ ದೃಶ್ಯವನ್ನು ಒಳಗೊಂಡಿದೆ.

2019ರಲ್ಲಿ ತೆರೆಕಂಡ ಯಾನ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದ ನಟ ಸುಮುಖ 2022ರಲ್ಲಿ ಫಿಸಿಕ್ಸ್ ಟೀಚರ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಮನದ ಕಡಲು ಚಿತ್ರದಲ್ಲಿ ನಟಿಸಿದ್ದಾರೆ. ರಶಿಕಾ ಶೆಟ್ಟಿ ಮತ್ತು ಅಂಜಲಿ ಅನೀಶ್ ನಾಯಕಿಯರಾಗಿ ನಟಿಸಿದ್ದಾರೆ.

ಚಿತ್ರಕ್ಕೆ ವಿ ಹರಿಕೃಷ್ಣ ಅವರ ಸಂಗೀತ ಮತ್ತು ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣವಿದೆ. ಚಿತ್ರದಲ್ಲಿ ರಂಗಾಯಣ ರಘು ಮತ್ತು ದತ್ತಣ್ಣ ಸೇರಿದಂತೆ ಸಮಗ್ರ ತಾರಾಗಣವನ್ನು ಹೊಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT