ಶಿವರಾಜ್‌ಕುಮಾರ್ - ರಾಮ್ ಚರಣ್ 
ಸಿನಿಮಾ ಸುದ್ದಿ

ರಾಮ್ ಚರಣ್ ನಟನೆಯ 'RC 16' ತೆಲುಗು ಚಿತ್ರದಲ್ಲಿ ಶಿವರಾಜ್‌ಕುಮಾರ್; ಲುಕ್ ಟೆಸ್ಟ್ ಮುಗಿಸಿದ ನಟ!

ಮೈತ್ರಿ ಮೂವಿ ಮೇಕರ್ಸ್ ಜೊತೆಗೆ ಚಿತ್ರವನ್ನು ನಿರ್ಮಿಸುತ್ತಿರುವ ವೃದ್ಧಿ ಸಿನಿಮಾಸ್ ತನ್ನ X ಖಾತೆಯಲ್ಲಿ ಶಿವರಾಜ್‌ಕುಮಾರ್ ಅವರು ತಮ್ಮ ಪಾತ್ರಕ್ಕಾಗಿ ಲುಕ್ ಟೆಸ್ಟ್‌ಗೆ ಒಳಗಾಗುತ್ತಿರುವ ವಿಡಿಯೋ ಕ್ಲಿಪ್ ಅನ್ನು ಹಂಚಿಕೊಂಡಿದೆ.

ಚೆನ್ನೈ: ತೆಲುಗು ಸ್ಟಾರ್ ರಾಮ್ ಚರಣ್ ನಟನೆಯ, ಬುಚ್ಚಿ ಬಾಬು ಸನಾ ನಿರ್ದೇಶನದ ಬಹುನಿರೀಕ್ಷಿತ ಚಿತ್ರದಲ್ಲಿ ನಟ ಶಿವರಾಜ್‌ಕುಮಾರ್ ನಟಿಸುತ್ತಿದ್ದು, ತಮ್ಮ ಪಾತ್ರದ ಲುಕ್ ಟೆಸ್ಟ್ ಅನ್ನು ಪೂರ್ಣಗೊಳಿಸಿದ್ದಾರೆ ಮತ್ತು ಶೀಘ್ರದಲ್ಲೇ ಚಿತ್ರದ ಸೆಟ್‌ಗೆ ಸೇರಲಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ.

ಮೈತ್ರಿ ಮೂವಿ ಮೇಕರ್ಸ್ ಜೊತೆಗೆ ಚಿತ್ರವನ್ನು ನಿರ್ಮಿಸುತ್ತಿರುವ ವೃದ್ಧಿ ಸಿನಿಮಾಸ್ ತನ್ನ X ಖಾತೆಯಲ್ಲಿ ಶಿವರಾಜ್‌ಕುಮಾರ್ ಅವರು ತಮ್ಮ ಪಾತ್ರಕ್ಕಾಗಿ ಲುಕ್ ಟೆಸ್ಟ್‌ಗೆ ಒಳಗಾಗುತ್ತಿರುವ ವಿಡಿಯೋ ಕ್ಲಿಪ್ ಅನ್ನು ಹಂಚಿಕೊಂಡಿದೆ. ಚಿತ್ರಕ್ಕೆ ತಾತ್ಕಾಲಿಕವಾಗಿ 'RC 16' ಎಂದು ಹೆಸರಿಡಲಾಗಿದೆ.

'RC 16 ಚಿತ್ರಕ್ಕಾಗಿ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ಅವರ ಲುಕ್ ಟೆಸ್ಟ್ ಪೂರ್ಣಗೊಂಡಿದೆ. ಅವರು ತಮ್ಮ ಪಾತ್ರಕ್ಕಾಗಿ ಬೆರಗುಗೊಳಿಸುವ ಮೇಕ್ ಓವರ್‌ಗೆ ಸಿದ್ಧರಾಗಿದ್ದಾರೆ. ಅದು ಅತ್ಯುತ್ತಮ ಮತ್ತು ಸೆನ್ಸೇಷನಲ್ ಆಗಿರುತ್ತದೆ. ಅವರು ಶೀಘ್ರದಲ್ಲೇ ಚಿತ್ರೀಕರಣಕ್ಕೆ ಸೇರಿಕೊಳ್ಳಲಿದ್ದಾರೆ' ಎಂದು ಬರೆದಿದ್ದಾರೆ.

ನಟ ರಾಮ್ ಚರಣ್ ಈ ಚಿತ್ರಕ್ಕಾಗಿ ಜನಪ್ರಿಯ ಹೇರ್ ಸ್ಟೈಲಿಸ್ಟ್ ಆಲಿಮ್ ಹಕೀಮ್ ಅವರಿಂದ ಮೇಕ್ ಓವರ್ ಪಡೆದಿದ್ದಾರೆ. ಇದನ್ನು ನಿರ್ಮಾಪಕರು 'ಹಿಂದೆಂದೂ ನೋಡಿರದ ಮ್ಯಾಸೀವ್ ಲುಕ್' ಎಂದು ಕರೆದಿದ್ದಾರೆ.

ಚಿತ್ರದಲ್ಲಿ ಜಾನ್ವಿ ಕಪೂರ್ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಆಂಧ್ರ ಪ್ರದೇಶದ ಉತ್ತರಾಂಧ್ರ ಪ್ರದೇಶದಲ್ಲಿ ನಡೆಯುವ ಕಥೆಯನ್ನು ಒಳಗೊಂಡಿದೆ. ರಾಮ್ ಮತ್ತು ಜಾನ್ವಿ ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರತಂಡ ಕರ್ನಾಟಕದ ಮೈಸೂರಿನಲ್ಲಿ ಸದ್ಯ ಚಿತ್ರೀಕರಣ ನಡೆಸುತ್ತಿದೆ ಎಂಬ ಮಾತುಗಳು ಚಿತ್ರರಂಗದಲ್ಲಿ ಹರಿದಾಡುತ್ತಿವೆ. ಅಲ್ಲಿ ಚಿತ್ರೀಕರಣ ಪೂರ್ಣಗೊಂಡ ನಂತರ, ಚಿತ್ರತಂಡ ದೆಹಲಿಗೆ ತೆರಳುವ ನಿರೀಕ್ಷೆಯಿದೆ.

ಚಿತ್ರದಲ್ಲಿ ನಟರಾದ ಜಗಪತಿ ಬಾಬು ಮತ್ತು ದಿವ್ಯೇಂದು ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ವಿಜೇತ ಎ ಆರ್ ರೆಹಮಾನ್ ಸಂಗೀತ ಸಂಯೋಜಿಸುತ್ತಿದ್ದು, ರತ್ನವೇಲು ಅಲಿಯಾಸ್ ರಾಂಡಿ ಅವರ ಛಾಯಾಗ್ರಹಣವಿದೆ. ಇವರು ನೈಸರ್ಗಿಕ ಬೆಳಕನ್ನು ಬಳಸುವಲ್ಲಿ ಹೆಸರುವಾಸಿಯಾಗಿದ್ದಾರೆ. ಚಿತ್ರಕ್ಕೆ ಕೊಲ್ಲಾ ಅವಿನಾಶ್ ಅವರ ಕಲಾ ನಿರ್ದೇಶನವಿದ್ದು, ಏಗನ್ ಏಕಾಂಬರಂ ಅವರ ಕಾಸ್ಟ್ಯೂಮ್ಸ್‌ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT