ಧ್ರುವ ಸರ್ಜಾ - ಅರ್ಜುನ್ ಸರ್ಜಾ 
ಸಿನಿಮಾ ಸುದ್ದಿ

ಅರ್ಜುನ್ ಸರ್ಜಾ ನಿರ್ದೇಶನದ 'ಸೀತಾ ಪಯಣ' ಚಿತ್ರದಲ್ಲಿ ನಟ ಧ್ರುವ ಸರ್ಜಾ; ಇಂದಿನಿಂದ ಚಿತ್ರೀಕರಣ

ಅರ್ಜುನ್ ಸರ್ಜಾ ನಿರ್ದೇಶನದ ಕೊನೆಯ ಚಿತ್ರ 'ಪ್ರೇಮ ಬರಹ'ದಲ್ಲಿ ಧ್ರುವ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದರು. ಆದರೆ, ಸೀತಾ ಪಯಣ ಚಿತ್ರದಲ್ಲಿ ಧ್ರುವ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಇದರಲ್ಲಿ ಫೈಟ್ ಸೀಕ್ವೆನ್ಸ್ ಕೂಡ ಇದೆ.

ಅರ್ಜುನ್ ಸರ್ಜಾ ನಿರ್ದೇಶನದ ಮುಂಬರುವ ಚಿತ್ರ 'ಸೀತಾ ಪಯಣ'ದಲ್ಲಿ ಅವರ ಪುತ್ರಿ ಐಶ್ವರ್ಯಾ ಅರ್ಜುನ್ ಮತ್ತು ನಿರಂಜನ್ ಸುಧೀಂದ್ರ (ಉಪೇಂದ್ರ ಅವರ ಸೋದರಳಿಯ) ನಟಿಸಿದ್ದಾರೆ. ಈ ಚಿತ್ರದಲ್ಲಿ ಅರ್ಜುನ್ ಸರ್ಜಾ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಇದೀಗ ನಟ ಧ್ರುವ ಸರ್ಜಾ ಕೂಡ ಸೇರ್ಪಡೆಯಾಗಿದ್ದಾರೆ. ಸ್ಯಾಂಡಲ್‌ವುಡ್‌ನ ಆ್ಯಕ್ಷನ್ ಪ್ರಿನ್ಸ್ ತಮ್ಮ ಚಿಕ್ಕಪ್ಪ ಅರ್ಜುನ್ ಸರ್ಜಾ ಅವರ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಇಂದು ಚಿತ್ರೀಕರಣ ಪ್ರಾರಂಭಿಸಲಿದ್ದಾರೆ.

ಧ್ರುವ ತಮ್ಮ ಚಿಕ್ಕಪ್ಪನೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ತಮ್ಮ ಮುಂದೆ ಬರುವ ಪ್ರತಿಯೊಂದು ಕಥೆಯೂ ಅರ್ಜುನ್ ಸರ್ಜಾ ಅವರ ಮೂಲಕವೇ ಸಾಗುವಂತೆ ನೋಡಿಕೊಳ್ಳುತ್ತಾರೆ. ಪ್ರತಿ ಯೋಜನೆಗೂ ಅವರ ಸಲಹೆ ಮತ್ತು ಮಾರ್ಗದರ್ಶನ ಪಡೆಯುತ್ತಾರೆ.

ಅರ್ಜುನ್ ಸರ್ಜಾ ನಿರ್ದೇಶನದ ಕೊನೆಯ ಚಿತ್ರ 'ಪ್ರೇಮ ಬರಹ'ದಲ್ಲಿ ಧ್ರುವ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದರು. ಆದರೆ, ಸೀತಾ ಪಯಣ ಚಿತ್ರದಲ್ಲಿ ಧ್ರುವ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಇದರಲ್ಲಿ ಫೈಟ್ ಸೀಕ್ವೆನ್ಸ್ ಕೂಡ ಇದೆ.

ಧ್ರುವ ಸರ್ಜಾ ಅವರು ಜೋಗಿ ಪ್ರೇಮ್ ನಿರ್ದೇಶನದ ತಮ್ಮ ಮುಂಬರುವ ಚಿತ್ರ 'ಕೆಡಿ'ಗಾಗಿ ಸಜ್ಜಾಗುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರವು ಮೇ ತಿಂಗಳಲ್ಲಿ ಬಹು ಭಾಷೆಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಸಂಜಯ್ ದತ್ ಮತ್ತು ಶಿಲ್ಪಾ ಶೆಟ್ಟಿ ಸೇರಿದಂತೆ ಕನ್ನಡ ಮತ್ತು ಹಿಂದಿ ಚಿತ್ರರಂಗದ ಕೆಲವು ಜನಪ್ರಿಯ ನಟರು ಈ ಯೋಜನೆಯ ಭಾಗವಾಗಿದ್ದಾರೆ.

'ಸೀತಾ ಪಯಣ' ಚಿತ್ರವನ್ನು ಅರ್ಜುನ್ ಸರ್ಜಾ ಅವರ 'ಶ್ರೀ ರಾಮ್ ಫಿಲ್ಮ್ಸ್ ಇಂಟರ್ನ್ಯಾಷನಲ್' ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗುತ್ತಿದೆ. ಈ ಚಿತ್ರವು ತ್ರಿಭಾಷಾ ಯೋಜನೆಯಾಗಿದ್ದು, ಕನ್ನಡ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ತಯಾರಾಗುತ್ತಿದೆ. ಚಿತ್ರೀಕರಣವು ಈಗಾಗಲೇ ಅಂತಿಮ ಹಂತದಲ್ಲಿದೆ. ಚಿತ್ರಕ್ಕೆ ಅನುಪ್ ರೂಬೆನ್ಸ್ ಅವರು ಸಂಗೀತ ಸಂಯೋಜಿಸಿದ್ದಾರೆ.

ಸೀತಾ ಪಯಣಂ ಚಿತ್ರದ ಸ್ಟಿಲ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT