ಭುವನಂ ಗಗನಂ ಚಿತ್ರ ತಂಡದೊಂದಿಗೆ ನಟ ರವಿಚಂದ್ರನ್. 
ಸಿನಿಮಾ ಸುದ್ದಿ

25 ವಾರಕ್ಕಿದ್ದ ಶೀಲ್ಡ್ ಕೊಡುವ ಪರಿಪಾಠ ಈಗ 25 ದಿನಕ್ಕೆ ಇಳಿದಿದೆ, ಗೋಳಾಡಿದರೆ ಜನ ಸಿನಿಮಾ ನೋಡಲ್ಲ: ರವಿಚಂದ್ರನ್

ಚೆನ್ನಾಗಿದ್ದಾಗ ಜನ ಹುಡುಕಿಕೊಂಡು ಬಂದು ಚಿತ್ರಗಳನ್ನು ನೋಡಿದ್ದಾರೆ. ಜನ ಚಿತ್ರ ನೋಡುತ್ತಿಲ್ಲ ಎಂದು ಗೋಳಾಡಿದರೆ ಅವರು ಯಾವತ್ತೂ ಸಿನಿಮಾ ನೋಡುವುದಿಲ್ಲ,

ಕನ್ನಡ ಚಿತ್ರರಂಗದಲ್ಲಿ ಸದ್ಯಕ್ಕೆ ನಗುವಿಲ್ಲ. ಜನ ಚಿತ್ರಮಂದಿರಕ್ಕೆ ಬರುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಒಂದು ಚಿತ್ರ ಯಶಸ್ವಿ 25 ದಿನ ಪ್ರದರ್ಶನವಾಗಿರುವುದು ಖುಷಿಯ ವಿಚಾರ. ಜನ ಚಿತ್ರ ನೋಡುವುದಿಲ್ಲ ಎಂದು ಆರೋಪ ಮಾಡುವುದು ಸರಿಯಲ್ಲ. ಸಿನಿಮಾ ಚೆನ್ನಾಗಿದ್ದರೆ ಜನ ಬರುತ್ತಾರೆ ಅಷ್ಟೇ. ಅದಕ್ಕೆ ಬೇರೆ ಕಾರಣಗಳೇ ಇಲ್ಲ ಎಂದು ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಹೇಳಿದ್ದಾರೆ.

ಕಳೆದ ತಿಂಗಳು ಬಿಡುಗಡೆಯಾದ ಪೃಥ್ವಿ ಅಂಬಾರ್‍ ಮತ್ತು ಪ್ರಮೋದ್‍ ಅಭಿನಯದ ‘ಭುವನಂ ಗಗನಂ’ ಚಿತ್ರವು 25 ದಿನಗಳನ್ನು ಪೂರೈಸಿದೆ. ಈ ಸಂಭ್ರಮವನ್ನು ಹಂಚಿಕೊಳ್ಳುವುದಕ್ಕೆ ಚಿತ್ರದ ನಿರ್ಮಾಪಕ ಮುನೇಗೌಡ, ಸಮಾರಂಭ ಆಯೋಜಿಸಿ ಚಿತ್ರಕ್ಕಾಗಿ ದುಡಿದ ಕಲಾವಿದರು ಮತ್ತು ತಂತ್ರಜ್ಞರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ರವಿಚಂದ್ರನ್ ಅವರು, ಕನ್ನಡ ಚಿತ್ರರಂಗದಲ್ಲಿ ಸದ್ಯಕ್ಕೆ ನಗುವಿಲ್ಲ. ಜನ ಚಿತ್ರಮಂದಿರಕ್ಕೆ ಬರುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದರ ನಡುವಲ್ಲೇ ಚಿತ್ರವೊಂದು ಯಶಸ್ವಿ 25 ದಿನ ಪ್ರದರ್ಶನವಾಗಿರುವುದು ಖುಷಿಯ ವಿಚಾರ. ಜನ ಚಿತ್ರ ನೋಡುವುದಿಲ್ಲ ಎಂದು ಆರೋಪ ಮಾಡುವುದು ಸರಿಯಲ್ಲ. ಸಿನಿಮಾ ಚೆನ್ನಾಗಿದ್ದರೆ ಜನ ಬರುತ್ತಾರೆ ಅಷ್ಟೇ. ಅದಕ್ಕೆ ಬೇರೆ ಕಾರಣಗಳೇ ಇಲ್ಲ.

ಒಂದು ಚಿತ್ರ ಚೆನ್ನಾಗಿದ್ದರೆ ಜನ ಚಿತ್ರಮಂದಿರಕ್ಕೆ ನುಗ್ಗುತ್ತಾರೆ ಎನ್ನುವುದಕ್ಕೆ ‘ಪ್ರೇಮ ಲೋಕ’ ಚಿತ್ರವೇ ಸಾಕ್ಷಿ. ಚಿತ್ರ 100 ದಿನ ಆಗುವವರೆಗೂ ನಿಧಾನಕ್ಕೆ ಸಾಗಿತು. 100ನೇ ದಿನಕ್ಕೆ ಚಿತ್ರ ಸೂಪರ್‍ ಹಿಟ್ ಆಯಿತು. ಚೆನ್ನಾಗಿದ್ದಾಗ ಜನ ಹುಡುಕಿಕೊಂಡು ಬಂದು ಚಿತ್ರಗಳನ್ನು ನೋಡಿದ್ದಾರೆ. ಜನ ಚಿತ್ರ ನೋಡುತ್ತಿಲ್ಲ ಎಂದು ಗೋಳಾಡಿದರೆ ಅವರು ಯಾವತ್ತೂ ಸಿನಿಮಾ ನೋಡುವುದಿಲ್ಲ ಎಂದು ಹೇಳಿದರು.

ಇತ್ತೀಚಿನ ವರ್ಷಗಳಲ್ಲಿ ನಾವು ಶೀಲ್ಡ್‌ಗಳನ್ನು ನೋಡುವುದನ್ನೇ ಮರೆತುಬಿಟ್ಟಿದ್ದೇವೆ. ಈ ಹಿಂದೆಲ್ಲಾ ಚಿತ್ರ 25 ವಾರಗಳು ಪೂರೈಸಿದರೆ ಶೀಲ್ಟ್ ಕೊಡುವ ಪರಿಪಾಠವಿತ್ತು. ಈಗ ಅದು 25 ದಿನಕ್ಕೆ ಬಂದು ನಿಂತಿದೆ. ಜನ 25 ದಿನ ಸಿನಿಮಾ ನೋಡಿದರೆ ಸಾಕು ಎನ್ನುವಂತಾಗಿದೆ. ಅದರಲ್ಲಿ ತಪ್ಪೇನಿಲ್ಲ. ಆಗ ಚಿತ್ರ ಬಿಡುಗಡೆ ಮಾಡುತ್ತಿದ್ದುದಕ್ಕೂ, ಈಗ ಮಾಡುತ್ತಿರುವುದಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಆಗ ಕೆಲವು ಚಿತ್ರಮಂದಿರಗಳಲ್ಲಿ ಮಾತ್ರ ಚಿತ್ರ ಬಿಡುಗಡೆಯಾಗುತ್ತಿತ್ತು. ಈಗ ಏಕಕಾಲಕ್ಕೆ ಸಾವಿರಾರು ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ 25 ದಿನ ಓಡುವುದು ಸಹ ದೊಡ್ಡ ವಿಷಯ ಎಂದು ತಿಳಿಸಿದರು.

ಭುವನಂ ಗಗನಂ ಸಿನಿಮಾ ಲವ್, ರೋಮ್ಯಾನ್ಸ್, ಫ್ಯಾಮಿಲಿ ಎಮೋಷನ್ ಕಥಾಹಂದರ ಸಿನಿಮಾವಾಗಿದ್ದು, ನಗರ, ಹಳ್ಳಿ ಎರಡು ಬ್ಯಾಕ್ ಡ್ರಾಪ್ ನಲ್ಲಿ ನಡೆಯುವ ಕಥೆಯನ್ನು ಹೊಂದಿದೆ. ಪ್ರಮೋದ್ ಗೆ ಜೋಡಿಯಾಗಿ ಲವ್ ಮಾಕ್ಟೇಲ್ ಖ್ಯಾತಿಯ ರೆಚೆಲ್ ಡೇವಿಡ್, ಪೃಥ್ವಿಗೆ ಜೋಡಿಯಾಗಿ ಅಶ್ವಥಿ ನಟಿಸಿದ್ದಾರೆ.

ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ಸ್ಪರ್ಶ ರೇಖಾ, ಪ್ರಜ್ವಲ್ ಶೆಟ್ಟಿ, ಚೇತನ್ ದುರ್ಗ ತಾರಾಬಳಗದಲ್ಲಿದ್ದಾರೆ. ಉದಯ್ ಲೀಲಾ ಕ್ಯಾಮೆರಾ ಕೈಚಳಕ, ಗುಮ್ಮಿನೇನಿ ವಿಜಯ್, ಮ್ಯೂಸಿಕ್ ಕಿಕ್, ಸುನೀಲ್ ಕಶ್ಯಪ್ ಸಂಕಲನ, ಗಿರೀಶ್ ಮೂಲಿಮನಿ, ಪ್ರಸನ್ನ ವಿ ಸಂಭಾಷಣೆ ಸಿನಿಮಾಕ್ಕಿದೆ. ಚಿತ್ರವು ಪ್ರೇಮಿಗಳ ದಿನದಂದು ಬಿಡುಗಡೆಯಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT