ಶಿಹಾನ್‌ ಹುಸೇನಿ 
ಸಿನಿಮಾ ಸುದ್ದಿ

ತಮಿಳು ಖ್ಯಾತ ‌ನಟ, ಕರಾಟೆ ದಂತಕಥೆ ಶಿಹಾನ್‌ ಹುಸೇನಿ ಕ್ಯಾನ್ಸರ್‌ಗೆ ಬಲಿ!

ಹುಸೇನಿ ಅವರಿಗೆ ಪ್ರತಿದಿನ ಎರಡು ಯೂನಿಟ್ ರಕ್ತದ ಅವಶ್ಯಕತೆ ಇದ್ದು, ವೈದ್ಯಕೀಯ ವೆಚ್ಚವನ್ನು ಭರಿಸಲು ತಮ್ಮ ತರಬೇತಿ ಕೇಂದ್ರವನ್ನು ಮಾರಾಟ ಮಾಡಲು ನಿರ್ಧರಿಸಿದ್ದರು.

ಚೆನ್ನೈ: ತಮಿಳು ನಟ, ಕರಾಟೆ ದಂತಕಥೆ ಶಿಹಾನ್‌ ಹುಸೇನಿ ಅವರು ಇಂದು (ಮಂಗಳವಾರ) ನಿಧನರಾದರು. ಅವರಿಗೆ 60 ವರ್ಷ ವಯಸ್ಸಾಗಿತ್ತು. ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು.

ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಹುಸೇನಿ ಅವರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ. ಲ್ಯುಕೇಮಿಯಾದೊಂದಿಗೆ ಹೋರಾಟ ನಡೆಸಿದ್ದ ಹುಸೇನಿಯ ದೇಹವನ್ನು ಹೆಚ್ಚಿನ ವೈದ್ಯಕೀಯ ಸಂಶೋಧನೆಗಾಗಿ ದಾನ ಮಾಡಲಾಗಿದೆ ಎಂದು ಅಯ್ಯರ್ ತಿಳಿಸಿದ್ದಾರೆ.

ಕರಾಟೆ ತರಬೇತುದಾರರಾಗಿ ಹುಸೇನಿ ಖ್ಯಾತಿಯನ್ನು ಗಳಿಸಿದ್ದರು. 1986ರಲ್ಲಿ ಕಮಲ್ ಹಾಸನ್ ಅವರ ಪುನ್ನಗೈ ಮನ್ನನ್ ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದ್ದರು. ರಜನಿಕಾಂತ್ ಅವರ ವೆಲೈಕರಣ್ ಚಿತ್ರದಲ್ಲಿ ನಟಿಸಿದ್ದರು.

ಕಳೆದ ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದ ಹುಸೇನಿ ಅವರಿಗೆ ಇತ್ತೀಚೆಗೆ ಲ್ಯುಕೇಮಿಯಾ ಇರುವುದು ಪತ್ತೆಯಾಗಿತ್ತು. ತಮ್ಮ ಆರೋಗ್ಯದ ಬಗ್ಗೆ ಮಾತನಾಡಿದ ಅವರು, ತಮ್ಮ ಮಾಜಿ ವಿದ್ಯಾರ್ಥಿಗಳಾದ ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಮತ್ತು ತಮಿಳು ಸ್ಟಾರ್ ಹೀರೋ ವಿಜಯ್ ಅವರನ್ನು ಸಹಾಯ ಮಾಡುವಂತೆ ಕೋರಿದ್ದರು.

ಹುಸೇನಿ ಅವರಿಗೆ ಪ್ರತಿದಿನ ಎರಡು ಯೂನಿಟ್ ರಕ್ತದ ಅವಶ್ಯಕತೆ ಇದ್ದು, ವೈದ್ಯಕೀಯ ವೆಚ್ಚವನ್ನು ಭರಿಸಲು ತಮ್ಮ ತರಬೇತಿ ಕೇಂದ್ರವನ್ನು ಮಾರಾಟ ಮಾಡಲು ನಿರ್ಧರಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT