ಶಿಹಾನ್‌ ಹುಸೇನಿ 
ಸಿನಿಮಾ ಸುದ್ದಿ

ತಮಿಳು ಖ್ಯಾತ ‌ನಟ, ಕರಾಟೆ ದಂತಕಥೆ ಶಿಹಾನ್‌ ಹುಸೇನಿ ಕ್ಯಾನ್ಸರ್‌ಗೆ ಬಲಿ!

ಹುಸೇನಿ ಅವರಿಗೆ ಪ್ರತಿದಿನ ಎರಡು ಯೂನಿಟ್ ರಕ್ತದ ಅವಶ್ಯಕತೆ ಇದ್ದು, ವೈದ್ಯಕೀಯ ವೆಚ್ಚವನ್ನು ಭರಿಸಲು ತಮ್ಮ ತರಬೇತಿ ಕೇಂದ್ರವನ್ನು ಮಾರಾಟ ಮಾಡಲು ನಿರ್ಧರಿಸಿದ್ದರು.

ಚೆನ್ನೈ: ತಮಿಳು ನಟ, ಕರಾಟೆ ದಂತಕಥೆ ಶಿಹಾನ್‌ ಹುಸೇನಿ ಅವರು ಇಂದು (ಮಂಗಳವಾರ) ನಿಧನರಾದರು. ಅವರಿಗೆ 60 ವರ್ಷ ವಯಸ್ಸಾಗಿತ್ತು. ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು.

ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಹುಸೇನಿ ಅವರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ. ಲ್ಯುಕೇಮಿಯಾದೊಂದಿಗೆ ಹೋರಾಟ ನಡೆಸಿದ್ದ ಹುಸೇನಿಯ ದೇಹವನ್ನು ಹೆಚ್ಚಿನ ವೈದ್ಯಕೀಯ ಸಂಶೋಧನೆಗಾಗಿ ದಾನ ಮಾಡಲಾಗಿದೆ ಎಂದು ಅಯ್ಯರ್ ತಿಳಿಸಿದ್ದಾರೆ.

ಕರಾಟೆ ತರಬೇತುದಾರರಾಗಿ ಹುಸೇನಿ ಖ್ಯಾತಿಯನ್ನು ಗಳಿಸಿದ್ದರು. 1986ರಲ್ಲಿ ಕಮಲ್ ಹಾಸನ್ ಅವರ ಪುನ್ನಗೈ ಮನ್ನನ್ ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದ್ದರು. ರಜನಿಕಾಂತ್ ಅವರ ವೆಲೈಕರಣ್ ಚಿತ್ರದಲ್ಲಿ ನಟಿಸಿದ್ದರು.

ಕಳೆದ ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದ ಹುಸೇನಿ ಅವರಿಗೆ ಇತ್ತೀಚೆಗೆ ಲ್ಯುಕೇಮಿಯಾ ಇರುವುದು ಪತ್ತೆಯಾಗಿತ್ತು. ತಮ್ಮ ಆರೋಗ್ಯದ ಬಗ್ಗೆ ಮಾತನಾಡಿದ ಅವರು, ತಮ್ಮ ಮಾಜಿ ವಿದ್ಯಾರ್ಥಿಗಳಾದ ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಮತ್ತು ತಮಿಳು ಸ್ಟಾರ್ ಹೀರೋ ವಿಜಯ್ ಅವರನ್ನು ಸಹಾಯ ಮಾಡುವಂತೆ ಕೋರಿದ್ದರು.

ಹುಸೇನಿ ಅವರಿಗೆ ಪ್ರತಿದಿನ ಎರಡು ಯೂನಿಟ್ ರಕ್ತದ ಅವಶ್ಯಕತೆ ಇದ್ದು, ವೈದ್ಯಕೀಯ ವೆಚ್ಚವನ್ನು ಭರಿಸಲು ತಮ್ಮ ತರಬೇತಿ ಕೇಂದ್ರವನ್ನು ಮಾರಾಟ ಮಾಡಲು ನಿರ್ಧರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel