ಚಿತ್ರದ ಸ್ಟಿಲ್  
ಸಿನಿಮಾ ಸುದ್ದಿ

ಮೋಹನ್ ಲಾಲ್ ರ 'L2: Empuraan' ಚಿತ್ರ ಬಿಡುಗಡೆ: ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಚರ್ಚೆ

ಕೆಲವು ಬಲಪಂಥೀಯ ಸೋಷಿಯಲ್ ಮೀಡಿಯಾ ನಿರ್ವಾಹಕರು ಅಸಮಾಧಾನ ವ್ಯಕ್ತಪಡಿಸಿದ್ದು, ನಿರ್ದೇಶಕ ಪೃಥ್ವಿರಾಜ್ ಅವರು ಮೋಹನ್ ಲಾಲ್ ಮತ್ತು ಅವರ ಅಭಿಮಾನಿಗಳನ್ನು ವಂಚಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಕೊಚ್ಚಿ: ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರ ಬಹುನಿರೀಕ್ಷಿತ ಚಿತ್ರ 'L2: ಎಂಪುರಾನ್' ಚಿತ್ರ ಬಿಡುಗಡೆಯಾಗಿ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಕೆಲವು ವೀಕ್ಷಕರು ಇದನ್ನು ಬಲಪಂಥೀಯ ಸಿದ್ಧಾಂತಗಳನ್ನು ಅವಹೇಳನ ಮಾಡುವ ರಾಜಕೀಯ ಒಳನೋಟವನ್ನು ಹೊಂದಿದೆ ಎಂದು ಬಣ್ಣಿಸಿದ್ದಾರೆ.

ಕೆಲವು ಬಲಪಂಥೀಯ ಸೋಷಿಯಲ್ ಮೀಡಿಯಾ ನಿರ್ವಾಹಕರು ಅಸಮಾಧಾನ ವ್ಯಕ್ತಪಡಿಸಿದ್ದು, ನಿರ್ದೇಶಕ ಪೃಥ್ವಿರಾಜ್ ಅವರು ಮೋಹನ್ ಲಾಲ್ ಮತ್ತು ಅವರ ಅಭಿಮಾನಿಗಳನ್ನು ವಂಚಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಸನಾತನ ಧರ್ಮ'ದ ಫೇಸ್‌ಬುಕ್ ಪೋಸ್ಟ್‌ನಲ್ಲಿ ಪೃಥ್ವಿರಾಜ್ ಅವರು ಮೋಹನ್ ಲಾಲ್ ಮತ್ತು ಅವರ ಅಭಿಮಾನಿಗಳನ್ನು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೋಹನ್ ಲಾಲ್ ನಟಿಸಿದ ಇತ್ತೀಚಿನ 'ಎಂಪುರಾನ್' ಚಿತ್ರವು ಬಹಿರಂಗವಾಗಿ ಹಿಂದೂ ವಿರೋಧಿ ಚಿತ್ರವಾಗಿದ್ದು, ಭಾರತ ಸೇರಿದಂತೆ ಉಪಖಂಡದಾದ್ಯಂತ ನಡೆಯುತ್ತಿರುವ ಹಿಂದೂಗಳ ನರಮೇಧದ ನಡುವೆ ಹಿಂದೂಗಳನ್ನು ಖಳನಾಯಕರನ್ನಾಗಿ ಚಿತ್ರೀಕರಿಸಿದೆ ಎಂದು ಹಿಂದೂ ಸೇವಾ ಕೇಂದ್ರದ ಸ್ಥಾಪಕ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA)ದೊಂದಿಗೆ ಗುರುತಿಸಿಕೊಂಡ ವ್ಯಕ್ತಿ ಪ್ರತೀಶ್ ವಿಶ್ವನಾಥ್, ಚಲನಚಿತ್ರ ನಿರ್ಮಾಪಕರು ರಹಸ್ಯ ಅಜೆಂಡಾ ಹೊಂದಿದ್ದಾರೆಂದು ಆರೋಪಿಸಿದ್ದಾರೆ.

ಎಡಪಂಥೀಯ ಸೋಷಿಯಲ್ ಮೀಡಿಯಾ ಹ್ಯಾಂಡಲ್ ಗಳು, ಪೃಥ್ವಿರಾಜ್ ಅವರು ಸತ್ಯವಾದ ಕಥೆಯನ್ನು ಹೇಳುವ ಧೈರ್ಯ ತೋರಿಸಿದ್ದಾರೆ ಎಂದು ಹೊಗಳಲು ಪ್ರಾರಂಭಿಸಿದರು.

ಮಾಜಿ ಸಿಪಿಎಂ ರಾಜ್ಯ ಕಾರ್ಯದರ್ಶಿ ಮತ್ತು ಪೊಲಿಟ್‌ಬ್ಯೂರೋ ಸದಸ್ಯ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿ, ಚಲನಚಿತ್ರ ನಿರ್ಮಾಪಕರು ಸಾಕಷ್ಟು ಬಜೆಟ್ ನೊಂದಿಗೆ ಸತ್ಯವನ್ನು ಬಹಿರಂಗಪಡಿಸಲು ಪ್ರಯತ್ನಿಸಿದ್ದಕ್ಕಾಗಿ ಅಭಿನಂದನೆಗೆ ಅರ್ಹರು ಎಂದು ಪೋಸ್ಟ್ ಮಾಡಿದ್ದಾರೆ.

ಕೆಲವು ಎಡಪಂಥೀಯ ಸೋಷಿಯಲ್ ಮೀಡಿಯಾ ಹ್ಯಾಂಡಲ್ ಗಳು ಸಂಯಮವನ್ನು ವಹಿಸಿ, ಬಲಪಂಥೀಯ ಮತ್ತು ಬಿಜೆಪಿಯ ಬಗ್ಗೆ ಚಿತ್ರದ ಟೀಕೆಯ ಹೊರತಾಗಿಯೂ, ಅದು ಅವರ ಸಿದ್ಧಾಂತವನ್ನು ಸೂಕ್ಷ್ಮವಾಗಿ ಪ್ರಚಾರ ಮಾಡುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT