ಪೃಥ್ವಿ ಅಂಬಾರ್ - ದೀಕ್ಷಿತ್ ಶೆಟ್ಟಿ 
ಸಿನಿಮಾ ಸುದ್ದಿ

ಮತ್ತೆ ಒಂದಾಗುತ್ತಿದ್ದಾರೆ 'ದಿಯಾ' ಖ್ಯಾತಿಯ ಕೆಎಸ್ ಅಶೋಕ, ಪೃಥ್ವಿ ಅಂಬಾರ್, ದೀಕ್ಷಿತ್ ಶೆಟ್ಟಿ!

ಕಚ್ಚಾ ಮಾನವ ಭಾವನೆಗಳನ್ನು ಅನ್ವೇಷಿಸುವ ಸಂಕೀರ್ಣ ಕಥೆಗಳನ್ನು ಹೆಣೆಯುವುದಕ್ಕೆ ಹೆಸರುವಾಸಿಯಾದ ಅಶೋಕ ಈಗ, ಹಳ್ಳಿಯೊಂದರಲ್ಲಿ ನಡೆಯುವ ಸಾಮಾಜಿಕ ಕಥೆಯನ್ನು ತೆರೆಮೇಲೆ ತರಲು ಮುಂದಾಗಿದ್ದಾರೆ.

2020ರಲ್ಲಿ ತೆರೆಕಂಡು ವಿಮರ್ಷಾತ್ಮಕವಾಗಿ ವ್ಯಾಪಕ ಮೆಚ್ಚುಗೆ ಪಡೆದ ಚಿತ್ರ 'ದಿಯಾ' ನಂತರ ನಟ ದೀಕ್ಷಿತ್ ಶೆಟ್ಟಿ ಮತ್ತು ನಿರ್ದೇಶಕ ಕೆಎಸ್ ಅಶೋಕ ಮತ್ತೆ ಒಟ್ಟಿಗೆ ಕೆಲಸ ಮಾಡಲಿದ್ದಾರೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೆವು. ಇದೀಗ ಹೊಸ ವಿಚಾರವೆಂದರೆ, ಚಿತ್ರದ ಮತ್ತೊಬ್ಬ ಜನಪ್ರಿಯ ನಟ ಪೃಥ್ವಿ ಅಂಬಾರ್ ಕೂಡ ಈ ಚಿತ್ರತಂಡ ಸೇರಿಕೊಂಡಿದ್ದಾರೆ. ಚಿತ್ರದಲ್ಲಿ ಖುಷಿ ರವಿ ನಾಯಕಿಯಾಗಿ ನಟಿಸಿದ್ದರು. ದಿಯಾ ಚಿತ್ರವನ್ನು ಬಹು ಭಾಷೆಗಳಲ್ಲಿ ರೀಮೇಕ್ ಮಾಡಲಾಯಿತು. ಪೃಥ್ವಿ ಹಿಂದಿ ಮತ್ತು ಮರಾಠಿ ಆವೃತ್ತಿಗಳಲ್ಲಿ ನಟಿಸಿದರು.

ಕಚ್ಚಾ ಮಾನವ ಭಾವನೆಗಳನ್ನು ಅನ್ವೇಷಿಸುವ ಸಂಕೀರ್ಣ ಕಥೆಗಳನ್ನು ಹೆಣೆಯುವುದಕ್ಕೆ ಹೆಸರುವಾಸಿಯಾದ ಅಶೋಕ ಈಗ, ಹಳ್ಳಿಯೊಂದರಲ್ಲಿ ನಡೆಯುವ ಸಾಮಾಜಿಕ ಕಥೆಯನ್ನು ತೆರೆಮೇಲೆ ತರಲು ಮುಂದಾಗಿದ್ದಾರೆ. ಸ್ನೇಹ, ಪ್ರೀತಿ ಮತ್ತು ಜೀವನದ ಅನಿರೀಕ್ಷಿತ ತಿರುವುಗಳ ವಿಚಾರಗಳನ್ನು ಹೇಳಲು ಈ ಮೂವರು ಮತ್ತೆ ಒಂದಾಗುತ್ತಿದ್ದಾರೆ.

ಆಡಿಷನ್ ಪ್ರಕ್ರಿಯೆಯ ನಂತರ, ಅಶೋಕ ಅವರು ತಮ್ಮ ಮುಂದಿನ ಚಿತ್ರಕ್ಕೆ ನಟರಾದ ಪೃಥ್ವಿ ಮತ್ತು ದೀಕ್ಷಿತ್ ಅವರನ್ನು ಅಂತಿಮಗೊಳಿಸಿದ್ದಾರೆ. ಸಲಗ (2021) ಚಿತ್ರದಲ್ಲಿ ಜೂನಿಯರ್ ವಿಜಯ್ ಪಾತ್ರದ ಮೂಲಕ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದ ಶ್ರೀಧರ್ ಎಚ್ ಕೃಷ್ಣ ಕೂಡ ನಟಿಸುತ್ತಿದ್ದಾರೆ.

ದೇವಿಕಾ ಭಟ್ - ಕೆಎಸ್ ಅಶೋಕ್

ಅಶೋಕ ಅವರು ನಾಯಕಿಯಾಗಿ ದೇವಿಕಾ ಭಟ್ ಅವರನ್ನು ಸ್ಯಾಂಡಲ್‌ವುಡ್‌ಗೆ ಪರಿಚಯಿಸುತ್ತಿದ್ದಾರೆ. ಕಿರುತೆರೆಯಲ್ಲಿ ನಟಿಸಿದ್ದ ದೇವಿಕಾ ಇದೀಗ ದೊಡ್ಡ ಪರದೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎಸ್‌ಪಿಕೆ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನವೀನ್ ಎಸ್‌ಪಿ ನಿರ್ಮಿಸಿರುವ ಈ ಹೆಸರಿಡದ ಯೋಜನೆಯು ಸದ್ಯ ಸಿದ್ಧತೆಯ ಹಂತದಲ್ಲಿದ್ದು, ಏಪ್ರಿಲ್‌ನಲ್ಲಿ ಚಿತ್ರೀಕರಣ ಪ್ರಾರಂಭಿಸುವ ಯೋಜನೆ ಇದೆ.

ದೀಕ್ಷಿತ್ ತೆಲುಗು ಮತ್ತು ತಮಿಳು ಚಿತ್ರರಂಗಗಳಲ್ಲಿ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ್ದರೆ, ಪೃಥ್ವಿ ಅಂಬಾರ್ ಅನೇಕ ಯೋಜನೆಗಳಲ್ಲಿ ಬ್ಯುಸಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT