ಎಂ ಎಫ್ ಕಪಿಲ್  
ಸಿನಿಮಾ ಸುದ್ದಿ

ಕಾಂತಾರ 2: ನದಿಯಲ್ಲಿ ಮುಳುಗಿ ಕಿರಿಯ ಕಲಾವಿದ ಸಾವು, ಚಿತ್ರೀಕರಣ ತಾತ್ಕಾಲಿಕ ಸ್ಥಗಿತ

ಮೃತ ಕಲಾವಿದನನ್ನು ಎಂ ಎಫ್ ಕಪಿಲ್ ಎಂದು ಗುರುತಿಸಲಾಗಿದೆ. ಬುಧವಾರ ಈಜಲು ನದಿಗೆ ಇಳಿದಿದ್ದ ಎಂ ಎಫ್ ಕಪಿಲ್ ಅವರು ಬಲವಾದ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ.

ಉಡುಪಿ: ಮುಂಬರುವ ಕನ್ನಡ ಚಿತ್ರ 'ಕಾಂತಾರ: ಚಾಪ್ಟರ್ 1' ಚಿತ್ರೀಕರಣದ ವೇಳೆ ಕಿರಿಯ ಕಲಾವಿದರೊಬ್ಬರು ಉಡುಪಿ ಜಿಲ್ಲೆಯ ಸೌಪರ್ಣಿಕಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮೃತ ಕಲಾವಿದನನ್ನು ಎಂ ಎಫ್ ಕಪಿಲ್ ಎಂದು ಗುರುತಿಸಲಾಗಿದೆ. ಬುಧವಾರ ಈಜಲು ನದಿಗೆ ಇಳಿದಿದ್ದ ಎಂ ಎಫ್ ಕಪಿಲ್ ಅವರು ಬಲವಾದ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ.

ಅಗ್ನಿಶಾಮಕ ಇಲಾಖೆ ಮತ್ತು ಸ್ಥಳೀಯ ಅಧಿಕಾರಿಗಳು ತಕ್ಷಣ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಿ ನಿನ್ನೆ ರಾತ್ರಿಯೇ ಅವರ ಶವವನ್ನು ಹೊರತೆಗೆದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ ಅವರು ತಿಳಿಸಿದ್ದಾರೆ.

2022 ರಲ್ಲಿ ತೆರೆಕಂಡ 'ಕಾಂತಾರ' ಚಿತ್ರದಲ್ಲೂ ನಟಿಸಿದ್ದ ಕಪಿಲ್ 'ಕಾಂತಾರ: ಚಾಪ್ಟರ್ 1' ಸಿನಿಮಾದಲ್ಲಿ ಜೂನಿಯರ್ ಕಲಾವಿದರಾಗಿ ಅಭಿನಯಿಸುತ್ತಿದ್ದರು.

ಮುಂಬೈ ಮೂಲದ ಅಖಿಲ ಭಾರತ ಸಿನಿ ಕಾರ್ಮಿಕರ ಸಂಘ(ಎಐಸಿಡಬ್ಲ್ಯೂಎ), ಕೇರಳ ಮೂಲದ ಜೂನಿಯರ್ ಕಲಾವಿದ ಎಂ ಎಫ್ ಕಪಿಲ್ ಅವರ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಎಐಸಿಡಬ್ಲ್ಯೂಎ, ರಿಷಬ್ ಶೆಟ್ಟಿ ಮತ್ತು ಅವರ ಕಂಪನಿಯ ವಿರುದ್ಧ ಎಫ್‌ಐಆರ್ ದಾಖಲಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಮತ್ತು ಮೃತ ಕಲಾವಿದನ ಹತ್ತಿರದ ಸಂಬಂಧಿಕರಿಗೆ ೧ ಕೋಟಿ ರೂಪಾಯಿ ಪರಿಹಾರ ಘೋಷಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದೆ.

‘ಚಿತ್ರದ ನಿರ್ಮಾಪಕರಾದ ಹೊಂಬಾಳೆ ಫಿಲ್ಮ್ಸ್, ಕಪಿಲ್ ಸಾವು "ತುಂಬಾ ದುರದೃಷ್ಟಕರ" ಎಂದು ಹೇಳಿದ್ದು, ಈ ಘಟನೆಯು ಚಿತ್ರದ ಸೆಟ್‌ನಲ್ಲಿ ಅಥವಾ ಚಿತ್ರೀಕರಣದ ಸಮಯದಲ್ಲಿ ಸಂಭವಿಸಿಲ್ಲ, ಬದಲಿಗೆ ಚಿತ್ರೀಕರಣದ ಸ್ಥಳದಿಂದ ಸಾಕಷ್ಟು ದೂರದಲ್ಲಿ ಮತ್ತು ದಿನದ ಕೆಲಸ ಮುಗಿದ ನಂತರ ಸಂಭವಿಸಿದೆ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT