ರಾಕೇಶ್ ಪೂಜಾರಿ 
ಸಿನಿಮಾ ಸುದ್ದಿ

Comedy Khiladigalu season-3 ಖ್ಯಾತಿಯ ರಾಕೇಶ್‌ ಪೂಜಾರಿ ವಿಧಿವಶ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ‌ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದ್ದು, ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಉಡುಪಿ: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಸೋಮವಾರ ವಿಧಿವಶರಾಗಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ‌ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದ್ದು, ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಇಂದು (ಮೇ 12) ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ರಾಕೇಶ್ ಅವರ ಸಾವಿನ ವಿಚಾರವನ್ನು ನಟ ಹಾಗೂ ಅವರ ಆಪ್ತ ಶಿವರಾಜ್ ಕೆಆರ್​ ಪೇಟೆ ಅವರು ಖಚಿತಪಡಿಸಿದ್ದಾರೆ.

ರಾಕೇಶ್ ಅವರ ಸಾವು ಅವರ ಅಭಿಮಾನಿಗಳು ಹಾಗೂ ಆಪ್ತ ಬಳಗಕ್ಕೆ ಶಾಕ್ ನೀಡಿದ್ದು, ಸಾವಿಗೆ ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ.

ರಾಕೇಶ್ ಅವರು 2018 ರಲ್ಲಿ ಜೀ ಕನ್ನಡ ‘ಕಾಮಿಡಿ ಕಿಲಾಡಿಗಳು ಸೀಸನ್ 2’ಗೆ ಅವರು ಆಯ್ಕೆಯಾದರು. ರನ್ನರ್ ಅಪ್ ತಂಡದಲ್ಲಿ ಇದ್ದರು. ನಂತರದ ಸೀಸನ್ 3​ನಲ್ಲಿ ವಿನ್ನರ್ ಆದರು.

ಕನ್ನಡದ ‘ಪೈಲ್ವಾನ್’, ‘ಇದು ಎಂಥಾ ಲೋಕವಯ್ಯ’ ಚಿತ್ರಗಳಲ್ಲಿಯೂ ನಟಿಸಿದ್ದಾರೆ. ತುಳು ಭಾಷೆಯ ‘ಪೆಟ್ಕಮ್ಮಿ’, ‘ಅಮ್ಮೆರ್ ಪೊಲೀಸ್’ ಮೊದಲಾದ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT